ಆ್ಯಪ್ನಗರ

ಅಂಬೇಡ್ಕರ್‌ ಜಗತ್ತುಕಂಡ ದೊಡ್ಡಜ್ಞಾನಿ

ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಜಗತ್ತುಕಂಡ ದೊಡ್ಡ ಜ್ಞಾನಿ. ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನ ಸರ್ವಜನರ ಹಿತಬಯಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಡಿ.ಎಲ್‌.ವಿಜಯ್‌ಕುಮಾರ್‌ ಹೇಳಿದರು.

Vijaya Karnataka 15 Apr 2019, 5:00 am
ಚಿಕ್ಕಮಗಳೂರು:ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಜಗತ್ತುಕಂಡ ದೊಡ್ಡ ಜ್ಞಾನಿ. ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನ ಸರ್ವಜನರ ಹಿತಬಯಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಡಿ.ಎಲ್‌.ವಿಜಯ್‌ಕುಮಾರ್‌ ಹೇಳಿದರು.
Vijaya Karnataka Web CKM-14rudrap5


ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಘಟಕದಿಂದ ಭಾನುವಾರ ಏರ್ಪಡಿಸಿದ್ದ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 128ನೇ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ವನಮನ ಸಲ್ಲಿಸಿ ಮಾತನಾಡಿದರು.

ಎಲ್ಲರು ಚಿರಂಜೀವಿಗಳಾಗಲು ಸಾಧ್ಯವಿಲ್ಲ. ಯಾರು ದೇಶದ ಪ್ರಗತಿಗಾಗಿ ದುಡಿಯುತ್ತಾರೋ ಅಂತವರ ಸಿದ್ದಾಂತಗಳು ಚಿರಂಜೀವಿಗಳಾಗಿ ಉಳಿಯುತ್ತವೆ. ಅಂತವರಲ್ಲಿ ಡಾ.ಅಂಬೇಡ್ಕರ್‌ ಪ್ರಮುಖಸ್ಥಾನ ಪಡೆದುಕೊಳ್ಳುತ್ತಾರೆ ಎಂದರು.

ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಅಂಬೇಡ್ಕರ್‌ ದಲಿತರಿಗೆ ಮಾತ್ರ ಸೀಮಿತವಲ್ಲ. ದೇಶದ ಸರ್ವಜನರ ಆಸ್ತಿ. ಎಲ್ಲರು ಸೇರಿ ಮಹಾ ಪುರುಷರ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಮತದಾನದ ಹಕ್ಕನ್ನು ಅಂಬೇಡ್ಕರ್‌ ಎಲ್ಲ ವಯಸ್ಕರಿಗೆ ಸಂವಿಧಾನದ ಮೂಲಕ ಕೊಡಿಸಿದ್ದಾರೆ. ಸಂವಿಧಾನ ನೀಡಿರುವ ಪ್ರಬಲ ಅಸ್ತ್ರ ಮತದಾನ. ಯಾವುದೆ ಆಮಿಷಗಳಿಗೆ ಒಳಗಾಗದೆ ಅರ್ಹರಿಗೆ ಮತನೀಡಬೇಕು ಎಂದರು.

ಜಿಲ್ಲಾ ಕಾಂಗ್ರೆಸ್‌ ಎಸ್‌.ಸಿ ಘಟಕದ ಜಿಲ್ಲಾಧ್ಯಕ್ಷ ಹೂವಪ್ಪ ಮಾತನಾಡಿದರು.

ಈ ಸಂದರ್ಭ ಬ್ಲಾಕ್‌ ಕಾಂಗ್ರೆಸ್‌ ಎಸ್‌ಸಿ ಘಟಕದ ಹೊನ್ನೇಶ್‌, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಿಸಾರ್‌ಅಹಮದ್‌, ಬ್ಲಾಕ್‌ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ, ಮಹಿಳಾ ಕಾಂಗ್ರೆಸ್‌ ಘಟಕದ ಚೇತನ, ಮುಖಂಡರಾದ ರಸುಲ್‌ಖಾನ್‌, ಆದಿಲ್‌, ಜಗದೀಶ್‌, ವೆಂಕಟೇಶ್‌, ನಾಗೇಶ್‌, ನೇತ್ರಾವತಿ, ಈಶಯ್ಯ, ಶಾಂತಕುಮಾರ್‌, ಹಿರೇಮಗಳೂರು ರಾಮಚಂದ್ರ, ಶಿವು, ಮೀೕನಾಕ್ಷಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ