ಆ್ಯಪ್ನಗರ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಪ್ರಸಕ್ತ ಶೂಕ್ಷ ಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು 1,292 ಬಾಲಕರು, 1,249 ಬಾಲಕಿಯರು ಸೇರಿ ಒಟ್ಟು 2,541 ವಿದ್ಯಾರ್ಥಿಗಳು ಎದುರಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಶ್ರೀನಿವಾಸ್‌ ತಿಳಿಸಿದರು.

Vijaya Karnataka 21 Mar 2019, 5:00 am
ಶಿಡ್ಲಘಟ್ಟ: ಪ್ರಸಕ್ತ ಶೂಕ್ಷ ಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು 1,292 ಬಾಲಕರು, 1,249 ಬಾಲಕಿಯರು ಸೇರಿ ಒಟ್ಟು 2,541 ವಿದ್ಯಾರ್ಥಿಗಳು ಎದುರಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಶ್ರೀನಿವಾಸ್‌ ತಿಳಿಸಿದರು.
Vijaya Karnataka Web preparation for sslc examination
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 170 ಕೊಠಡಿಗಳನ್ನು ಪರೀಕ್ಷೆಗಾಗಿ ಸಿದ್ಧಪಡಿಸಿದ್ದು, ಪರೀಕ್ಷಾರ್ಥಿಗಳಿಗೆ ಕುಡಿವ ನೀರು ಸೇರಿ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಪರೀಕ್ಷಾ ಪಾವಿತ್ರ್ಯತೆ, ಪಾರದರ್ಶಕತೆ ಹಾಗೂ ಮಕ್ಕಳ ಶೈಕ್ಷ ಣಿಕ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಕೊಠಡಿಗೂ ತಲಾ ಒಬ್ಬರಂತೆ 170 ಮಂದಿ ಕೊಠಡಿ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗೃತ ದಳ ಸಿಬ್ಬಂದಿ, ಕಸ್ಟೋಡಿಯನ್‌, ಅಧೀಕ್ಷ ಕರನ್ನು ನೇಮಕ ಮಾಡಲಾಗಿದೆ. ತಾಲೂಕಿನಲ್ಲಿ ಇಡೀ ಪರೀಕ್ಷಾ ವ್ಯವಸ್ಥೆಯ ಉಸ್ತುವಾರಿಯನ್ನು ನಾನೇ ನೋಡಿಕೊಳ್ಳಲಿದ್ದು, ಪರೀಕ್ಷಾ ನೋಡೆಲ್‌ ಅಧಿಕಾರಿಯಾಗಿ ಇಸಿಒ ಭಾಸ್ಕರ್‌ಗೌಡ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ಬಿಸಿಲಿನ ತಾಪದಲ್ಲಿ ಸಾಕಷ್ಟು ಏರಿಕೆ ಕಂಡು ಬರುತ್ತಿದ್ದು, ಪರೀಕ್ಷಾರ್ಥಿಗಳ ದೈಹಿಕ ಆರೋಗ್ಯ ದೃಷ್ಟಿಯಿಂದಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬೊಬ್ಬರು ಆರೋಗ್ಯ ಇಲಾಖೆಯ ಎಎನ್‌ಎಂ ಸಿಬ್ಬಂದಿಯನ್ನು ನೇಮಿಸುವಂತೆ ಆರೋಗ್ಯಾಧಿಕಾರಿಗಳನ್ನು ಕೋರಲಾಗಿದೆ. ಹಾಗೆಯೇ ಪರೀಕ್ಷಾ ಅಕ್ರಮ ತಡೆದು ಸುಗಮವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಪೊಲೀಸ್‌ ಸಿಬ್ಬಂದಿಯನ್ನು ಪರೀಕ್ಷಾ ಕೇಂದ್ರದ ಬಳಿ ನಿಯೋಜಿಸಲು ಸಿಪಿಐ ಅವರನ್ನು, ಅಲ್ಲದೆ ಸುಗಮವಾಗಿ ಪರೀಕ್ಷೆ ನಡೆಸಲು ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ನೆರವು ಸಹಕಾರವನ್ನು ಕೋರಲಾಗಿದೆ ಎಂದು ವಿವರಿಸಿದರು.

10 ಪರೀಕ್ಷಾ ಕೇಂದ್ರ: ತಾಲೂಕಿನಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನಗರದ ಸರಕಾರಿ ಪ್ರೌಢಶಾಲೆ(313 ವಿದ್ಯಾರ್ಥಿಗಳು), ಹನುಮಂತಪುರ ಗೇಟ್‌ನ ಬಿಜಿಎಸ್‌ ಪ್ರೌಢಶಾಲೆ(262), ನಲ್ಲಿಮರದಹಳ್ಳಿಯ ಡಾಲ್ಫಿನ್‌ ಪಬ್ಲಿಕ್‌ ಶಾಲೆ(255), ನಗರದ ವಾಸವಿ ಪ್ರೌಢಶಾಲೆ(252), ಜಂಗಮಕೋಟೆಯ ಸರಕಾರಿ ಪ್ರೌಢಶಾಲೆಯಲ್ಲಿ 200 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.
ಹಾಗೆಯೇ ಜಂಗಮಕೋಟೆಯ ಜ್ಯೋತಿ ಪ್ರೌಢಶಾಲೆ(245), 11ನೇ ಮೈಲಿಗಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ(345), ಬಶೆಟ್ಟಹಳ್ಳಿಯ ಸರಕಾರಿ ಪ್ರೌಢಶಾಲೆ(228), ಮೇಲೂರು ಸರಕಾರಿ ಪ್ರೌಢಶಾಲೆ(254), ಕದಿರಿನಾಯಕನಹಳ್ಳಿಯ ಎಸ್‌ಆರ್‌ಇಟಿ ಶಾಲೆಯಲ್ಲಿ 184 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ