ಆ್ಯಪ್ನಗರ

ಜಿಲ್ಲೆಗೆ 21 ಶಾಲೆಗಳು ಮಂಜೂರು: ಶಾಸಕ

ಸರಕಾರಿ ಶಾಲೆಗಳಲ್ಲಿ ಬಹು ದಿನಗಳ ಹಿಂದೆಯೇ ಆಂಗ್ಲ ಮಾಧ್ಯಮ ಪ್ರಾರಂಭಿಸಬೇಕಿತ್ತು, ಸರಕಾರ ಈಗ ಎಚ್ಚೆತ್ತುಕೊಂಡಿದೆ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.

Vijaya Karnataka 18 Jun 2019, 5:00 am
ತರೀಕೆರೆ ಗ್ರಾಮಾಂತರ : ಸರಕಾರಿ ಶಾಲೆಗಳಲ್ಲಿ ಬಹು ದಿನಗಳ ಹಿಂದೆಯೇ ಆಂಗ್ಲ ಮಾಧ್ಯಮ ಪ್ರಾರಂಭಿಸಬೇಕಿತ್ತು, ಸರಕಾರ ಈಗ ಎಚ್ಚೆತ್ತುಕೊಂಡಿದೆ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.
Vijaya Karnataka Web CKM-17SID1


ಅವರು ತಾಲೂಕಿನ ಲಕ್ಕವಳ್ಳಿ ಹೋಬಳಿಯ ರಂಗೇನಹಳ್ಳಿಯ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಒಂದನೆ ತರಗತಿಯಲ್ಲಿ ಪ್ರಾರಂಭಿಸಲಾದ ಆಂಗ್ಲ ಮಾಧ್ಯಮ ಕೊಠಡಿಗಳನ್ನು ಸೋಮವಾರ ಉದ್ಘಾಟಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ಮನಗಂಡು, ಪೋಷಕರು ಖಾಸಗಿ ಶಾಲೆಗಳ ಕಡೆಗೆ ಆಕರ್ಷಣೆಯಾಗುವುದನ್ನು ತಪ್ಪಿಸಲು ರಾಜ್ಯದಲ್ಲಿ 250 ಆಂಗ್ಲ ಮಾಧ್ಯಮದ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಮಂಜೂರು ಮಾಡಿದೆ. ಜಿಲ್ಲೆಗೆ 21 ಶಾಲೆಗಳು ಮಂಜೂರಾಗಿದ್ದು, ತರೀಕೆರೆ ಕ್ಷೇತ್ರದ ರಂಗೇನಹಳ್ಳಿ ಮತ್ತು ಶಿವನಿ ಗ್ರಾಮದಲ್ಲಿ ಪ್ರಾರಂಭಿಸಲಾಗಿದೆ ಎಂದರು.

ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಾಗಲು ಶಿಕ್ಷ ಕರು ಹೆಚ್ಚು ಮುತುವರ್ಜಿ ವಹಿಸಿಬೇಕು. ಗುಣಮಟ್ಟದ ಶಿಕ್ಷ ಣ ನೀಡಬೇಕು. ಇಂಗ್ಲಿಷ್‌ ಮಾಧ್ಯಮಕ್ಕೆ ನಿಗಧಿಪಡಿಸಿರುವ ಸಂಖ್ಯೆಯನ್ನು ಹೆಚ್ಚು ಮಾಡುವಂತೆ ಸರಕಾರದ ಮೇಲೆ ಒತ್ತಡ ತರಲಾಗುವುದು. ಶಾಲೆಗಳ ದುರಸ್ಥಿಗೆ ಬಿಡುಗಡೆಯಾಗುವ ಅನುದಾನ ಕಡಿಮೆ ಇದೆ. ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಆದ್ಯತೆ ನೀಡಲಾಗುವುದು. ಪದವಿ ಪೂರ್ವ ಕಾಲೇಜಿನ ಹೊಸ ಕಟ್ಟಡಕ್ಕೆ ಅನುದಾನ ಮಂಜೂರಾಗಿದೆ ಎಂದರು.

ಕಾರ್ಯಕ್ರಮದ ಉದ್ಘಾಟಿಸಿದ ಜಿ.ಪಂ. ಉಪಾಧ್ಯಕ್ಷ ಕೆ.ಆರ್‌.ಆನಂದಪ್ಪ ಮಾತನಾಡಿ, ಗ್ರಾಮಸ್ಥರು ಪಕ್ಷ ಭೇದವಿಲ್ಲದೆ ಇಂಗ್ಲಿಷ್‌ ಮಾಧ್ಯಮದ ಶಾಲೆಯ ಕಡೆಗೆ ಹೆಚ್ಚು ಆಸಕ್ತಿ ವಹಿಸಬೇಕು. ಶಾಲೆಗಳ ಕೊಠಡಿ ದುರಸ್ತಿಗೆ ಹೆಚ್ಚು ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು. ತಾ.ಪಂ. ಅಧ್ಯಕ್ಷೆ ಪದ್ಮಾವತಿ ಮಾತನಾಡಿದರು.

ಜಿ.ಪಂ. ಸದಸ್ಯೆ ಚೈತ್ರ ಶ್ರೀ, ಮಾಜಿ ಸದಸ್ಯ ಎಚ್‌.ವಿಶ್ವನಾಥ್‌, ತಾ.ಪಂ. ಸದಸ್ಯ ರಾಮಪ್ಪ, ಗ್ರಾ.ಪಂ. ಅಧ್ಯಕ್ಷೆ ಶೋಭಾ, ಸದಸ್ಯರಾದ ಧನಪಾಲ್‌, ಅಮ್ಜದ್‌, ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ, ಬಿಇಒ ಎನ್‌.ಕೆ.ಶಿವರಾಜ್‌, ಪ್ರಾಂಶುಪಾಲ ಜಗನ್ನಾಥ್‌, ಮುಖ್ಯ ಶಿಕ್ಷ ಕಿ ವಸಂತಕುಮಾರಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ