ಆ್ಯಪ್ನಗರ

ಸ್ಥಗಿತಗೊಂಡಿದ್ದ ರೈಲು ಇಂದಿನಿಂದ ಮತ್ತೆ ಪುನಾರಂಭ

2 ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಯಶವಂತಪುರ-ಚಿಕ್ಕಬಳ್ಳಾಪುರ ಪ್ಯಾಸೆಂಜರ್‌ ರೈಲು ರೈಲು ಶನಿವಾರ (ಫೆ.16)ದಿಂದ ಮತ್ತೆ ಸಂಚಾರ ಪ್ರಾರಂಭಿಸಲಿದೆ.

Vijaya Karnataka 16 Feb 2019, 5:00 am
ಚಿಕ್ಕಬಳ್ಳಾಪುರ: 2 ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಯಶವಂತಪುರ-ಚಿಕ್ಕಬಳ್ಳಾಪುರ ಪ್ಯಾಸೆಂಜರ್‌ ರೈಲು ರೈಲು ಶನಿವಾರ (ಫೆ.16)ದಿಂದ ಮತ್ತೆ ಸಂಚಾರ ಪ್ರಾರಂಭಿಸಲಿದೆ.
Vijaya Karnataka Web CBP-15CBPK12


ಆದಾಯದ ಕೊರತೆ ಎಂಬ ಕಾರಣಕ್ಕೆ ವಯಾ ಯಲಹಂಕ, ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರದ ನಡುವಿನ ಸಂಚಾರ ರದ್ದುಗೊಳಿಸಲಾಗಿತ್ತು. ಆದರೆ, ಈ ಭಾಗದ ಜನರ ಒತ್ತಾಯದ ಮೆರೆಗೆ ಮತ್ತೆ ಪುನರಾಂಭಿಸಲಾಗುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಪ್ರಶಂಶೆ ವ್ಯಕ್ತವಾಗಿದೆ.

ಶನಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಯಶವಂತಪುರದ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸಚಿವ ಸದಾನಂದಗೌಡ ಅವರು, ಈ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದು, ಮಧ್ಯಾಹ್ನ 12.15ಕ್ಕೆ ಚಿಕ್ಕಬಳ್ಳಾಪುರ ತಲುಪಲಿದೆ. ನಂತರ 12.40ಕ್ಕೆ ಚಿಕ್ಕಬಳ್ಳಾಪುರದಿಂದ ಹೊರಟು ದೇವನಹಳ್ಳಿ, ಯಲಹಂಕ, ಯಶವಂತಪುರ, ಹೆಬ್ಬಾಳ ಮಾರ್ಗವಾಗಿ ತಮಿಳುನಾಡಿನ ಹೊಸೂರು ಸೇರಲಿದೆ.

ಈ ಹಿಂದೆ ಯಶವಂತಪುರದಿಂದ ಯಲಹಂಕ ಮಾರ್ಗವಾಗಿ ಬಂದು ದೇವನಹಳ್ಳಿಯಲ್ಲಿ ನಿಲ್ಲುತ್ತಿತ್ತು. ಇದೇ ರೈಲನ್ನು ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರದ ವರೆಗೆ ವಿಸ್ತರಣೆ ಮಾಡಿದರೆ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲ ಆಗಲಿದೆ ಎಂಬ ಒತ್ತಾಯದ ಮೆರೆಗೆ ಎರಡು ವರ್ಷದ ಹಿಂದೆ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಆದಾಯ ಬರುತ್ತಿಲ್ಲ ಎಂಬ ಕಾರಣಕ್ಕೆ ಕೇಲವೇ ತಿಂಗಳಿಗೆ ಈ ರೈಲನ್ನು ಸ್ಥಗಿತಗೊಳಿಸಲಾಗುತ್ತು. ತದನಂತರ ಇದನ್ನು ಮತ್ತೆ ಪುನಾರಂಭ ಮಾಡಬೇಕು ಎಂಬ ಒತ್ತಾಯಗಳು ಚಿಕ್ಕಬಳ್ಳಾಪುರ ರೈಲ್ವೆ ಹೋರಾಟ ಸಮಿತಿ ಹಾಗೂ ಈ ಜಿಲ್ಲೆಯ ರೈತರು, ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಕೇಳಿಬಂದಿತ್ತು. ಇದರ ಪರಿಣಾಮವಾಗಿ ಕಳೆದ ನಾಲ್ಕೈದು ತಿಂಗಳ ಹಿಂದೆಯೇ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತಾದರೂ ಇದುವರೆಗೆ ಸಂಚಾರ ಆರಂಭಿಸಿರಲಿಲ್ಲ. ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಶನಿವಾರದಿಂದ ಮತ್ತೆ ರೈಲು ಸೇವೆ ಪುನಾರಂಭಗೊಳ್ಳಲಿದೆ ಎಂದು ಚಿಕ್ಕಬಳ್ಳಾಪುರ ರೈಲ್ವೆ ಹೋರಾಟ ಸಮಿತಿಯ ಕಾರ್ಯದರ್ಶಿ ಸೈಯ್ಯದ್‌ ಮಹಮ್ಮದ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಆದಾಯ ಬರುತ್ತಿಲ್ಲ ಎಂಬ ಕಾರಣಕ್ಕೆ ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರದ ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿತ್ತು. ಈ ಭಾಗದ ಜನರ ಒತ್ತಾಯದ ಮೇರೆಗೆ ಮತ್ತೆ ಚಿಕ್ಕಬಳ್ಳಾಪುರದವರೆಗೆ ವಿಸ್ತರಿಸಲಾಗಿದೆ. 6 ತಿಂಗಳ ಕಾಲ ರೈಲು ಸಂಚಾರ ನಡೆಸಲಿದೆ. ಆದಾಯ ಬರದಿದ್ದಲ್ಲಿ ಮತ್ತೆ ರೈಲು ಸಂಚಾರ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಶಾಶ್ವತವಾಗಿ ರೈಲು ಸೇವೆ ಪ್ರಯೋಜನ ಪಡೆಯಬೇಕು.
-ರಾಮಾರಾವ್‌, ಚಿಕ್ಕಬಳ್ಳಾಪುರ ರೈಲ್ವೇ ನಿಲ್ದಾಣದ ವ್ಯವಸ್ಥಾಪಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ