ಆ್ಯಪ್ನಗರ

ಮಿಟ್ಟಹಳ್ಳಿ ಗ್ರಾಪಂನಲ್ಲಿ ಸ್ವಚ್ಛ ಭಾರತ ಯೋಜನೆಯಲ್ಲಿ ಭಾರಿ ಅವ್ಯವಹಾರ

ಸ್ವಚ್ಛ ಭಾರತ ಯೋಜನೆಯಡಿ ನಿರ್ಮಾಣ ಮಾಡಲಾದ ಶೌಚಾಲಯ ಹಣ ದುರುಪಯೋಗ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಿಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ ಅವರ ಪತಿ ವೆಂಕಟರವಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ಬಂಧನ ಖಂಡಿಸಿ ಮಿಟ್ಟಹಳ್ಳಿ ಗ್ರಾಮಸ್ಥರು ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

Vijaya Karnataka 30 May 2019, 5:00 am
ಚಿಂತಾಮಣಿ ಗ್ರಾಮಾಂತರ: ಸ್ವಚ್ಛ ಭಾರತ ಯೋಜನೆಯಡಿ ನಿರ್ಮಾಣ ಮಾಡಲಾದ ಶೌಚಾಲಯ ಹಣ ದುರುಪಯೋಗ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮಿಟ್ಟಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ ಅವರ ಪತಿ ವೆಂಕಟರವಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದು, ಬಂಧನ ಖಂಡಿಸಿ ಮಿಟ್ಟಹಳ್ಳಿ ಗ್ರಾಮಸ್ಥರು ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Vijaya Karnataka Web mittalahalli gram panchayat is a massive scandal in the clean india project
ಮಿಟ್ಟಹಳ್ಳಿ ಗ್ರಾಪಂನಲ್ಲಿ ಸ್ವಚ್ಛ ಭಾರತ ಯೋಜನೆಯಲ್ಲಿ ಭಾರಿ ಅವ್ಯವಹಾರ


ಛಲವಾದಿ ಮಹಾಸಭಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ವೆಂಕಟರಮಣಪ್ಪ ಅವರನ್ನು ಏಕಾಏಕಿ ಬಂಧಿಸಿರುವುದನ್ನು ಖಂಡಿಸಿದರು.

ಏನಿದು ಪ್ರಕರಣ?:
ತಾಲೂಕಿನ ಚಿಲಕಲನೇರ್ಪು ಹೋಬಳಿ ಮಿಟ್ಟಹಳ್ಳಿ ಗ್ರಾಪಂನಲ್ಲಿ ಸ್ವಚ್ಛ ಭಾರತ ಮಿಷನ್‌ ಯೋಜನೆಯಡಿ ಶೌಚಾಲಯಗಳ ನಿರ್ಮಾಣ ಮಾಡಲಾಗಿತ್ತು. ಅದರಲ್ಲಿ ಗ್ರಾಪಂ ಅಧ್ಯಕ್ಷರ ಪತಿ ವೆಂಕಟರಮಣಪ್ಪ ಅವರು ಪಿಡಿಒ ಲಕ್ಷ್ಮೀಪತಿ, ಕರ ವಸೂಲಿಗಾರ ಶ್ರೀನಾಥ್‌, ಕಂಪ್ಯೂಟರ್‌ ಅಪರೇಟರ್‌ ಶೋಭಾ ಅವರೊಂದಿಗೆ ಸೇರಿಕೊಂಡು ಯಾವುದೇ ಕಾಮಗಾರಿ ನಡೆಸದೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತರು ತನಿಖೆ ನಡೆಸಿದ್ದು, ತನಿಖೆಯಲ್ಲಿ ಆರೋಪ ಸಾಬೀತಾಗಿತ್ತು.

ಕ್ರಿಮಿನಲ್‌ ಪ್ರಕರಣ ದಾಖಲು: 2016-17 ಹಾಗೂ 2017-18ನೇ ಸಾಲಿನಲ್ಲಿ ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಲ್ಲಿ ಲಕ್ಷಾಂತರ ರೂ. ದುರುಪಯೋಗ ಪಡಿಸಿಕೊಂಡು ಅಕ್ರಮವೆಸಗಿದ್ದು, ಈ ಸಂಬಂಧ ಮಿಟ್ಟಹಳ್ಳಿ ಗ್ರಾಪಂ ಅಧ್ಯಕ್ಷ , ಉಪಾಧ್ಯಕ್ಷ , ಪಿಡಿಒ ಹಾಗೂ ಗ್ರಾಪಂ ಇತರೆ ಸಿಬ್ಬಂದಿ ವಿರುದ್ಧ ಕೆಂಚಾರ್ಲಹಳ್ಳಿ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಾಗಿತ್ತು. ಅದರಂತೆ ಮಂಗಳವಾರ ರಾತ್ರಿ ಕೆಂಚಾರ್ಲಹಳ್ಳಿ ಪೊಲೀಸರು ವೆಂಕಟರವಣಪ್ಪನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಂಧನ ಖಂಡಿಸಿ ಪ್ರತಿಭಟನೆ: ಪೊಲೀಸರು ಯಾವುದೇ ವಿಚಾರಣೆಯನ್ನು ನಡೆಸದೇ ವೆಂಕಟರಮಣಪ್ಪರನ್ನು ಏಕಾಏಕಿ ಬಂಧಿಸಿರುವುದನ್ನು ಖಂಡಿಸಿ, ಮಿಟ್ಟಹಳ್ಳಿ ಗ್ರಾಮಸ್ಥರು ಠಾಣೆಯ ಮುಂದೆ ಪ್ರತಿಭಟನೆ ಮಾಡಿದರು.

ಪ್ರತಿಭಟನೆ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಗ್ರಾಮಾಂತರ ಠಾಣೆಯ ಆರಕ್ಷ ಕ ವೃತ್ತ ನಿರೀಕ್ಷ ಕ ನಯಾಜ್‌ಬೇಗ್‌, ವೆಂಕಟರವಣಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೆ ಕರತಂದಿದ್ದು, ವಿಚಾರಣೆ ಮುಗಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇನೆ. ನ್ಯಾಯಾಲಯಕ್ಕೆ ಹೋಗಿ ತಾವು ನ್ಯಾಯ ಪಡೆಯಬಹುದು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್‌, ಮಾಜಿ ಶಾಸಕ ಎಂ.ಸಿ.ಸುಧಾಕರ್‌ ಬೆಂಬಲಿಗರಾದ ಮಾದಮಂಗಲ ಚಂದ್ರಪ್ಪ, ಬೂರಗಮಾಕಲಹಳ್ಳಿ ಮಂಜುನಾಥ್‌, ಛಲವಾದಿ ಮಹಾಸಭಾದ ಮುಖಂಡರು ಹಾಗೂ ಮಿಟ್ಟಹಳ್ಳಿ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ