ಆ್ಯಪ್ನಗರ

ಕೋಟ್ಪಾ ಕಾಯಿದೆ ಉಲ್ಲಂಘನೆ, ದಂಡ ವಸೂಲಿ

ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ಅಧಿಕಾರಿಗಳು ನಗರದ ಹಲವೆಡೆ ದಾಳಿ ನಡೆಸಿ, ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ, ಜಾಗೃತಿ ಮೂಡಿಸಿದರು.

Vijaya Karnataka 30 Jun 2019, 5:00 am
ಚಿಕ್ಕಬಳ್ಳಾಪುರ: ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ಅಧಿಕಾರಿಗಳು ನಗರದ ಹಲವೆಡೆ ದಾಳಿ ನಡೆಸಿ, ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ, ಜಾಗೃತಿ ಮೂಡಿಸಿದರು.
Vijaya Karnataka Web violation of the kotpa act fines
ಕೋಟ್ಪಾ ಕಾಯಿದೆ ಉಲ್ಲಂಘನೆ, ದಂಡ ವಸೂಲಿ


ನಗರದ ಖಾಸಗಿ ಬಸ್‌ ನಿಲ್ದಾಣ ಸೇರಿದಂತೆ ಇನ್ನೂ ಹಲವೆಡೆ ದಾಳಿ ನಡೆಸಿದ ಅಧಿಕಾರಿಗಳು ನಾನಾ ಅಂಗಡಿ ಮುಂಗಟ್ಟು , ಕಾಂಡಿಮೆಂಟ್ಸ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಾಯಿದೆ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಿದರು.

ಇದೇ ವೇಳೆ ಮಾತನಾಡಿದ ತಾಲೂಕು ಆಹಾರ ಸುರಕ್ಷ ತಾ ಅಧಿಕಾರಿ ಜಿ. ಹರೀಶ್‌, ಚಿಕ್ಕಬಳ್ಳಾಪುರ ತಾಲೂಕು ಕೋಟ್ಪಾ ಕಾಯಿದೆಯ ಉನ್ನತ ಮಟ್ಟದ ಅನುಷ್ಠಾನ ತಾಲೂಕು ಎಂದು ಘೋಷಣೆ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಚರಣೆ ಹಮ್ಮಿಕೊಳ್ಳಲಾಗಿದ್ದು, ಕಾಯಿದೆ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆ, ಸರಕಾರಿ ಕಚೇರಿ, ಸಂಘ ಸಂಸ್ಥೆ ಸೇರಿದಂತೆ ಎಲ್ಲ ಸಾರ್ವಜನಿಕ ಸ್ಥಳಗಳನ್ನು ಧೂಮಪಾನ ನಿಷೇಧಿತ ಪ್ರದೇಶವೆಂದು ಘೋಷಿಸಿ, ಧೂಮಪಾನ ನಿಷೇಧಿತ ನಾಮಫಲಕವನ್ನು ಕಡ್ಡಾಯವಾಗಿ ಬಿತ್ತರಿಸಬೇಕು. ಶಿಕ್ಷ ಣ ಸಂಸ್ಥೆಗಳ ಆವರಣದ ನೂರು ಮೀ.ವರೆಗೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ಸಂಪೂರ್ಣನಿಷೇಧಿಸಿದ್ದು, ಈ ಕುರಿತು ನಾಮಫಲಕ ವಿತರಿಸಬೇಕು. 18 ವರ್ಷದೊಳಗಿನ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಅವರಿಗೆ ಮಾರುವುದು ಶಿಕ್ರ್ಷಾಹ ಅಪರಾಧ. ಈ ಕುರಿತು ನಾಮಫಲಕವನ್ನು ತಂಬಾಕು ಉತ್ಪನ್ನ ಮಾರಾಟ ಮಾಡುವಲ್ಲಿ ಬಿತ್ತರಿಸುವುದು ಕಡ್ಡಾಯ. ತಂಬಾಕು ಉತ್ಪನ್ನಗಳ ಕುರಿತು ಜಾಹೀರಾತು ಪ್ರದರ್ಶನ ನಿಷೇಧಿಸಿದ್ದು, ತಂಬಾಕು ಉತ್ಪನ್ನಗಳ ಮೇಲೆ ಶೇ.80ರಷ್ಟು ಆರೋಗ್ಯ ಎಚ್ಚರಿಕೆಯ ಚಿತ್ರ, ಟ್ರೋಲ್‌ ಫ್ರಿ ನಂಬರ್‌ ಮುದ್ರಿಸುವುದು ಕಡ್ಡಾಯ ಎಂದು ಜಾಗೃತಿ ಮೂಡಿಸಿದರು.

ದಾಳಿ ಸಂದರ್ಭದಲ್ಲಿ ಕೋಟ್ಪಾ ತನಿಖಾ ದಳದ ಕ್ಷೇತ್ರ ಆರೋಗ್ಯ ಶಿಕ್ಷಾಧಿಕಾರಿ ಸುಧಾ, ಪೊಲೀಸ್‌ ಪೇದೆ ಜಯಣ್ಣ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ