ಆ್ಯಪ್ನಗರ

73 ನಾಮಪತ್ರದಲ್ಲಿ 6 ತಿರಸ್ಕೃತ

ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಒಟ್ಟು 73 ನಾಮಪತ್ರಗಳಲ್ಲಿ 6 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬಿ ಫಾರಂ ಮತ್ತು ಸೂಕ್ತ ದಾಖಲೆಗಳು ಇಲ್ಲದ ಕಾರಣಕ್ಕೆ ನಾಮಪತ್ರಗಳು ತಿರಸ್ಕೃತಗೊಂಡಿವೆ.

Vijaya Karnataka 27 Apr 2018, 5:00 am
ಚಿಕ್ಕಮಗಳೂರು : ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಒಟ್ಟು 73 ನಾಮಪತ್ರಗಳಲ್ಲಿ 6 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬಿ ಫಾರಂ ಮತ್ತು ಸೂಕ್ತ ದಾಖಲೆಗಳು ಇಲ್ಲದ ಕಾರಣಕ್ಕೆ ನಾಮಪತ್ರಗಳು ತಿರಸ್ಕೃತಗೊಂಡಿವೆ.
Vijaya Karnataka Web 73 of the 6 nominations rejected
73 ನಾಮಪತ್ರದಲ್ಲಿ 6 ತಿರಸ್ಕೃತ


ಶೃಂಗೇರಿ ಕ್ಷೇತ್ರದಲ್ಲಿ ಬಿ ಫಾರಂ ಸಲ್ಲಿಸದ ಕಾರಣಕ್ಕೆ ನಿವೇದಿತಾ ನಾಮಪತ್ರ ತಿರಸ್ಕೃತಗೊಂಡಿದ್ದರೆ, ಸೂಕ್ತ ದಾಖಲೆ ಒದಗಿಸದ ಕಾರಣಕ್ಕೆ ಶ್ರೀಮಾಧವ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಮೂಡಿಗೆರೆ ಕ್ಷೇತ್ರದಲ್ಲಿ ಸಲ್ಲಿಕೆಯಾದ ಎಲ್ಲ 10 ನಾಮಪತ್ರಗಳು ಸ್ವೀಕೃತವಾಗಿದ್ದರೆ, ಚಿಕ್ಕಮಗಳೂರು ಕ್ಷೇತ್ರದಿಂದ ಪಕ್ಷೇತರರಾಗಿ ಕಣಕ್ಕಿಳಿಯಲು ಬಯಸಿದ್ದ ಪೃಥ್ವಿರಾಜ್‌ಗೆ 25 ವರ್ಷ ತುಂಬಿಲ್ಲದ ಕಾರಣ ತಿರಸ್ಕರಿಸಲಾಗಿದೆ.

ತರೀಕೆರೆ ಕ್ಷೇತ್ರದಲ್ಲಿ ಬಿ.ಎಂ.ಪರಮೇಶ್ವರಪ್ಪ (ದೋರನಾಳು ಪರಮೇಶ್‌) ಪಕ್ಷೇತರ ಹಾಗೂ ಕಾಂಗ್ರೆಸ್‌ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಬಿ ಫಾರಂ ಸಲ್ಲಿಸದ ಕಾರಣ ಕಾಂಗ್ರೆಸ್‌ ಪಕ್ಷದಿಂದ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತಗೊಂಡಿದೆ. ಕಡೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯಲು ಬಯಸಿದ್ದ ಟಿ.ಆರ್‌.ಲಕ್ಕಪ್ಪ ಅವರ ನಾಮಪತ್ರ ಬಿ ಫಾರಂ ಇಲ್ಲದ ಕಾರಣ ತಿರಸ್ಕೃತವಾಗಿದೆ.

ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ 2 ನಾಮಪತ್ರ ಸಲ್ಲಿಸಿದ್ದ ಕಡೂರು ಸಿ.ನಂಜಪ್ಪ ಬಿ ಫಾರಂ ಇಲ್ಲದ ಕಾರಣ ಕಾಂಗ್ರೆಸ್‌ನಿಂದ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ. ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರ ಸ್ವೀಕೃತವಾಗಿದೆ. ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ನ ಅಧಿಕೃತ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳು ಸಿಂಧುವಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ