ಆ್ಯಪ್ನಗರ

ಅತ್ಯಾಚಾರ, ಬೆತ್ತಲೆ ಮೆರವಣಿಗೆಗೆ ಖಂಡನೆ, ಪ್ರತಿಭಟನೆ

ಪುತ್ತೂರಿನ ಕಾಲೇಜು ಯುವತಿ ಅತ್ಯಾಚಾರ ಘಟನೆ, ಗುಂಡ್ಲುಪೇಟೆಯಲ್ಲಿ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

Vijaya Karnataka 11 Jul 2019, 5:00 am
ಚಿಕ್ಕಮಗಳೂರು: ಪುತ್ತೂರಿನ ಕಾಲೇಜು ಯುವತಿ ಅತ್ಯಾಚಾರ ಘಟನೆ, ಗುಂಡ್ಲುಪೇಟೆಯಲ್ಲಿ ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
Vijaya Karnataka Web CKM-10SHIVUP1


ಮಾನವಹಕ್ಕು ಸಂರಕ್ಷಣಾ ವೇದಿಕೆ, ಬಹುಜ® ಸಂಘರ್ಷ ಸಮಿತಿ, ದಲಿತ ಯುವ ಸಂಘಟನೆ, ಭಗತ್‌ಸಿಂಗ್‌ ಆಟೊ ಸಂಘ ಹಾಗೂ ದುರ್ಗಾಸೇನೆ ನೇತೃತ್ವದಲ್ಲಿ ಪ್ರತಿಭಟಿಸಿದ ನೂರಾರು ವಿದ್ಯಾರ್ಥಿಗಳು ತಾಲೂಕು ಕಚೇರಿ ಆವರಣದಿಂದ ಎಂಜಿ ರಸ್ತೆ ಮೂಲಕ ಮೆರವಣಿಗೆಯಲ್ಲಿ ತೆರಳಿ ಆಜಾದ್‌ ಪಾರ್ಕಿನಲ್ಲಿ ಬಹಿರಂಗ ಸಭೆ ನಡೆಸಿದರು.

ಈ ಸಂದರ್ಭ ಮುಖಂಡರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಆಕೆಗೆ ಮಾದಕ ವಸ್ತು ನೀಡಿರುವ ಯುವಕರ ಗುಂಪು ಅತ್ಯಾಚಾರ ಎಸಗಿದೆ. ಆ ಗುಂಪು ಎಬಿವಿಪಿ ಸಂಘಟನೆಗೆ ಸೇರಿದೆ. ಅತ್ಯಚಾರದ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವಿಕೃತಿ ಮೆರೆದಿರುವ ಪುಂಡರ ಗುಂಪಿನ ಕೃತ್ಯ ಇಡೀ ಮಾನವ ಸಂಕುಲವೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಆರೋಪಿಸಿದರು.

ಗುಂಡ್ಲುಪೇಟೆಯ ದಲಿತ ಯುವಕನನ್ನು ಅಡ್ಡಗಟ್ಟಿ ಥಳಿಸಿರುವ ಸಮರ್ಣೀಯ ಗುಂಪೊಂದು ಆತನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಖಂಡನೀಯ ಎಂದರು. ಈ ಎರಡೂ ಪ್ರಕರಣದ ಆರೋಪಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ದೌರ್ಜನ್ಯಕ್ಕೊಳಗಾದ ಕುಟುಂಬಗಳಿಗೆ ಸರಕಾರಿ ನೌಕರಿ ಮತ್ತು ಪರಿಹಾರ ನೀಡಬೇಕು ಹಾಗೂ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು. ವಿವಿಧ ಸಂಘಟನೆಗೆ ಮುಖಂಡರಾದ ಹೊನ್ನೇಶ, ಎಂ.ಜಿ.ಲೋಕೇಶ್‌, ಮಂಜುಕೂದುವಳ್ಳಿ, ಐ.ಎಂ.ಪೂರ್ಣೇಶ್‌, ದುರ್ಗಾಸೇನೆ ಶಾರದಮ್ಮ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ