ಆ್ಯಪ್ನಗರ

ವೈದ್ಯರ ನೇಮಕಕ್ಕೆ ಕ್ರಮ

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸæೕರಿದಂತæ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಾರ್ವಜನಿಕರಿಗೆ ಅಗತ್ಯ ಸೇವೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಎಂ.ವಿ.ಸಾವಿತ್ರಿ ಹೇಳಿದರು.

Vijaya Karnataka 27 Jun 2018, 5:00 am
ಶೃಂಗೇರಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಸæೕರಿದಂತæ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಸಾರ್ವಜನಿಕರಿಗೆ ಅಗತ್ಯ ಸೇವೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಎಂ.ವಿ.ಸಾವಿತ್ರಿ ಹೇಳಿದರು.
Vijaya Karnataka Web action for the appointment of a docto
ವೈದ್ಯರ ನೇಮಕಕ್ಕೆ ಕ್ರಮ


ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಜನಪ್ರತಿನಿಧಿಗಳು ಮತ್ತು ವೈದ್ಯರೊಂದಿಗೆ ಮಾತನಾಡಿದರು.ಆಸ್ಪತ್ರೆಯನ್ನು 2007 ರಲ್ಲಿ ಮೇಲ್ದರ್ಜೆಗೆ ಏರಿಸಲಾಗಿದೆ. ಆದರೂ ಕೇವಲ ಇಬ್ಬರೇ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಲು ಕನಿಷ್ಠ ಕ್ರಮ ಅನುಸರಿಸುವಂತೆ ಸೂಚನೆ ನೀಡಿದರು.ಆಸ್ಪತ್ರೆಯಲ್ಲಿ ಸೊಳ್ಳೆ ಕಾಟವನ್ನು ತಪ್ಪಿಸಲು ಆಸ್ಪತ್ರೆ ಸುತ್ತ ನೀರು ನಿಲ್ಲದಂತೆ,ತ್ಯಾಜ್ಯ ಸಂಗ್ರಹವಾಗದಂತೆ,ಕಿಟಿಕಿಗಳಿಗೆ ಮೆಶ್‌ ಅಳವಡಿಸಬೇಕು.ಎಲ್ಲಾ ನೌಕರರು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ಸ್ವಚ್ಛತೆಯ ಬಗ್ಗೆ ನೌಕರರು ಹೆಚ್ಚಿನ ಕಾಳಜಿ ವಹಿಸಬೇಕು.ತಡವಾಗಿ ಬರುವ ನೌಕರರ ಬಗ್ಗೆ ಎಚ್ಚರಿಕೆ ಸಂದೇಶ ನೀಡಿ,ಸರಿಪಡಿಸಿಕೊಳ್ಳದಿದ್ದರೆ ಕಪ್ಪು ಪಟ್ಟಿಗೆ ಸೇರಿಸಬೇಕು.ಶೌಚಾಲಯ,ಸ್ನಾನಗೃಹವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು.ಶೌಚಾಲಯದ ಎದುರು ಮ್ಯಾಟ್‌ ಹಾಕಬೇಕು ಎಂದು ಸೂಚನೆ ನೀಡಿದರು.

ಜಿಪಂ ಸದಸ್ಯ ಬಿ.ಶಿವಶಂಕರ್‌ ಮಾತನಾಡಿ,ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಎಂಬಿಬಿಎಸ್‌ ವೈದ್ಯರ ಅಗತ್ಯವಿದ್ದು,ಕುಗ್ರಾಮದಲ್ಲಿ ಹಾವು ಕಡಿದರೆ ರೋಗಿಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗುತ್ತಿಲ್ಲ.ಕೆರೆ,ಬೇಗಾರು,ನೆಮ್ಮಾರ್‌,ಕಿಗ್ಗಾದಲ್ಲಿ ವೈದ್ಯರ ಹುದ್ದೆ ತುಂಬಬೇಕು.ವೈದ್ಯರ ಕೊರತೆ ಇದೆ. ಇದರಿಂದ ಗ್ರಾಮೀಣ ಪ್ರದೇಶದ ರೋಗಿಗಳಿಗೆ ಅಗತ್ಯ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ.ವೈದ್ಯರ ಸಂಖ್ಯೆ ಕಡಿಮೆ ಇದ್ದರೂ,ವೈದ್ಯರಿಗೆ ಪದೇ ಪದೇ ಸಭೆಗಳಿಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ.ಇದನ್ನು ತಪ್ಪಿಸಲು ಪ್ರತ್ಯೇಕ ಅಧಿಕಾರಿ ನೇಮಕ ಮಾಡಬಹುದಾಗಿದೆ ಎಂದು ಸಲಹೆ ನೀಡಿದರು.ಇದಕ್ಕೆ ಉತ್ತರಿಸಿದ ಆಯುಕ್ತರು ವಿಡಿಯೋ ಕಾನ್‌ಫರೆನ್ಸ್‌ ಮೂಲಕ ಸಭೆಯನ್ನು ಆಯೋಜಿಸುವ ಬಗ್ಗೆ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜಿಪಂ ಸದಸ್ಯೆ ಶಿಲ್ಪಾ ಮಾತನಾಡಿ, ಬೇಗಾರ್‌ ಆಸ್ಪತ್ರೆಯಲ್ಲಿ ಔಷಧಿ ಸಂಗ್ರಹವಿದ್ದರೂ,ರೋಗಿಗಳಿಗೆ ಹೊರಗಡೆಯಿಂದ ಔಷಧಿ ತರುವಂತೆ ಚೀಟಿ ನೀಡಲಾಗುತ್ತಿದೆ.ಬಡವರಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದರೂ,ಸೇವೆ ನೀಡುವಲ್ಲಿ ಆಸ್ಪತ್ರೆ ವಿಫಲವಾಗಿದೆ ಎಂದು ದೂರಿದರು. ಸರ್ವೋಚ್ಛ ನ್ಯಾಯಾಲಯ ಆದೇಶದಂತೆ ಗುತ್ತಿಗೆ ನೌಕರರಿಗೆ ಸಮಾನ ವೇತನ ನೀಡುವಂತೆ ಆದೇಶವಿದ್ದರೂ,ಸರಕಾರ ಈ ನೌಕರರನ್ನು ಏಕೆ ಪರಿಗಣಿಸುತ್ತಿಲ್ಲ ಎಂದು ಕೇಳಲಾದ ಪ್ರಶ್ನೆಗೆ,ಈ ಬಗ್ಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಆಯುಕ್ತರು ತಿಳಿಸಿದರು.

ಸಾರ್ವಜನಿಕ ಆಸ್ಪತ್ರೆಯ ವಿವಿಧ ವಿಭಾಗಕ್ಕೆ ಭೇಟಿ ನೀಡಿದ ಆಯುಕ್ತರು,ನಂತರ ಸಭೆ ನಡೆಸಿದರು. ಜಿಲ್ಲಾ ಆಯುಷ್‌ ಅಧಿಕಾರಿ ಡಾ,ಗೀತಾ,ಜಿಲ್ಲಾ ನೋಡಲ್‌ ಅಧಿಕಾರಿ ಡಾ.ಪೂರ್ಣಿಮಾ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಅಶ್ವಥ್ಥ್‌ಬಾಬು,ಆಸ್ಪತ್ರೆ ವೈದ್ಯಾಧಿಕಾರಿ ಡಾ.ಎಲ್ಡೋಸ್‌,ಡಾ.ಅಂಬಿಕಾ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ