ಆ್ಯಪ್ನಗರ

KV ಕಟ್ಟಡಕ್ಕೆ 15 ಕೋಟಿ ಅನುದಾನ

ನಗರದ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕಾಗಿ ಮೊದಲ ಹಂತದ ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು , ಶೀಘ್ರದಲ್ಲೇ ಕಟ್ಟಡ ಕಾಮಗಾರಿನ್ನು ಪ್ರಾರಂಭಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ ರೆಡ್ಡಿ ಹೇಳಿದರು.

Vijaya Karnataka 2 Jun 2019, 5:00 am
ಗೌರಿಬಿದನೂರು:
ನಗರದ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕಾಗಿ ಮೊದಲ ಹಂತದ ಅನುದಾನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು , ಶೀಘ್ರದಲ್ಲೇ ಕಟ್ಟಡ ಕಾಮಗಾರಿನ್ನು ಪ್ರಾರಂಭಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರ ರೆಡ್ಡಿ ಹೇಳಿದರು.
Vijaya Karnataka Web CBP-1GBD-2


ನಗರದ ನೇತಾಜಿ ಕ್ರೀಡಾಂಗಣದ ಬಳಿಯಿರುವ ಕೇಂದ್ರೀಯ ವಿದ್ಯಾಲಯಕ್ಕೆ ಭೇಟಿ ನೀಡಿ, ಕೇಂದ್ರೀಯ ವಿದ್ಯಾಲಯಕ್ಕೆ ಕಟ್ಟಡದ ವ್ಯವಸ್ಥೆಯಿಲ್ಲದ ಕಾರಣ ತಾತ್ಕಾಲಿಕವಾಗಿ ರೇಷ್ಮೆ ಇಲಾಖಾ ಕಟ್ಟಡದಲ್ಲಿ ಶಾಲೆಯನ್ನು ಪ್ರಾರಂಭಿಸಿದ್ದು, ಕುರುಬರಹಳ್ಳಿ ಬಳಿ ಕಟ್ಟಡಕ್ಕೆ ಸ್ಥಳವನ್ನು ನಿಗದಿ ಪಡಿಸಲಾಗಿದೆ. ಕೇಂದ್ರದಿಂದ 15 ಕೋಟಿ ರೂ. ಬಿಡುಗಡೆಯಾಗಿದೆ. ಟೆಂಡರ್‌ ಪ್ರಕ್ರಿಯೆ ಮುಗಿದ ಬಳಿಕೆ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.

ವರದಾನ: ಕೇಂದ್ರೀಯ ವಿದ್ಯಾಲಯಕ್ಕೆ ನಗರದಲ್ಲಿ ಅನುಮತಿ ದೊರೆತಿರುವುದು ಬಡವರ ಹಾಗೂ ಇತರೆ ವರ್ಗಗಳ ಮಕ್ಕಳಿಗೆ ವರದಾನವಾಗಿದೆ ಎಂದರು.

ಮಕ್ಕಳಿಗೆ ಕಲಿಕೆಯ ಜತೆಗೆ ಇನ್ನಿತರ ಕ್ರೀಡಾ ಚಟುವಟಿಕೆಗಳ ಕಡೆಗೂ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಇದರಿಂದ ಮಕ್ಕಳು ಮಾನಸಿಕವಾಗಿ ಸದೃಢರಾಗಲು ಹೆಚ್ಚು ಸಹಕಾರಿಯಾಗುತ್ತದೆ ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.

ಪ್ರಾಂಶುಪಾಲ ಚರ್ತುವೇದಿ ಮಾತನಾಡಿ, ವಿದ್ಯಾಲಯದಲ್ಲಿ 1 ರಿಂದ 6ನೇ ತರಗತಿಯವರೆಗೆ ಪ್ರಾರಂಭವಾಗಿದ್ದು ಇದೀಗ 7ನೇ ತರಗತಿಯೂ ಪ್ರಾರಂಭವಾಗಿದ್ದು ಉತ್ತಮ ಫಲಿತಾಂಶ ಬಂದಿದೆ. ಮಕ್ಕಳಿಗೆ ಪಠ್ಯಪುಸ್ತಕಗಳ ಜತೆಗೆ ಕ್ರೀಡಾ ಚಟುವಟಿಕೆಗಳಿಗೂ ಅವಕಾಶ ಕಲ್ಪಸಲಾಗುತ್ತಿದೆ ಎಂದು ತಿಳಿಸಿದರು.

ನಗರಸಭೆ ಮಾಜಿ ಉಪಾಧ್ಯಕ್ಷ ಆರ್‌.ಪಿ.ಗೋಪಿನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ನರಸಿಂಹಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಎಸ್‌.ಎನ್‌.ಮಂಜುನಾಥ್‌, ಮುಖಂಡರಾದ ಶ್ಯಾಂಶಂಕರ್‌ರಾವ್‌, ಪುಟ್ಟಣ್ಣ, ಅರುಣ್‌ಕುಮಾರ್‌, ನವೀನ್‌, ನಾರಾಯಣಸ್ವಾಮಿ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ