ಆ್ಯಪ್ನಗರ

ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತ: ಪ್ರವಾಸಿಗರ ಪರದಾಟ..

ಮಂಗಳವಾರ ರಾತ್ರಿ ಸುರಿದ ಮಳೆಗೆ ಪ್ರವಾಸಿ ತಾಣ ನಂದಿ ಬೆಟ್ಟದ 10 ನೇ ತಿರುವಿನ ಬಳಿಯ ರಂಗಪ್ಪ ತಿರುವಿನಲ್ಲಿ ನೀರಿನ ರಭಸಕ್ಕೆ ಗುಡ್ಡವೊಂದು ಕುಸಿದಿದೆ. ಹೀಗಾಗಿ, ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದೆ.

Vijaya Karnataka Web 25 Aug 2021, 4:31 pm
ಚಿಕ್ಕಬಳ್ಳಾಪುರ: ಮಂಗಳವಾರ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಗುಡ್ಡ ಕುಸಿದಿದೆ. ಹೀಗಾಗಿ, ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದ್ದು, ರಸ್ತೆ ಸರಿಪಡಿಸಲು ಅಧಿಕಾರಿಗಳು ಹರಸಾಹಸ ಪಡುವಂತಾಗಿದೆ.
Vijaya Karnataka Web nandi hills
ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತ: ಪ್ರವಾಸಿಗರ ಪರದಾಟ..


ಕಳೆದ ಮೂರು ದಿನಗಳಿಂದ ಈ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ರೈತರ ಮೊಗದಲ್ಲಿ ಸಂತಸದ ವಾತಾವರಣ ನೆಲೆಸಿತ್ತು. ಆದ್ರೆ, ಮಂಗಳವಾರ ರಾತ್ರಿ ಸುರಿದ ಮಳೆಗೆ ಪ್ರವಾಸಿ ತಾಣ ನಂದಿ ಬೆಟ್ಟದ 10 ನೇ ತಿರುವಿನ ಬಳಿಯ ರಂಗಪ್ಪ ತಿರುವಿನಲ್ಲಿ ನೀರಿನ ರಭಸಕ್ಕೆ ಗುಡ್ಡವೊಂದು ಕುಸಿದಿದೆ. ಹೀಗಾಗಿ, ರಸ್ತೆ ಮಾರ್ಗ ಸಂಪೂರ್ಣ ಬಂದ್ ಆಗಿದೆ.

ಈ ಕಾರಣದಿಂದಾಗಿ ಮುಂಜಾನೆಯೇ ಪ್ರಕೃತಿ ಸೌಂದರ್ಯ ಸವಿಯಲು ನಂದಿ ಬೆಟ್ಟಕ್ಕೆ ಬರುತ್ತಿದ್ದ ಪ್ರವಾಸಿಗರನ್ನು ಪೊಲೀಸರು ತಡೆದು ವಾಪಸ್ ಕಳಿಸಲು ಆರಂಭಿಸಿದರು. 10 ಅಡಿಯಷ್ಟು ಮಣ್ಣು ಮಳೆಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ವಿದ್ಯುತ್ ಕಂಬಗಳು, ಬೃಹತ್ ಮರಗಳೂ ಧರೆಗುರುಳಿವೆ.

ನಂದಿ ಬೆಟ್ಟದ ಪಾರ್ಕಿಂಗ್‌ ಸಾಮರ್ಥ್ಯಕ್ಕೆ ಅನುಗುಣವಾಗಿ ಪ್ರವಾಸಿಗರಿಗ ಎಂಟ್ರಿ..!
ಇನ್ನೊಂದೆಡೆ ಮಂಗಳವಾರ ರಾತ್ರಿ ನಂದಿ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಇದೀಗ ವಾಪಸ್ ಬರಲಾಗದೆ ಪರದಾಡುವಂತಾಗಿದೆ. ಸಿಬ್ಬಂದಿ ಇದೀಗ ಮಣ್ಣನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದೆ. ಈ ಭಾಗದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಅನಾಹುತ ಸಂಭವಿಸಿದೆ.

ಮಂಗಳವಾರ ರಾತ್ರಿಯಿಂದ ನಂದಿ ಗಿರಿ ಧಾಮದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿದ್ದು,ಗಿರಿಧಾಮದಲ್ಲಿ‌ ತಂಗಿದ್ದ ಪ್ರವಾಸಿಗರು ರಾತ್ರಿಯಿಡೀ ತೊಂದರೆಗೆ ಸಿಲುಕುವಂತಾಯ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ