ಆ್ಯಪ್ನಗರ

ನಾಯಿ ದಾಳಿಗೆ ಜಿಂಕೆ ಸಾವು

ನಾಯಿಗಳ ಹಿಂಡು ಬೆನ್ನಟ್ಟಿ ಕಚ್ಚಿ ಗಾಯಗೊಳಿಸಿದ ಪರಿಣಾಮ ಆರು ವರ್ಷದ ಗಂಡು ಜಿಂಕೆ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

Vijaya Karnataka 24 Oct 2018, 5:00 am
ನರಸಿಂಹರಾಜಪುರ : ನಾಯಿಗಳ ಹಿಂಡು ಬೆನ್ನಟ್ಟಿ ಕಚ್ಚಿ ಗಾಯಗೊಳಿಸಿದ ಪರಿಣಾಮ ಆರು ವರ್ಷದ ಗಂಡು ಜಿಂಕೆ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
Vijaya Karnataka Web CKM-23nrp2


ನಾಗಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೆಕೊಪ್ಪ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಜಿಂಕೆಯನ್ನು ಗುರುತಿಸಿದ ಗ್ರಾಮದ ನಾಯಿಗಳು ಅಡ್ಡಗಟ್ಟಿ ದಾಳಿ ಮಾಡಿವೆ. ಗ್ರಾಮಸ್ಥರು ನಾಯಿಗಳನ್ನು ಓಡಿಸಿ ಅರಣ್ಯ ಇಲಾಖೆಗೆ ತಿಳಿಸಿದ್ದರು.

ಚಿಕ್ಕಅಗ್ರಹಾರ ವಲಯ ಅರಣ್ಯ ಅಧಿಕಾರಿಗಳು, ಸಿಬ್ಬಂದಿ ಜಿಂಕೆಯನ್ನು ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿ ಕಚೇರಿಗೆ ತಂದು ಬೆಳ್ಳೂರು ಪಶು ಇಲಾಖೆ ವೈದ್ಯಾಧಿಕಾರಿ ಡಾ.ಶಿವಕುಮಾರ್‌ ಅವರಿಂದ ಚಿಕಿತ್ಸೆ ಮಾಡಿಸಿದರು. ತೀವ್ರ ಗಾಯಗೊಂಡಿದ್ದ ಜಿಂಕೆ ಮೃತಪಟ್ಟಿದೆ. ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಿ ದಹನ ಮಾಡಲಾಯಿತು. ಈ ಸಂದರ್ಭ ಅರಣ್ಯ ಪಾಲಕ ಬಸವರಾಜ್‌ ನಿಡುಗುಂದಿ, ಅರಣ್ಯ ರಕ್ಷ ಕರಾದ ರವಿ, ಹರೀಶ್‌, ಅರಣ್ಯ ವೀಕ್ಷ ಕರಾದ ನಂದೀಶ್‌, ಮಂಜು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ