ಆ್ಯಪ್ನಗರ

ನಿಮ್ಮ ಮಾರುಕಟ್ಟೆ ಸ್ವಚ್ಛವಾಗಿಟ್ಟುಕೊಳ್ಳಿ: ಪ್ರಕಾಶ್‌

ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ ನಿಗದಿಪಡಿಸಿದ ಸ್ಥಳದಲ್ಲೇ ರೈತರು ಮತ್ತು ವರ್ತಕರು ವ್ಯಾಪಾರ ವಹಿವಾಟನ್ನು ನಡೆಸಬೇಕು ಎಂದು ಎಪಿಎಂಸಿ ಅಧ್ಯಕ್ಷ ಅರೇನಳ್ಳಿ ಪ್ರಕಾಶ್‌ ಸೂಚಿಸಿದರು.

Vijaya Karnataka 19 Jun 2019, 5:00 am
ಚಿಕ್ಕಮಗಳೂರು: ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ ನಿಗದಿಪಡಿಸಿದ ಸ್ಥಳದಲ್ಲೇ ರೈತರು ಮತ್ತು ವರ್ತಕರು ವ್ಯಾಪಾರ ವಹಿವಾಟನ್ನು ನಡೆಸಬೇಕು ಎಂದು ಎಪಿಎಂಸಿ ಅಧ್ಯಕ್ಷ ಅರೇನಳ್ಳಿ ಪ್ರಕಾಶ್‌ ಸೂಚಿಸಿದರು.
Vijaya Karnataka Web CKM-18RUDRAP3


ನಗರದ ಎಪಿಎಂಸಿ ಆವರಣದಲ್ಲಿ ಡಬ್ಲ್ಯೂಐಎಫ್‌ ನಬಾರ್ಡ್‌ ಯೋಜನೆಯಡಿ 38 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಮುಚ್ಚು ಹರಾಜು ಕಟ್ಟೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೃಷಿ ಮಾರುಕಟ್ಟೆ ರೈತರಿಗೆ ದೇವಾಲಯವಿದ್ದ ಹಾಗೆ. ಅದನ್ನು ಸ್ವಚ್ಛ ಮತ್ತು ವ್ಯವಸ್ಥಿತವಾಗಿ ನಡೆಸಬೇಕು. ಕೃಷಿಕರಿಗೆ ಮೋಸವಾಗದ ರೀತಿ ವ್ಯವಹಾರ ಮಾಡಬೇಕು. ನಿಗದಿಪಡಿಸಿದ ಸ್ಥಳ ಬಿಟ್ಟು ಅಡ್ಡಾದಿಡ್ಡಿಯಾಗಿ ವ್ಯಾಪಾರ ಮಾಡಿದರೆ ಮಾರುಕಟ್ಟೆಯ ವ್ಯವಸ್ಥೆ ಹಾಳಾಗುವುದರ ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದರು.

ಕೃಷಿ ಮಾರುಕಟ್ಟೆ ಪ್ರಾಂಗಣದಲ್ಲಿ ಅವ್ಯವಸ್ಥೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದ ಅವರು, ನಿಗದಿಪಡಿಸಿದ ಸ್ಥಳವನ್ನು ಬಿಟ್ಟು ಬೇರೆಡೆ ವ್ಯಾಪಾರ ಮಾಡುವ ವರ್ತಕರಿಗೆ ಸಮಿತಿಯಿಂದ ದಂಡ ವಿಧಿಸುವ ಎಚ್ಚರಿಕೆ ನೀಡಿದರು.

ಸಮಿತಿ ಸದಸ್ಯ ಬಿ.ಎಚ್‌.ಹರೀಶ್‌ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸಿಗುವ ಸವಲತ್ತುಗಳನ್ನು ರೈತರು ಮತ್ತು ವರ್ತಕರು ಸದ್ಬಳಕೆ ಮಾಡಕೊಳ್ಳಬೇಕು ಎಂದು ಸಲಹೆ ನೀಡಿದರು.

ಎಪಿಎಂಸಿ ಕಾರ್ಯದರ್ಶಿ ಅಭಿನಂದನ್‌, ಗುತ್ತಿಗೆದಾರ ಮಂಜುನಾಥ್‌, ಸಿಬ್ಬಂದಿ ಎಂ.ಎಚ್‌.ಧರ್ಮರಾಜ್‌, ಸಂತೋಷ್‌, ಶಿವಕುಮಾರ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ