ಆ್ಯಪ್ನಗರ

ತಾಲೂಕು ಜೆಡಿಎಸ್‌ನಿಂದ ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನಾಚರಣೆ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ 86ನೇ ಹುಟ್ಟು ಹಬ್ಬದ ಅಂಗವಾಗಿ ತಾಲೂಕು ಜೆಡಿಎಸ್‌ನಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ಒಳ ರೋಗಿಗಳು ಹಾಗೂ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

Vijaya Karnataka 21 May 2018, 4:06 pm
ಶಿಡ್ಲಘಟ್ಟ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ 86ನೇ ಹುಟ್ಟು ಹಬ್ಬದ ಅಂಗವಾಗಿ ತಾಲೂಕು ಜೆಡಿಎಸ್‌ನಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿನ ಒಳ ರೋಗಿಗಳು ಹಾಗೂ ಆಶಾಕಿರಣ ಅಂಧ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.
Vijaya Karnataka Web the birth anniversary of the former prime minister deve gowda from taluk jds
ತಾಲೂಕು ಜೆಡಿಎಸ್‌ನಿಂದ ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನಾಚರಣೆ


ಆಶಾಕಿರಣ ಅಂಧ ಮಕ್ಕಳ ಶಾಲೆಯ ಆವರಣದಲ್ಲಿ ಕೇಕ್‌ ಕತ್ತರಿಸಿ ಎಲ್ಲರಿಗೂ ಹಂಚುವ ಮೂಲಕ ಎಚ್‌.ಡಿ.ದೇವೇಗೌಡರ ಹುಟ್ಟು ಹಬ್ಬವನ್ನು ಆಚರಿಸಿದ ಜೆಡಿಎಸ್‌ ಮುಖಂಡರು ದೇವೇಗೌಡರಿಗೆ ಶುಭಾಷಯಗಳನ್ನು ಕೋರಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮುಖಂಡ ಮೇಲೂರು ರವಿಕುಮಾರ್‌ ಮಾತನಾಡಿ, ಇದುವರೆಗೂ ರಾಜಕೀಯ ಮಾಡಿಕೊಂಡು ಬಂದಂತೆಯೆ ಮುಂದಿನ ದಿನಗಳಲ್ಲೂ ರಾಜಕೀಯ ಹೆಜ್ಜೆಯನ್ನು ಇಡುತ್ತೇನೆ ಎಂದರು.

ಸೋಲಿನಿಂದ ಹತಾಶನಾಗಿಲ್ಲ. ಬದಲಿಗೆ ಮುಂದಿನ ದಿನಗಳಲ್ಲಿ ಎದುರಾಗುವ ಎಲ್ಲ ಹಂತದ ಚುನಾವಣೆಗಳನ್ನೂ ಸಹ ಧೈರ್ಯದಿಂದ ಎದುರಿಸಲಿದ್ದೇನೆ, ಕಾರ್ಯಕರ್ತರಿಗೆ, ನನಗೆ ಮತ ಹಾಕಿದ ಮತದಾರರಿಗೆ ಯಾವುದೆ ರೀತಿಯಲ್ಲಿ ತೊಂದರೆ ಆಗಲು ಬಿಡುವುದಿಲ್ಲ ಎಂದು ಹೇಳಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಡಿ.ಬಿ.ವೆಂಕಟೇಶ್‌, ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಮುನಿಯಪ್ಪ, ಸಯ್ಯದ್‌ ಅಹ್ಮದ್‌, ಆದಿಲ್‌ ಪಾಷ, ಹುಜಗೂರು ರಾಮಯ್ಯ ಇನ್ನಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ