ಆ್ಯಪ್ನಗರ

ಅಪಘಾತ ಆರೋಪಿಗೆ ಸಜೆ ದಂಡ

ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನ ಸಾವಿಗೆ ಕಾರಣವಾದ ಲಾರಿ ಚಾಲಕನಿಗೆ ನಗರದ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿದೆ.

Vijaya Karnataka 12 Feb 2019, 5:00 am
ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನ ಸಾವಿಗೆ ಕಾರಣವಾದ ಲಾರಿ ಚಾಲಕನಿಗೆ ನಗರದ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿದೆ.
Vijaya Karnataka Web accident penalty
ಅಪಘಾತ ಆರೋಪಿಗೆ ಸಜೆ ದಂಡ


ಪುರುಷೋತ್ತಮ ಎಂಬಾತ 2016ರಲ್ಲಿ ಜು.14ರಂದು ತನ್ನ ಸ್ನೇಹಿತ ದಿನೇಶ್‌ ಜಮೀನಿಗೆ ಹೋಗಿ ಬರುವಾಗ ಹಿರೇಮಗಳೂರು ಸಮೀಪ ಬೈಕಿಗೆ ಲಾರಿ ಡಿಕ್ಕಿಹೊಡೆದು ಪುರುಷೋತ್ತಮ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ದಿನೇಶ ತೀವ್ರ ಗಾಯಗೊಂಡಿದ್ದರು. ಪ್ರಕರಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಒಂದನೇ ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎನ್‌.ಎಂ.ರಮೇಶ್‌ ಆರೋಪಿ ಲಾರಿ ಚಾಲಕ ಮಂಜುನಾಥನಿಗೆ 2 ವರ್ಷ ಸಜೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸಹಾಯಕ ಅಭಿಯೋಜಕ ರಾಘವೇಂದ್ರ ರಾಯ್ಕರ್‌ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ