ಆ್ಯಪ್ನಗರ

ಸಮರ್ಪಕ ಮಾಹಿತಿ ನೀಡದ ಅಧಿಕಾರಿ ವಿರುದ್ಧ ಕ್ರಮ

ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆಯ ಸಂಪೂರ್ಣ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ಬೇಜವಾಬ್ದಾರಿತನದ ನಡವಳಿಕೆ ತೋರಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಕೃಷ್ಣಪ್ಪ ಧಿಕಾರಿಗಳಿಗೆ ಎಚ್ಚರಿಸಿದರು.

Vijaya Karnataka 19 Jun 2019, 5:00 am
ಚಿಕ್ಕಮಗಳೂರು : ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆಯ ಸಂಪೂರ್ಣ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ಬೇಜವಾಬ್ದಾರಿತನದ ನಡವಳಿಕೆ ತೋರಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಜಾತಕೃಷ್ಣಪ್ಪ ಧಿಕಾರಿಗಳಿಗೆ ಎಚ್ಚರಿಸಿದರು.
Vijaya Karnataka Web CKM-18RUDRAP6


ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಹಣಕಾಸು ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ಸಭೆಗೆ ನೀಡುವ ಮಾಹಿತಿಯೇ ಬೇರೆ. ವಾಸ್ತವದಲ್ಲಿ ಸ್ಥಿತಿಗತಿಯೇ ಬೇರೆಯಾಗಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡಿರುವುದಿಲ್ಲ. ಪೂರ್ಣಗೊಂಡಿದೆ ಎಂದು ಸಭೆಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಯುಷ್ಮಾನ್‌ ಭಾರತ ಯೋಜನೆಯ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು. ಆಪರೇಷನ್‌ ಆದರೆ ಮಾತ್ರ ಆಯುಷ್ಮಾನ್‌ ಭಾರತ್‌ ಯೋಜನೆಯಿಂದ ಅನುದಾನ ನೀಡುತ್ತಾರೆ. ಬೇರೆ ಯಾವುದೆ ಕಾಯಿಲೆಗಳಿದ್ದರು ಹಣ ನೀಡುವುದಿಲ್ಲ ಎಂದು ಸಾರ್ವಜನಿಕರು ದೂರು ನೀಡಿದ್ದಾರೆ.ಆರೋಗ್ಯ ಇಲಾಖೆಯವರು ಈ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಎಂದರು.

ಜಿ.ಪಂ ಸದಸ್ಯಮಹೇಶ್‌ಒಡೆಯರ್‌ ಮಾತನಾಡಿ, ಸಾಮಾಜಿಕ ಅರಣ್ಯ ಇಲಾಖೆ ಮತ್ತು ಪಶುಪಾಲನೆ ಇಲಾಖೆಯವರು ಸಭೆಗೆ ಸರಿಯಾದ ಮಾಹಿತಿ ನೀಡದೆ ಇರುವುದರಿಂದ ಅವರ ಯಾವುದೆ ಪ್ರಸ್ತಾವನೆಗೆ ಸಮಿತಿಯು ಅನುಮತಿ ನೀಡುತ್ತಿಲ್ಲ. ಇದೇ ರೀತಿ ಕೃಷಿ ಇಲಾಖೆ ಅಧಿಕಾರಿಗಳು ಕೂಡ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆಯಲ್ಲಿ ರೈತರಿಗೆ ಸಿಗಬೇಕಾದ ಸೌಲತ್ತುಗಳು ಸಿಗುತ್ತಿಲ್ಲ ಎಂದರು.

ಜಿ.ಪಂ. ಸದಸ್ಯ ರಾಮಸ್ವಾಮಿ ಮಾತನಾಡಿ, ಸಾಮಾಜಿಕ ಅರಣ್ಯ ಇಲಾಖೆಗೆ ಜಿಲ್ಲಾ ಪಂಚಾಯಿತಿಯಿಂದ ಅನುದಾನ ನೀಡುತ್ತೇವೆ. ಇಲಾಖೆಯವರು ನಮ್ಮ ಗಮನಕ್ಕೆ ತಾರದೆ ಬೇಕಾಬಿಟ್ಟಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳನ್ನು ಚುನಾಯಿತ ಪ್ರತಿನಿಧಿಗಳಿಗೆ ತಿಳಿಸಬೇಕು ಎಂದರು.

ಜಿ.ಪಂ.ಸದಸ್ಯ ಬಣಕಲ್‌ಶ್ಯಾಮಣ್ಣ ಮಾತನಾಡಿ, ಜಿಲ್ಲೆಯಲ್ಲಿರುವ ರೇಷ್ಮೆ ಇಲಾಖೆ ಜಾಗವನ್ನು ಕೆಲವರು ಒತ್ತುವರಿ ಮಾಡುತ್ತಿದ್ದಾರೆ. ಇಲಾಖಾ ಅಧಿಕಾರಿಗಳು ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿದರು.

ಜಿ.ಪಂ. ಸದಸ್ಯರಾದ ಶಕುಂತಲಾಮಲ್ಲಪ್ಪ, ಚಂದ್ರಮ್ಮ, ಹಣಕಾಸು ಲೆಕ್ಕ ಪರಿಶೋಧನೆ ಮತ್ತು ಯೋಜನೆ ಸ್ಥಾಯಿ ಸಮಿತಿ ಸದಸ್ಯರಾದ ನಾಗರತ್ನಮ್ಮ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ