ಆ್ಯಪ್ನಗರ

ಓಮಿನಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ವಶಕ್ಕೆ

ತಾಲೂಕಿನ ಗಡಿ ಗ್ರಾಮ ಮರವಂಜಿಯಲ್ಲಿ ಮಾರುತಿ ಓಮಿನಿಯಲ್ಲಿ ಸಾಗಣೆ ಮಾಡುತ್ತಿದ್ದ 5.87 ಲಕ್ಷ ರೂ.ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Vijaya Karnataka 6 Apr 2018, 5:00 am
ಕಡೂರು : ತಾಲೂಕಿನ ಗಡಿ ಗ್ರಾಮ ಮರವಂಜಿಯಲ್ಲಿ ಮಾರುತಿ ಓಮಿನಿಯಲ್ಲಿ ಸಾಗಣೆ ಮಾಡುತ್ತಿದ್ದ 5.87 ಲಕ್ಷ ರೂ.ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Vijaya Karnataka Web 5 lakh cash in omni captured
ಓಮಿನಿಯಲ್ಲಿ ಸಾಗಿಸುತ್ತಿದ್ದ 5 ಲಕ್ಷ ರೂ. ವಶಕ್ಕೆ


ವಾಹನವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ಬಾಡಿಗೆ ಆಧಾರದ ಮೇಲೆ ಪಡೆದಿದೆ. ಗುರುವಾರ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಹಣವನ್ನು ತೆಗೆದುಕೊಂಡು ಬೆಲಗೂರು ಕಡೆಯಿಂದ ಕಡೂರಿನತ್ತ ಬರುತ್ತಿದ್ದರು. ಮರವಂಜಿ ಬಳಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಚುನಾವಣಾ ಪ್ಲೈಯಿಂಗ್‌ ಸ್ಕ್ವಾಡ್‌ ಸಹಾಯಕ ತೋಟಗಾರಿಕಾ ನಿರ್ದೇಶಕ ಮಂಜುನಾಥ್‌ ತಪಾಸಣೆ ನಡೆಸಿದ್ದು, ಹಣ ಮತ್ತು ವಾಹನವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದರೆ. ವ್ಯಾನ್‌ನಲ್ಲಿ ಸಾಗಿಸುತ್ತಿದ್ದ 5.87.010 ಮೊತ್ತದ ಹಣವನ್ನು ವಶಪಡಿಸಿಕೊಂಡ ಅಧಿಕಾರಿಗಳು ಈ ಹಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸೇರಿದ್ದಾಗಿದೆ. ಯೋಜನೆಯ ಅಧಿಕಾರಿಗಳು ಸೂಕ್ತ ದಾಖಲೆ ಒದಗಿಸಿದ ನಂತರ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ