ಆ್ಯಪ್ನಗರ

ಶಿಕ್ಷಣದಲ್ಲಿ ದೇಶ ಭಕ್ತಿ ಅರಿವು ಅಗತ್ಯ

ದೇಶ ಈಗ ಸಂದಿಗ್ಧ ಸ್ಥಿತಿಯಲ್ಲಿದ್ದು, ಶಿಕ್ಷ ಣದಲ್ಲಿ ದೇಶ ಭಕ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಬಂಟರ ಯಾನೆ ನಾಡವರ ಸಂಘದ ಜಿಲ್ಲಾಧ್ಯಕ್ಷ ಸುರೇಂದ್ರ ಶೆಟ್ಟಿ ಹೇಳಿದರು.

Vijaya Karnataka 14 Jul 2019, 5:00 am
ಶೃಂಗೇರಿ: ದೇಶ ಈಗ ಸಂದಿಗ್ಧ ಸ್ಥಿತಿಯಲ್ಲಿದ್ದು, ಶಿಕ್ಷ ಣದಲ್ಲಿ ದೇಶ ಭಕ್ತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಬಂಟರ ಯಾನೆ ನಾಡವರ ಸಂಘದ ಜಿಲ್ಲಾಧ್ಯಕ್ಷ ಸುರೇಂದ್ರ ಶೆಟ್ಟಿ ಹೇಳಿದರು.
Vijaya Karnataka Web CKM-13SRI2


ಪಟ್ಟಣದ ಜಿಎಸ್‌ಬಿ ಸಭಾಮಂದಿರದಲ್ಲಿ ಬಂಟರ ಯಾನೆ ನಾಡವರ ಸಂಘ ಶನಿವಾರ ಏರ್ಪಡಿಸಿದ್ದ ವಿದ್ಯಾರ್ಥಿ ವೇತನ ವಿತರಣೆ, ಸಾಮೂಹಿಕ ಸತ್ಯನಾರಾಯಣ ವ್ರತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶ ಭಕ್ತಿ ಇಲ್ಲದ ಶಿಕ್ಷ ಣಕ್ಕೆ ಅರ್ಥವೇ ಇಲ್ಲ. ಸಮಾಜ ಬಂಧುಗಳ ಮಕ್ಕಳು ವಿದ್ಯಾರ್ಥಿ ವೇತನ ಪಡೆದುಕೊಳ್ಳುವುದರೊಂದಿಗೆ ಸಮಾಜದ ಕಾರ್ಯಕ್ರಮದಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸಮಾಜದ ಋುಣ ತೀರಿಸಲು ನಾವು ಮರೆಯಬಾರದು ಎಂದರು.

ತಾಲೂಕು ಸಂಘದ ನಿಕಟಪೂರ್ವ ಅಧ್ಯಕ್ಷ ಹರೀಶ್‌ ಶೆಟ್ಟಿ ಮಾತನಾಡಿ, ಸಮಾಜದ ಪ್ರತಿಯೊಬ್ಬ ವ್ಯಕ್ತಿಯಲ್ಲೂ ನಾಯಕತ್ವ ಗುಣವಿದ್ದು, ರಾಜಕೀಯದಲ್ಲೂ ಸಮಾಜ ಬಂಧುಗಳು ಸ್ಥಾನ ಮಾನ ಪಡೆಯಬೇಕು. ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಗುಣ ಬೆಳಸಿಕೊಳ್ಳಬೇಕು ಎಂದರು.

ಪ.ಪಂ.ಗೆ ಆಯ್ಕೆಗೊಂಡ ರತ್ನಾಕರಶೆಟ್ಟಿ, ಹರೀಶ್‌ ವಿ.ಶೆಟ್ಟಿ, ರಾಧಿಕಾ ಜಯಕುಮಾರ್‌, ಆಶಾ ದಿನೇಶ್‌ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ವಿದ್ಯಾರ್ಥಿ ವೇತನ ನೀಡಲಾಯಿತು.

ತಾಲೂಕು ಘಟಕದ ಅಧ್ಯಕ್ಷ ರಾಘವೇಂದ್ರ ಎಸ್‌ ಶೆಟ್ಟಿ ಅಧ್ಯಕ್ಷ ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಜಿಲ್ಲಾ ಮಾಜಿ ಅಧ್ಯಕ್ಷ ನವೀನ್‌ ಶೆಟ್ಟಿ, ತಾಲೂಕು ಘಟಕದ ಗೌರವಾಧ್ಯಕ್ಷ ಕೃಷ್ಣ ಶೆಟ್ಟಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ವೀಣಾಶೆಟ್ಟಿ, ತಾಲೂಕು ಕಾರ್ಯದರ್ಶಿ ಮುತ್ತು ಎಂ.ಶೆಟ್ಟಿ , ಶಿವಕುಮಾರ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ