ಆ್ಯಪ್ನಗರ

ಸಿದ್ದಾರ್ಥ ಹೆಗ್ಡೆ ಮನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶುಕ್ರವಾರ ಬೆಳಗ್ಗೆ ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ ಸಿದ್ಧಾರ್ಥ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Vijaya Karnataka Web 2 Aug 2019, 10:43 am
ಚಿಕ್ಕಮಗಳೂರು: ಕೆಫೆ ಕಾಫಿ ಡೇ ಸ್ಥಾಪಕ, ಮಾಲೀಕ ವಿ.ಜಿ. ಸಿದ್ಧಾರ್ಥ ಹೆಗ್ಡೆ ವಿಧಿವಶರಾದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಸಿದ್ಧಾರ್ಥ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
Vijaya Karnataka Web Nirmalanandanatha Swamiji


ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೇತನಹಳ್ಳಿ ಎಸ್ಟೇಟ್‌ನಲ್ಲಿರುವ ಸಿದ್ಧಾರ್ಥ ಮನೆಗೆ ಸ್ವಾಮೀಜಿ ಇಂದು ಬೆಳಗ್ಗೆ ಭೇಟಿ ನೀಡಿದರು.

ಸಿದ್ಧಾರ್ಥ ಅವರ ತಾಯಿ ವಾಸಂತಿ ಹೆಗ್ಟೆ, ಪತ್ನಿ ಮಾಳವಿಕಾ, ಮಕ್ಕಳಾದ ಅಮರ್ತ್ಯ ಮತ್ತು ಈಶಾನ್‌ಗೆ ಸ್ವಾಮೀಜಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಲ್ಲದೆ, ಕರ್ನಾಟಕದ ಕಾಫಿಯ ಘಮವನ್ನು ಜಗತ್ತಿನೆಲ್ಲೆಡೆ ಹರಡಿದ ಉದ್ಯಮಿ ವಿ.ಜಿ ಸಿದ್ಧಾರ್ಥ ಕಳೆದ ಸೋಮವಾರ ಸಂಜೆ ಮಂಗಳೂರಿನ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ದಿಢೀರ್ ನಾಪತ್ತೆಯಾಗಿದ್ದರು. ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಬುಧವಾರ ಬೆಳಗ್ಗೆ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿತ್ತು.

ದೇಶಾದ್ಯಂತ, ಆಘಾತ, ಶೋಕಕ್ಕೆ ಕಾರಣವಾದ ಈ ಘಟನೆಯ ಬಳಿಕ ಅವರ ಮೃತದೇಹವನ್ನು ಹುಟ್ಟೂರು ಚೇತನಹಳ್ಳಿಗೆ ತಂದು ಬುಧವಾರ ಸಂಜೆ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಹಿರಿಯ ನಾಯಕ ಎಸ್‌.ಎಂ ಕೃಷ್ಣ ಸಹಿತ ಹಲವಾರು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದು ಅಗಲಿದ ಉದ್ಯಮಿಗೆ ಅಶ್ರುತರ್ಪಣ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ