ಆ್ಯಪ್ನಗರ

ಆಧಾರ್‌ ಕೇಂದ್ರ ತೆರೆಯಲು ಒತ್ತಾಯಿಸಿ ಪ್ರತಿಭಟನೆ

ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೂ ಕೂಡ ಆಧಾರ್‌ ಕಾರ್ಡ್‌ ತಿದ್ದುಪಡಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾವೇದಿಕೆ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

Vijaya Karnataka 17 Jul 2019, 5:00 am
ಪ್ರತಿ ಗ್ರಾಪಂ ಹಾಗೂ ನಾಡಕಚೇರಿಯಲ್ಲಿ ಆಧಾರ್‌ ತಿದ್ದುಪಡಿ ಕೇಂದ್ರಕ್ಕೆ ಆಗ್ರಹ
Vijaya Karnataka Web protest demanding opening of aadhaar center
ಆಧಾರ್‌ ಕೇಂದ್ರ ತೆರೆಯಲು ಒತ್ತಾಯಿಸಿ ಪ್ರತಿಭಟನೆ

ಚಿಂತಾಮಣಿ:
ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೂ ಕೂಡ ಆಧಾರ್‌ ಕಾರ್ಡ್‌ ತಿದ್ದುಪಡಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾವೇದಿಕೆ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ತಾಲೂಕಿಗೆ ಒಂದೇ ಕೇಂದ್ರ: ಸರಕಾರದ ಪ್ರತಿಯೊಂದು ಯೋಜನೆಯ ಸೌಲಭ್ಯವನ್ನು ಪಡೆಯಲು ಆಧಾರ್‌ ಕಾರ್ಡ್‌ ಕಡ್ದಾಯವಾಗಿದ್ದು, ತಾಲೂಕಿನಾದ್ಯಂತಹ ಎಲ್ಲ ನಾಡಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಈ ಹಿಂದೇ ಆಧಾರ್‌ ಕಾರ್ಡ್‌ ಕೇಂದ್ರಗಳನ್ನು ತೆಗೆಯಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಇತ್ತಿಚಿಗೆ ನೆಟ್‌ವರ್ಕ್‌ ಸಮಸ್ಯೆಯಿಂದ ನಾಡಕಚೇರಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್‌ ಕಾರ್ಡ್‌ ತೆಗೆಯುವುದನ್ನು ನಿಲ್ಲಿಸಿದ್ದಾರೆ. ತಾಲೂಕಿಗೆಲ್ಲ ಸೇರಿ ಚಿಂತಾಮಣಿ ನಗರದ ಎಸ್‌ಬಿಐ ಬ್ಯಾಂಕ್‌ನಲ್ಲಿ ಮಾತ್ರ ಆಧಾರ್‌ ಕಾರ್ಡ್‌ ತೆಗೆಯಲಾಗುತ್ತಿದೆ ಎಂದು ದೂರಿದರು.

ಜನರ ಪರದಾಟ: ಆಧಾರ್‌ ಕಾರ್ಡ್‌ ಪಡೆಯಲು ಟೋಕನ್‌ನ್ನು ಮೂರು ತಿಂಗಳಿಗೊಮ್ಮೆ ನೀಡುತ್ತಿರುವ ಕಾರಣ ಬೆಳಗ್ಗೆ 5ಗಂಟೆಗೆ ದೂರದ ಊರುಗಳಿಂದ ಬಂದ ಮಕ್ಕಳು, ವಯೋವೃದ್ಧರು ಹಾಗೂ ಸಾರ್ವಜನಿಕರು ಬ್ಯಾಂಕ್‌ ಬಳಿ ಸರತಿ ಸಾಲಿನಲ್ಲಿ ನಿಂತು ಪರದಾಡುತ್ತಿದ್ದಾರೆ.

ಸರಕಾರ ಕೂಡಲೇ ಎಚ್ಚೆತ್ತುಕೊಂಡು ಪ್ರತಿಯೊಂದು ನಾಡಕಚೇರಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಆಧಾರ್‌ ಕಾರ್ಡ್‌ ತಿದ್ದುಪಡಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ಕರ್ನಾಟಕ ಪ್ರಜಾವೇದಿಕೆ ಪದಾಧಿಕಾರಿಗಳು ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಜಾಥಾ ಆರಂಭಿಸಿ, ನಗರ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಸರಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ತದನಂತರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿ, ತಹಸೀಲ್ದಾರ್‌ ಮುಖಾಂತರ ಜಿಲ್ಲಾಧಿಕಾರಿಗಳಿಗೆ ತಮ್ಮ ಬೇಡಿಕೆಗಳ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ರಂಜಾನ್‌ ಮಾತನಾಡಿ, ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡಿಕೊಡಲು ತಾಲೂಕಿಗೆಲ್ಲ ಸೇರಿ ನಗರದ ಭಾರತೀಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕಿನಲ್ಲಿ ಕೇಂದ್ರವನ್ನು ತೆರೆಯಲಾಗಿದೆ. ಅಲ್ಲಿ ಮೂರು ತಿಂಗಳಿಗೊಮ್ಮೆ ಆಧಾರ್‌ ತಿದ್ದುಪಡಿ ಮಾಡಲು ಟೋಕನ್‌ ವಿತರಣೆ ಮಾಡುತ್ತಾರೆ. ಹಾಗಾಗಿ ಆಧಾರ್‌ ತಿದ್ದುಪಡಿ ಮಾಡಿಸಲು ಸಾರ್ವಜನಿಕರು ಪರದಾಡುವಂತಾಗಿದೆ. ಕೂಡಲೇ ಸರಕಾರ ಪ್ರತಿಯೊಂದು ನಾಡಕಚೇರಿಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಆಧಾರ್‌ ಕಾರ್ಡ್‌ ತಿದ್ದುಪಡಿ ಕೇಂದ್ರಗಳನ್ನು ತೆರೆಯಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಜಾವೇದಿಕೆಯ ತಾಲೂಕು ಅಧ್ಯಕ್ಷ ಜಿಯಾಉಲ್ಲಾ, ನಗರ ಘಟಕದ ಅಧ್ಯಕ್ಷ ರಿಯಾಜ್‌ ಪಾಷಾ, ಕಾರ್ಯದರ್ಶಿ ದಸ್ತಗಿರಿ, ಮುಬಾರಕ್‌, ಇನಾಯುತುಲ್ಲಾ ಬೇಗ್‌, ಬಾಲು ಸೇರಿದಂತೆ ಮತಿತ್ತರರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ