ಆ್ಯಪ್ನಗರ

ಬೋವಿ ಸಮುದಾಯದ ಬೇಡಿಕೆ ಈಡೇರಿಕೆಗಾಗಿ ಮನವಿ

ನಾಡಹಬ್ಬಗಳು ಹಾಗೂ ದಲಿತರ ಕುಂದುಕೊರತೆಗಳ ಸಭೆಗಳಿಗೆ ಬೋವಿ ಸಮುದಾಯದವರನ್ನು ಕರೆಯದೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಬೋವಿ ಮಹಾಸಭಾದ ಜಿಲ್ಲಾಧ್ಯಕ್ಷ ಎಂ. ಗುರ್ರಪ್ಪ ನೇತೃತ್ವದಲ್ಲಿ ಚಿಕ್ಕಬಳ್ಳಾಪುರದ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

Vijaya Karnataka 21 Apr 2019, 9:34 pm
ಚಿಂತಾಮಣಿ ಗ್ರಾಮಾಂತರ: ನಾಡಹಬ್ಬಗಳು ಹಾಗೂ ದಲಿತರ ಕುಂದುಕೊರತೆಗಳ ಸಭೆಗಳಿಗೆ ಬೋವಿ ಸಮುದಾಯದವರನ್ನು ಕರೆಯದೆ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಬೋವಿ ಮಹಾಸಭಾದ ಜಿಲ್ಲಾಧ್ಯಕ್ಷ ಎಂ. ಗುರ್ರಪ್ಪ ನೇತೃತ್ವದಲ್ಲಿ ಚಿಕ್ಕಬಳ್ಳಾಪುರದ ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
Vijaya Karnataka Web request for fulfillment of the bowie community demand
ಬೋವಿ ಸಮುದಾಯದ ಬೇಡಿಕೆ ಈಡೇರಿಕೆಗಾಗಿ ಮನವಿ


ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ, ಕಳೆದ ಎರಡು ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡೆಯುವ ರಾಷ್ಟ್ರೀಯ ಹಾಗೂ ನಾಡಹಬ್ಬಗಳು, ದಲಿತರ ಕುಂದು ಕೊರತೆ ಸಭೆಗೆ ಸಮುದಾಯದವರನ್ನು ಅಧಿಕಾರಿಗಳು ಆಹ್ವಾನಿಸುತ್ತಿಲ್ಲ. ಅಲ್ಲದೇ, ಇತ್ತೀಚೆಗೆ ಸಮುದಾಯದವರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಚಿಂತಾಮಣಿ ತಾಲೂಕಿನ ಹುಲುಗುಮ್ಮನಹಳ್ಳಿಯಲ್ಲಿ ಸಮುದಾಯದ ವ್ಯಕ್ತಿಯ ಕೊಲೆ, ಕೋಲಾರ ಜಿಲ್ಲೆಯ ಬೇತಮಂಗಲದಲ್ಲಿ ಜಾತಿ ನಿಂದನೆ ಸೇರಿದಂತೆ ಹಲವು ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಇವುಗಳನ್ನೆಲ್ಲ ಪರಿಶೀಲಿಸಿ ದಲಿತರಿಗೆ ಸೂಕ್ತ ನ್ಯಾಯ, ರಕ್ಷಣೆ ನೀಡಬೇಕು. ದಲಿತರ ಕುಂದುಕೊರತೆ ಸಭೆ ಹಾಗೂ ನಾಡಹಬ್ಬಗಳಿಗೆ ಸಮುದಾಯವರನ್ನು ಆಹ್ವಾನಿಸಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ಸಮುದಾಯದ ಕುಲಗುರುಗಳಾದ ಚಿತ್ರದುರ್ಗದ ಇಮ್ಮಡಿ ಸಿದ್ಧರಾಮೇಶ್ವರ ನಿರಂಜನ ಸ್ವಾಮೀಜಿ ಮೇಲೆ ಚುನಾವಣಾಧಿಕಾರಿಗಳು ಹಾಕಿರುವ ಎಫ್‌ಐಆರ್‌ನ್ನು ರದ್ದುಪಡಿಸಬೇಕು. ಇಲ್ಲವಾದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಶಿಡ್ಲಘಟ್ಟ ಬೋವಿ ಮಹಾಸಭಾದ ತಾಲೂಕು ಅಧ್ಯಕ್ಷ ಶ್ರೀನಿವಾಸ್‌, ಗಂಗುಲಪ್ಪ, ನಾರಾಯಣಸ್ವಾಮಿ, ಚಂದ್ರಶೇಖರ್‌, ರಮೇಶ್‌, ಮಹೇಂದ್ರ, ಶ್ರೀರಾಮಪ್ಪ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ