ಆ್ಯಪ್ನಗರ

ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸ

ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2018-19ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್‌. ದ್ವಾರಕನಾಥ ನಾಯ್ಡು, ಕ್ಷೇತ್ರ ಶಿಕ್ಷ ಣಾಧಿಕಾರಿ ಜಯರಾಮರೆಡ್ಡಿ ಮಂಗಳವಾರ ನೀಡಿದರು.

Vijaya Karnataka 6 Feb 2019, 5:00 am
ಗುಡಿಬಂಡೆ: ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2018-19ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್‌. ದ್ವಾರಕನಾಥ ನಾಯ್ಡು, ಕ್ಷೇತ್ರ ಶಿಕ್ಷ ಣಾಧಿಕಾರಿ ಜಯರಾಮರೆಡ್ಡಿ ಮಂಗಳವಾರ ನೀಡಿದರು.
Vijaya Karnataka Web karnataka darshan tour for students
ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸ


ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷ ಣ ಇಲಾಖೆಗಳ ಸಹಯೋಗದೊಂದಿಗೆ ತಾಲೂಕಿನ ಆಯ್ದ ಪ್ರೌಢಶಾಲೆಯ 97 ವಿದ್ಯಾರ್ಥಿಗಳು ಹಾಗೂ ಶಿಕ್ಷ ಕರನ್ನು ಒಳಗೊಂಡ 2 ಬಸ್‌ಗಳನ್ನು 5 ದಿನಗಳ ಪ್ರವಾಸಕ್ಕೆ ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಬೀಳ್ಕೊಡಲಾಯಿತು.

ಪ್ರವಾಸ ಹೊರಡುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ, ಊಟ, ತಿಂಡಿ, ಉಳಿದುಕೊಳ್ಳಲು ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಕ್ಕೆ ಹೊರಡುವ ಮೊದಲು ಅವರಿಗೆ ನೋಟ್‌ ಪುಸ್ತಕ, ಬ್ಯಾಗ್‌, ಪೆನ್ನು, ಟೋಪಿ, ಟಿ ಶರ್ಟ್‌ ಹಾಗೂ ಗುರುತು ಪತ್ರಗಳನ್ನು ವಿತರಿಸಲಾಗಿದೆ. ಈ ಪ್ರವಾಸವು ಚಿತ್ರದುರ್ಗ, ಹಂಪೆ, ಟಿ.ಬಿ.ಡ್ಯಾಂ, ಕೂಡಲಸಂಗಮ, ಬಿಜಾಪುರ, ಐಹೊಳೆ, ಬಾದಾಮಿ, ಪಟ್ಟದಕಲ್ಲು, ಬನಶಂಕರಿ ಇತರೆ ಪ್ರವಾಸಿ ತಾಣಗಳನ್ನು ದರ್ಶನ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷ ಣಾಧಿಕಾರಿ ಜಯರಾಮರೆಡ್ಡಿ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆ ನಾಗೇಶ್‌, ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಕಾರ್ಯದರ್ಶಿ ಮುನಿಕೃಷ್ಣ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ತಿಪ್ಪಾರೆಡ್ಡಿ, ಸರಕಾರಿ ಪ್ರೌಢಶಾಲಾ ಶಿಕ್ಷ ಕರ ಸಂಘದ ರಾಮಕೃಷ್ಣ, ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷ ಕರ ಸಂಘದ ಅಧ್ಯಕ್ಷ ಬಾಲಾಜಿ, ಕಾರ್ಯದರ್ಶಿ ಶ್ರೀರಾಮರೆಡ್ಡಿ, ಖಜಾಂಚಿ ವಿ.ಶ್ರೀರಾಮಪ್ಪ, ಶಿಕ್ಷ ಣ ಇಲಾಖೆಯ ಟಿಪಿಒ ನಾರಾಯಣಸ್ವಾಮಿ, ಇಸಿಒ ಜಿ.ವಿ.ಚಂದ್ರಶೇಖರ್‌, ಮುಖ್ಯ ಶಿಕ್ಷ ಕಿ ಜಿ.ವಿ. ಗಂಗರತ್ನಮ್ಮ, ರಾಜಪ್ಪ, ನಾನಾ ಸರಕಾರಿ ಪ್ರೌಢಶಾಲಾ ಶಿಕ್ಷ ಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ