ಆ್ಯಪ್ನಗರ

ಸರಕಾರಿ ಸೌಲಭ್ಯ ಪಡೆಯಲು ನೋಂದಣಿ ಸಹಕಾರಿ: ಕೃಷಿ ಸಚಿವ

ಕಾರ್ಮಿಕ ಇಲಾಖೆಯಲ್ಲಿ ಕೂಲಿ ಕಾರ್ಮಿಕರು ನೋಂದಣಿ ಮಾಡಿಸಿದರೆ ಸರಕಾರದ ಕಾರ್ಮಿಕ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್‌. ಎಚ್‌. ಶಿವಶಂಕರ ರೆಡ್ಡಿ ತಿಳಿಸಿದರು.

Vijaya Karnataka 7 Jan 2019, 5:00 am
ಗೌರಿಬಿದನೂರು: ಕಾರ್ಮಿಕ ಇಲಾಖೆಯಲ್ಲಿ ಕೂಲಿ ಕಾರ್ಮಿಕರು ನೋಂದಣಿ ಮಾಡಿಸಿದರೆ ಸರಕಾರದ ಕಾರ್ಮಿಕ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್‌. ಎಚ್‌. ಶಿವಶಂಕರ ರೆಡ್ಡಿ ತಿಳಿಸಿದರು.
Vijaya Karnataka Web registration cooperative for government facility agriculture minister
ಸರಕಾರಿ ಸೌಲಭ್ಯ ಪಡೆಯಲು ನೋಂದಣಿ ಸಹಕಾರಿ: ಕೃಷಿ ಸಚಿವ


ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ತಾಲೂಕು ಕಾರ್ಮಿಕ ಸಂಘಟನೆ ಹಾಗೂ ಎನ್‌ಎಚ್‌ಎಸ್‌ ಇಂಡಸ್ಟ್ರೀಸ್‌ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಮಿಕರಿಗೆ ಫಲಾನುಭವಿ ನೋಂದಣಿ, ಪರಿಹಾರ ನಿಧಿ ವಿತರಣೆ ಹಾಗೂ ಚಾಲಕರಿಗೆ ಪರವಾನಗಿ ಹಾಗೂ ಬ್ಯಾಡ್ಜ್‌ ನೋಂದಣಿ ಪತ್ರ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಗೌರಿಬಿದನೂರು ತಾಲೂಕಿನಲ್ಲಿ ಬಹುತೇಕ ಅಸಂಘಟಿತ ಕೂಲಿ ಕಾರ್ಮಿಕರಿದ್ದು, ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿದರೆ ಇಲಾಖೆಯಿಂದ ಕೂಲಿ ಕಾರ್ಮಿಕರಿಗೆ ಸಿಗುವ ಸವಲತ್ತುಗಳನ್ನು ಪಡೆಯಲು ಸಹಕಾರಿಯಾಗುತ್ತದೆ. ತಾಲೂಕಿನಲ್ಲಿ ಪ್ರಸ್ತುತ 2,000 ಕೂಲಿ ಕಾರ್ಮಿಕರ ನೋಂದಣಿಯಾಗಿದ್ದು, ಮುಂದಿನ ವರ್ಷದ ಜನವರಿ ವೇಳೆಗೆ ಕನಿಷ್ಟ ಹತ್ತು ಸಾವಿರ ಕೂಲಿ ಕಾರ್ಮಿಕರ ನೋಂದಣಿ ಆಗಬೇಕು. ಕಾರ್ಮಿಕರ ನೋಂದಣಿಯ ಶುಲ್ಕವನ್ನು ನಾನೇ ಭರಿಸುತ್ತೇನೆ, ನೋಂದಣಿ ಮಾಡಿಸಿ ಎಂದು ಕಾರ್ಮಿಕ ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ವೆಂಕಟಾದ್ರಿ ಮಾತನಾಡಿ, ತಾಲೂಕಿನಲ್ಲಿ ಕಳೆದ 7 ವರ್ಷಗಳ ಹಿಂದೆ ಸಂಘವನ್ನು ಪ್ರಾರಂಭಿಸಿ, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗುತ್ತಿದೆ. ತಾಲೂಕಿನಲ್ಲಿ ಮರಣ ಹೊಂದಿದ ಕಾರ್ಮಿಕರಿಗೆ 5 ಲಕ್ಷ ರೂ. ಸಹಾಯಧನ, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2ರಿಂದ10 ಸಾವಿರದವರೆಗಿನ ವಿದ್ಯಾರ್ಥಿ ವೇತನ ಹಾಗೂ ನಾನಾ ಸವಲತ್ತುಗಳನ್ನು ಕಾರ್ಮಿಕ ಇಲಾಖೆಯಿಂದ ಕೊಡಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮರಣ ಹೊಂದಿದ ಇಬ್ಬರು ಕಾರ್ಮಿಕರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಧನದ ಚೆಕ್‌ ಹಾಗೂ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕ್‌ ಅನ್ನು ಸಚಿವರು ವಿತರಿಸಿದರು. ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಕೃಷಿ ಸಚಿವರನ್ನು ಸನ್ಮಾನಿಸಲಾಯಿತು.

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಹನುಮಂತರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎನ್‌. ಕೇಶವ ರೆಡ್ಡಿ, ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ, ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ಜಯಂಧರ್‌, ನಗರಸಭೆ ಅಧ್ಯಕ್ಷ ಷಫೀಕ್‌ ಖಾನ್‌, ಉಪಾಧ್ಯಕ್ಷ ಗೋಪಿನಾಥ್‌, ಜಿಲ್ಲಾ ಕಾರ್ಮಿಕ ಅಧಿಕಾರಿ ಸೋಮಶೇಖರ್‌, ತಾಲೂಕು ಕಾರ್ಮಿಕ ನಿರೀಕ್ಷ ಕ ಸುರೇಂದ್ರ, ನಗರಸಭೆ ಸದಸ್ಯ ಜಿ.ಬಾಲಾಜಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್ಲಾ, ಮುಖಂಡರಾದ ವೆಂಕಟ್‌, ವೇದಲವೇಣಿ ವೇಣು, ಕಲ್ಲಿನಯಕನಹಳ್ಳಿ ಮುನಿಯಪ್ಪ ಹಾಗೂ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ