ಆ್ಯಪ್ನಗರ

ಬ್ಲಾಕ್‌ ಕಾಂಗ್ರೆಸ್‌ನ ಎಸ್‌ಸಿ ವಿಭಾಗದ ಅಧ್ಯಕ್ಷ ಮೃತ

ತಾಲೂಕಿನ ಮುಂಗಾನಹಳ್ಳಿ ಹೋಬಳಿಯ ಬ್ಲಾಕ್‌ ಕಾಂಗ್ರೆಸ್‌ನ ಎಸ್‌ಸಿ ವಿಭಾಗದ ಅಧ್ಯಕ್ಷ ಪೆದ್ದೂರು ವೆಂಕಟರಮಣಪ್ಪ (40)ಭಾನುವಾರು ಮುಂಜಾನೆ ಮೃತಪಟ್ಟಿದ್ದಾರೆ...

Vijaya Karnataka 11 Feb 2019, 5:00 am
ಚಿಂತಾಮಣಿ: ತಾಲೂಕಿನ ಮುಂಗಾನಹಳ್ಳಿ ಹೋಬಳಿಯ ಬ್ಲಾಕ್‌ ಕಾಂಗ್ರೆಸ್‌ನ ಎಸ್‌ಸಿ ವಿಭಾಗದ ಅಧ್ಯಕ್ಷ ಪೆದ್ದೂರು ವೆಂಕಟರಮಣಪ್ಪ (40)ಭಾನುವಾರು ಮುಂಜಾನೆ ಮೃತಪಟ್ಟಿದ್ದಾರೆ.
Vijaya Karnataka Web president of the sc division of block congress peddur venkataramappa died
ಬ್ಲಾಕ್‌ ಕಾಂಗ್ರೆಸ್‌ನ ಎಸ್‌ಸಿ ವಿಭಾಗದ ಅಧ್ಯಕ್ಷ ಮೃತ


ಶನಿವಾರ ರಾತ್ರಿ ಹೃದಯಾಘಾತದಿಂದ ಶ್ರೀನಿವಾಸಪುರದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ಹಲವು ವರ್ಷಗಳಿಂದ ಕೋಲಾರ ಲೋಕಸಭೆ ಕ್ಷೇತ್ರದ ಸಂಸದ ಕೆ.ಎಚ್‌.ಮುನಿಯಪ್ಪ ಅವರ ಅನುಯಾಯಿಯಾಗಿ ಗುರುತಿಸಿಕೊಂಡಿದ್ದ ವೆಂಕಟರಮಣಪ್ಪ, ಕೆಲವೇ ದಿನಗಳ ಹಿಂದೆ ಮುಂಗಾನಹಳ್ಳಿ ಹೋಬಳಿ ಎಸ್‌ಸಿ ವಿಭಾಗದ ಅಧ್ಯಕ್ಷ ರಾಗಿದ್ದರು.

ಕೆಎಚ್‌ ವಿರುದ್ಧ ಆಕ್ರೋಶ: ಪಕ್ಷ ದ ನಿಷ್ಠಾವಂತ ಕಾರ್ಯಕರ್ತರೊಬ್ಬರು ಇಹಲೋಕವನ್ನು ತ್ಯಜಿಸಿರುವ ವಿಚಾರ ತಿಳಿದಿದ್ದರೂ, ಚಿಕ್ಕಬಳ್ಳಾಪುರ ಜಿಲ್ಲೆಯ ವಿದುರಾಶ್ವತ್ಥಕ್ಕೆ ಬಂದಿದ್ದ ಸಂಸದ ಕೆ.ಎಚ್‌.ಮುನಿಯಪ್ಪ ಅವರು ಮೃತರ ಗ್ರಾಮಕ್ಕೆ ಭೇಟಿ ಮಾಡಿ, ಕುಟುಂಬಕ್ಕೆ ಸಾಂತ್ವನ ಹೇಳುವ ಸೌಜನ್ಯ ತೋರಿಲ್ಲ ಎಂದು ಅವರ ನಡೆಯನ್ನು ತಾಲೂಕಿನ ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖಂಡರಾದ ವೀರಪ್ಪರೆಡ್ಡಿ, ಕೋಡಿಹಳ್ಳಿ ಶಿವಾರೆಡ್ಡಿ, ಗ್ಯಾಸ್‌ ಶ್ರೀನಿವಾಸ್‌, ನಾರಮಾಕಲಹಳ್ಳಿ ಕೃಷ್ಣ, ಕೋನಪ್ಪಲ್ಲಿ ಕೋದಂಡ, ಫೋಟೊ ನಾರಾಯಣಪ್ಪ, ಮಿಲ್ಟ್ರಿ ಶ್ರೀನಿವಾಸ್‌, ಕರಕಮಾಕಲಹಳ್ಳಿ ಸುಬ್ಬರೆಡ್ಡಿ, ಪೆದ್ದೂರು ನಾಗರಾಜರೆಡ್ಡಿ, ಮುನಿರೆಡ್ಡಿ, ಅಥಾವುಲ್ಲ, ಚಿನ್ನಸಂದ್ರ ನಾರಾಯಣಸ್ವಾಮಿ ಮುಂತಾದವರು ಮೃತರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು, ಕುಟುಂಬದವರಿಗೆ ಸಾಂತ್ವನ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ