ಬೈಕ್ ತೊಳೆಯಲು ಕೆರೆಗೆ ಹೋದ ಯುವಕರ ದುರ್ಮರಣ
ಚಿಕ್ಕಮಗಳೂರಿನ ಹುಲಿತಿಮ್ಮಾಪುರ ಗ್ರಾಮದ ಕೆರೆಯಲ್ಲಿ ಮೂವರು ಯುವಕರು ಬೈಕ್ ತೊಳೆಯಲು ಹೋಗಿ ಮೃತಪಟ್ಟಿದ್ದಾರೆ.
Vijaya Karnataka Web 18 Oct 2018, 4:21 pm
ಚಿಕ್ಕಮಗಳೂರು : ಆಯುಧ ಪೂಜೆಗಾಗಿ ಕೆರೆಯಲ್ಲಿ ಬೈಕ್ ತೊಳೆಯಲು ಹೋದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರದಲ್ಲಿ ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಹೇಮಂತ್ (18), ವಿಜಯ್ (21), ಶಿವರಾಜ್ (14) ಮೃತಪಟ್ಟವರು.
ಬೈಕ್ ತೊಳೆಯುವ ವೇಳೆ ಒಬ್ಬ ಯುವಕ ಕೆರೆಗೆ ಬಿದ್ದಿದ್ದಾನೆ. ಈ ವೇಳೆ ಅವನನ್ನು ರಕ್ಷಿಸಲು ಮತ್ತಿಬ್ಬರು ನೀರಿಗೆ ಬಿದ್ದಿದ್ದಾರೆ. ಮೂವರಿಗೂ ಈಜು ಬರುತ್ತಿರಲಿಲ್ಲ. ಹೀಗಾಗಿ ಯುವಕರು ಸಾವನ್ನಪ್ಪಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರದಲ್ಲಿ ಗ್ರಾಮದ ಕೆರೆಯಲ್ಲಿ ಘಟನೆ ನಡೆದಿದೆ. ಹೇಮಂತ್ (18), ವಿಜಯ್ (21), ಶಿವರಾಜ್ (14) ಮೃತಪಟ್ಟವರು.
ಬೈಕ್ ತೊಳೆಯುವ ವೇಳೆ ಒಬ್ಬ ಯುವಕ ಕೆರೆಗೆ ಬಿದ್ದಿದ್ದಾನೆ. ಈ ವೇಳೆ ಅವನನ್ನು ರಕ್ಷಿಸಲು ಮತ್ತಿಬ್ಬರು ನೀರಿಗೆ ಬಿದ್ದಿದ್ದಾರೆ. ಮೂವರಿಗೂ ಈಜು ಬರುತ್ತಿರಲಿಲ್ಲ. ಹೀಗಾಗಿ ಯುವಕರು ಸಾವನ್ನಪ್ಪಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.