ಆ್ಯಪ್ನಗರ

ಕನ್ನಡ ಸಾಹಿತ್ಯ ಪರಿಷತ್‌ನಿಂದ ವಿಶ್ವ ಕುಟುಂಬ ದಿನಾಚರಣೆ

ಅವಿಭಕ್ತ ಕುಟುಂಬಗಳಿಂದ ಸಮಾಜದಲ್ಲಿ ಸುಖ ಶಾಂತಿ ನೆಲೆಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್‌ ಅಭಿಪ್ರಾಯಪಟ್ಟರು.

Vijaya Karnataka 17 May 2019, 5:00 am
ಶಿಡ್ಲಘಟ್ಟ: ಅವಿಭಕ್ತ ಕುಟುಂಬಗಳಿಂದ ಸಮಾಜದಲ್ಲಿ ಸುಖ ಶಾಂತಿ ನೆಲೆಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್‌ ಅಭಿಪ್ರಾಯಪಟ್ಟರು.
Vijaya Karnataka Web world family day by kannada sahitya parishat
ಕನ್ನಡ ಸಾಹಿತ್ಯ ಪರಿಷತ್‌ನಿಂದ ವಿಶ್ವ ಕುಟುಂಬ ದಿನಾಚರಣೆ


ವಿಶ್ವ ಕುಟುಂಬ ದಿನಾಚರಣೆ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ತಾಲೂಕಿನ ಹನುಮಂತಪುರದ ಅವಿಭಕ್ತ ಕುಟುಂಬ ಮುನಿನರಸಿಂಹಪ್ಪ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಕಸಾಪ ನಡಿಗೆ ಸಾಧಕರ ಕಡೆಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಹಿಂದೆ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅವಿಭಕ್ತ ಕುಟುಂಬಗಳು ಇದ್ದವು. ಕುಟುಂಬದ ಹಿರಿಯರೇ ಮನೆಯ ನಿರ್ವಹಣೆಯನ್ನು ಮಾಡುತ್ತಿದ್ದರು. ಹಿರಿಯರಿಂದ ಎಳೆ ಮಕ್ಕಳವರೆಗೂ ಎಲ್ಲರೂ ಒಂದೆ ಸೂರಿನಡಿ ಜತೆಗೂಡಿ ಬಾಳುವುದರಿಂದ ಸಂಪ್ರದಾಯ ಆಚಾರ ವಿಚಾರಗಳನ್ನು ಪಾಲಿಸುವಂತಾಗಿತ್ತು. ಹಿರಿಯ ಮಾರ್ಗದರ್ಶನದಿಂದ ಸಮಾಜದಲ್ಲಿಯೂ ಸಾಮರಸ್ಯ ಮೂಡಿ ಎಲ್ಲೆಲ್ಲೂ ಸುಖ ಶಾಂತಿ ನೆಮ್ಮದಿ ನೆಲೆಸಿತ್ತು. ಆದರೆ ಕಾಲ ಬದಲಾದಂತೆ ಅವಿಭಕ್ತ ಕುಟುಂಬಗಳು ಮಾಯವಾಗಿ ಒಬ್ಬಂಟಿ ಬದುಕು ಅನಿವಾರ್ಯವಾಗಿದೆ. ಹಿರಿಯ ಮಾರ್ಗದರ್ಶನ ಕೊರತೆ ಕಾಡುತ್ತಿದೆ ಇದರಿಂದ ಯುವ ಸಮುದಾಯ ಹಾದಿ ತಪ್ಪುತ್ತಿದೆ ಎಂದು ವಿಷಾದಿಸಿದರು.

ಅವಿಭಕ್ತ ಕುಟುಂಬದ ಹಿರಿಯ ಮುನಿನರಸಿಂಹಪ್ಪ ಅವರು ಹಾಗೂ ಅವರ ಕುಟುಂಬದ ಮಕ್ಕಳು, ಸೊಸೆಯರು, ಮೊಮ್ಮಕ್ಕಳು ಅವಿಭಕ್ತ ಕುಟುಂಬದ ಬದುಕಿನ ಬಗ್ಗೆ ತಮ್ಮ ಅನಿಸಿಕೆಗಳನ್ನು, ಸಂಭ್ರಮದ ಕ್ಷ ಣಗಳನ್ನು ಹಂಚಿಕೊಂಡರು.

ಇಡೀ ಕುಟುಂಬದಲ್ಲಿನ 28 ಮಂದಿಯೊಂದಿಗೆ ಕೂಡಿ ಬಾಳುತ್ತಿರುವ ಮನೆಯ ಹಿರಿಯ ಮುನಿನರಸಿಂಹಪ್ಪ ದಂಪತಿಯನ್ನು ಸನ್ಮಾನಿಸಲಾಯಿತು.

ಕಸಾಪ ಕಾರ್ಯದರ್ಶಿ ಸತೀಶ್‌, ಸಂಘ ಸಂಸ್ಥೆಗಳ ಪ್ರತಿನಿಧಿ ಶಂಕರ್‌, ಮಹಿಳಾ ಪ್ರತಿನಿಧಿ ದಾಕ್ಷಾಯಿಣಿ, ನಗರ ಘಟಕದ ಅಧ್ಯಕ್ಷ ಸಿ.ಎನ್‌.ಮುನಿರಾಜು, ಕೃಷ್ಣಪ್ಪ, ವಿಜಯ್‌ ಕುಮಾರ್‌ ಸೇರಿದಂತೆ ಅವಿಭಕ್ತ ಕುಟುಂಬದ ಎಲ್ಲ ಸದಸ್ಯರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ