ಆ್ಯಪ್ನಗರ

ಸ್ವಾಸ್ಥ್ಯ ಸಮಾಜಕ್ಕೆ ಕಾನೂನು ಅರಿವು ಮುಖ್ಯ

ಪ್ರತಿಯೊಬ್ಬರಲ್ಲಿ ಕಾನೂನು ಅರಿವು ಮೂಡಿದಾಗ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ದೇಶದ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ತಿಳಿಸಿದರು.

Vijaya Karnataka 30 May 2019, 5:00 am
ಚಿಕ್ಕಬಳ್ಳಾಪುರ: ಪ್ರತಿಯೊಬ್ಬರಲ್ಲಿ ಕಾನೂನು ಅರಿವು ಮೂಡಿದಾಗ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ. ದೇಶದ ಅಭಿವೃದ್ಧಿಗೆ ಇದು ಪೂರಕವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಎಸ್‌.ಎಚ್‌.ಕೋರಡ್ಡಿ ತಿಳಿಸಿದರು.
Vijaya Karnataka Web legal awareness is important for the wellness society
ಸ್ವಾಸ್ಥ್ಯ ಸಮಾಜಕ್ಕೆ ಕಾನೂನು ಅರಿವು ಮುಖ್ಯ


ತಾಲೂಕಿನ ಎಸ್‌.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಯಾಲಗೆರೆ ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕೆಂಪೇಗೌಡ ಕಾನೂನು ಕಾಲೇಜು, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ, ಜಿಲ್ಲಾ ಆರೋಗ್ಯ ಕಲ್ಯಾಣ ಇಲಾಖೆ ಸಹಯೋಗಲ್ಲಿ ಬುಧವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ ಮತ್ತು ಪರಿಸರ ಸಂರಕ್ಷ ಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾನೂನು ತಿಳಿವಳಿಕೆ ಕೊರತೆಯಿಂದ ಅಪರಾಧ ಘಟಿಸಿದರೆ ಅದಕ್ಕೆ ಕ್ಷ ಮೆ ಇಲ್ಲ. ಪ್ರತಿಯೊಬ್ಬರೂ ಸಾಮಾನ್ಯ ಕಾನೂನುಗಳನ್ನು ತಿಳಿದುಕೊಳ್ಳುವುದು ಅಗತ್ಯವಿದೆ. ಸಂವಿಧಾನ ಆಶಯದಂತೆ ನಮ್ಮ ಹಕ್ಕುಗಳ ಜತೆಯಲ್ಲಿ ಕರ್ತವ್ಯಗಳ ಜವಾಬ್ದಾರಿಯೂ ಬೇಕು. ಹಾಗಾಗಿ ಎಲ್ಲರಿಗೂ ಕಾನೂನು ಬಗ್ಗೆ ಅರಿವು ಮೂಡಿಸಲು ನ್ಯಾಯಾಂಗ ಇಲಾಖೆ ಶ್ರಮಿಸುತ್ತಿದೆ. ಪ್ರತಿಯೊಬ್ಬರು ಕಾನೂನು ಗೌರವಿಸಿ, ಪಾಲನೆ ಮಾಡಬೇಕು ಎಂದು ಹೇಳಿದರು.

ವ್ಯಕ್ತಿ ಆರೋಗ್ಯವಂತ ಜೀವನ ನಡೆಸಲು ಪರಿಸರ ಸಂರಕ್ಷ ಣೆ ಎಷ್ಟು ಮುಖ್ಯವೋ ಕಾನೂನು ಪಾಲನೆ ಅಷ್ಟೇ ಮುಖ್ಯ. ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಪರಿಸರ ಸಂರಕ್ಷ ಣೆ ಮಾಡಬೇಕು. ಪ್ರತಿಯೊಬ್ಬರು ಒಂದು ಸಸಿಯನ್ನಾದರೂ ನೆಟ್ಟು ಬೆಳೆಸಿದರೆ ಜೀವನ ಸಾರ್ಥಕವಾಗುತ್ತದೆ. ಜತೆಗೆ ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ಹೆಚ್‌.ದೇವರಾಜ್‌ ಮಾತನಾಡಿ, ಕಾನೂನಿನ ಜ್ಞಾನ ಇಲ್ಲದೆ ಮನುಷ್ಯ ಅನೇಕ ತೊಂದರೆಗಳಿಗೆ ಸಿಲುಕುವುದು ಅನಿವಾರ್ಯ. ಹಾಗಾಗಿ ಎಲ್ಲರಲ್ಲೂ ಕಾನೂನು ತಿಳಿವಳಿಕೆ ಬೇಕು ಎಂದರು.

ಕೆಂಪೇಗೌಡ ಕಾನೂನು ಕಾಲೇಜಿನ ಪ್ರಿನ್ಸಿಪಾಲ್‌ ಬಿ.ಜಿ.ಶೋಭಾ, ಸಂಪೂನ್ಮಲ ವ್ಯಕ್ತಿ ಶ್ರೀನಾಥ್‌ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ