ಆ್ಯಪ್ನಗರ

ಚಿಕ್ಕಬಳ್ಳಾಪುರ: ದ್ರಾಕ್ಷಿ, ಮಾವು ವಿಶೇಷ ಬೆಳೆ ವಿಮೆ ನೋಂದಣಿಗೆ ಆಹ್ವಾನ

ಈ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ದ್ರಾಕ್ಷಿ ಹಾಗೂ ಮಾವು ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಜಿಲ್ಲೆಯ 6 ತಾಲೂಕುಗಳಲ್ಲೂ ರೈತರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ.

Vijaya Karnataka Web 28 Jun 2020, 11:15 pm
ಚಿಕ್ಕಬಳ್ಳಾಪುರ: 2020ನೇ ಮುಂಗಾರು ಹಂಗಾಮಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನ ಮಾವು ಮತ್ತು ದ್ರಾಕ್ಷಿ ಬೆಳೆಗಳನ್ನು ಯೋಜನೆಗೆ ಒಳಪಡಿಸಲಾಗಿದೆ.
Vijaya Karnataka Web registration start for weather based crop insurance of grapes and mango farming
ಚಿಕ್ಕಬಳ್ಳಾಪುರ: ದ್ರಾಕ್ಷಿ, ಮಾವು ವಿಶೇಷ ಬೆಳೆ ವಿಮೆ ನೋಂದಣಿಗೆ ಆಹ್ವಾನ


ದ್ರಾಕ್ಷಿ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 2 ಲಕ್ಷ 80 ಸಾವಿರ ರೂ. ವಿಮಾ ಮೊತ್ತವನ್ನು ನಿಗದಿಪಡಿಸಲಾಗಿದೆ. ಶೇ.5ರಷ್ಟು ಕಂತಿನ ಮೊತ್ತವನ್ನು 14,000 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಮಾವು ಬೆಳೆಗೆ ಪ್ರತಿ ಹೆಕ್ಟೇರ್‌ಗೆ 80,000 ಸಾವಿರ ವಿಮಾ ಮೊತ್ತ ನಿಗದಿಪಡಿಸಲಾಗುತ್ತಿದೆ. ಶೇ.5ರಷ್ಟು ಕಂತಿನ ಮೊತ್ತ 4,000 ರೂ.ಗಳನ್ನು ಪಾವತಿಸಬೇಕಾಗುತ್ತದೆ.

ಬೆಳೆ ಸಾಲ ಪಡೆದ ರೈತರು ಹಾಗೂ ಸಾಲ ಪಡೆಯದ ರೈತರು ವಿಮಾ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ದ್ರಾಕ್ಷಿ ಬೆಳೆಗಾರರು ನೋಂದಣಿ ಮಾಡಿಸಲು ಜೂನ್‌ 30 ಕೊನೆಯ ದಿನವಾಗಿದ್ದರೆ, ಮಾವು ಬೆಳೆಗಾರರು ವಿಮಗೆ ನೋಂದಣಿ ಮಾಡಿಸಲು ಜುಲೈ 31 ಅಂತಿಮ ದಿನವಾಗಿದೆ.

ಬ್ಯಾಂಕ್‌ನಲ್ಲಿ ಸಾಲ ಮಂಜೂರಾದ ರೈತರು ನೋಂದಣಿ ಮಾಡಿಕೊಳ್ಳಲು ಇಚ್ಛಿಸದಿದ್ದಲ್ಲಿ ಅರ್ಜಿ ಸಲ್ಲಿಕೆಗೂ ಅಂತಿಮ ದಿನದ 7 ದಿನಗಳ ಮುಂಚೆ ಸಂಬಂಧಪಟ್ಟ ಬ್ಯಾಂಕ್‌ ವ್ಯವಸ್ಥಾಪಕರಿಗೆ ಮುಚ್ಚಳಿಕೆ ಬರೆದುಕೊಡಬೇಕಾಗಿದೆ. ಯೋಜನೆಯ ಲಾಭವನ್ನು ಜಿಲ್ಲೆಯ ರೈತರು ಪಡೆಯಬೇಕೆಂದು ಜಿಲ್ಲಾ ತೋಟಗಾರಿಕಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ