ಆ್ಯಪ್ನಗರ

ಇಂದು ಜಿಲ್ಲೆಗೆ ಜಲಶಕ್ತಿ ಅಭಿಯಾನದ ಕೇಂದ್ರ ತಂಡ

ಭಾರತ ಸರಕಾರವು ಜಲಭದ್ರತೆಗಾಗಿ ಜಲಶಕ್ತಿ ಎಂಬ ಕಾರ್ಯಕ್ರಮವನ್ನು ರಾಜ್ಯ ಸರಕಾರಗಳ ಸಹಯೋಗದಲ್ಲಿಎರಡನೇ ಹಂತದಲ್ಲಿಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಕೇಂದ್ರ ಸರಕಾರದ ಉನ್ನತ ಅಧಿಧಿಕಾರಿಗಳ ತಂಡವು ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಸ್ಟ್‌ 28 ಮತ್ತು 29ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

Vijaya Karnataka 28 Aug 2019, 2:44 pm
ಚಿಕ್ಕಬಳ್ಳಾಪುರ: ಭಾರತ ಸರಕಾರವು ಜಲಭದ್ರತೆಗಾಗಿ ಜಲಶಕ್ತಿ ಎಂಬ ಕಾರ್ಯಕ್ರಮವನ್ನು ರಾಜ್ಯ ಸರಕಾರಗಳ ಸಹಯೋಗದಲ್ಲಿಎರಡನೇ ಹಂತದಲ್ಲಿಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಕೇಂದ್ರ ಸರಕಾರದ ಉನ್ನತ ಅಧಿಧಿಕಾರಿಗಳ ತಂಡವು ಚಿಕ್ಕಬಳ್ಳಾಪುರ ಜಿಲ್ಲೆಗೆ ಆಗಸ್ಟ್‌ 28 ಮತ್ತು 29ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.
Vijaya Karnataka Web the central team of the water power campaign for the district today
ಇಂದು ಜಿಲ್ಲೆಗೆ ಜಲಶಕ್ತಿ ಅಭಿಯಾನದ ಕೇಂದ್ರ ತಂಡ


ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಪರ ಕಾರ್ಯದರ್ಶಿ ಪಂಕಜ್‌ ಕುಮಾರ್‌, ಕೇಂದ್ರ ಆಯುಷ್‌ ಸಚಿವಾಲಯದ ನಿರ್ದೇಶಕ ಶಶಿರಂಜನ್‌ ಕುಮಾರ್‌, ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ನಿರ್ದೇಶಕ ಮನೋಜ್‌ ಕುಮಾರ್‌, ಗಂಗೇಯಾ ಕೇಂದ್ರ ಅಂತರ್ಜಲ ಮಂಡಳಿಯ ತಾಂತ್ರಿಕ ಅಧಿಧಿಕಾರಿ ಯು.ಆರ್‌. ರಾಕಿ, ಡಬ್ಲ್ಯುಎಪಿಸಿಒಎಸ್‌ ಲಿಮಿಟೆಡ್‌ನ ಎಂಜಿನಿಯರ್‌ ದಿಲೀಪ್‌ ಅವರನ್ನು ಒಳಗೊಂಡ ತಂಡ ಭೇಟಿ ನೀಡಲಿದ್ದಾರೆ.

ಭೇಟಿ ನೀಡುವ ಸ್ಥಳಗಳ ವಿವರ: ಶಿಡ್ಲಘಟ್ಟ ತಾಲೂಕಿನ ಮಾಳ ಮಾಚನಹಳ್ಳಿ, ಕೊತ್ತನೂರು, ಆನೂರು, ಪಲಿಚೇರ್ಲು, ಹೊಸಪೇಟೆ ಹಾಗೂ ಚಿಂತಾಮಣಿ ತಾಲೂಕಿನ ಸಂತೆಕಲ್ಲುಹಳ್ಳಿ, ಪೆರಮಾಚನಹಳ್ಳಿ, ಚಿನ್ನಸಂದ್ರ ಮತ್ತು ಚಿಂತಾಮಣಿ ನಗರದಲ್ಲಿರುವ ಕಲ್ಯಾಣಿಗಳ ವೀಕ್ಷಣೆ ಮಾಡಲಿದ್ದಾರೆ.

ಜಿಲ್ಲೆಯಲ್ಲಿಅಂತರ್ಜಲ ಮಟ್ಟ ತೀವ್ರವಾಗಿ ಕುಸಿದ ಹಿನ್ನೆಲೆಯಲ್ಲಿತಂಡ ಇಲ್ಲಿನ ಸ್ಥಿತಿಗತಿ ಬಗ್ಗೆ ಅವಲೋಕನ ನಡೆಸಲಿದ್ದು, ಜಿಲ್ಲೆಯ ನಾನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಜಿಲ್ಲಾಪಂಚಾಯತ್‌ ಉಪಕಾರ್ಯದರ್ಶಿ ನೋಮೇಶ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ