ಆ್ಯಪ್ನಗರ

ಅತಿವೃಷ್ಟಿ ಎದುರಿಸಲು ಆಡಳಿತ ಸನ್ನದ್ಧ

ಮುಂಗಾರು ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ಎದುರಿಸಲು ಸರಕಾರ ಅಗತ್ಯ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

Vijaya Karnataka 7 Aug 2019, 5:00 am
ಶೃಂಗೇರಿ : ಮುಂಗಾರು ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ಎದುರಿಸಲು ಸರಕಾರ ಅಗತ್ಯ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
Vijaya Karnataka Web CKM-6SRI3


ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಮತ್ತಿತರ ಅಧಿಕಾರಿಗಳ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.ಕಳೆದ ವರ್ಷ ಅತಿವೃಷ್ಠಿಯಿಂದ ಅಪಾರ ನಷ್ಟ ಉಂಟಾಗಿತ್ತು. ಈ ಬಾರಿ ಅದು ಮರುಕಳಿಸದಂತೆ ಸರಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ.ಪ್ರವಾಹ ಸಂದರ್ಭ ಯಾವುದೇ ಪರಿಸ್ಥಿತಿ ಎದುರಿಸಲು ಬೋಟ್‌,ವೈದ್ಯಕೀಯ ಸೇವೆ,ಈಜುಗಾರರು,ಪೊಲೀಸ್‌ ವ್ಯವಸ್ಥೆ ಎಲ್ಲವನ್ನೂ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ.24 ಗಂಟೆಯೂ ತೀವ್ರ ನಿಗಾದಲ್ಲಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೊಬೈಲ್‌ ಸಂಪರ್ಕದಲ್ಲಿರಲು ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಗೌತಮ್‌ ಬಗಾದಿ ಮಾತನಾಡಿ, ಪ್ರವಾಹದಿಂದ ಸಂತ್ರಸ್ತರಾಗುವ ಜನರನ್ನು ಮುಂಜಾಗೃತ ಕ್ರಮವಾಗಿ ಸ್ಥಳಾಂತರಗೊಳಿಸಲಾಗಿದೆ.ನೆರೆಯಿಂದ ಉಂಟಾಗುವ ಯಾವುದೇ ಪರಿಸ್ಥಿತಿ ಎದುರಿಸಲು ಲೋಕೋಪಯೋಗಿ ಇಲಾಖೆ,ಅರಣ್ಯ ಇಲಾಖೆಗೂ ಸೂಚನೆ ನೀಡಲಾಗಿದೆ.ತುರ್ತು ಸಂದರ್ಭ ಅನುದಾನ ಬಳಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಜಿಪಂ ಸಿಇಒ ಅಶ್ವತಿ,ತಹಸೀಲ್ದಾರ್‌ ಎರ್ರಿಸ್ವಾಮಿ,ಪಪಂ ಮುಖ್ಯಾಧಿಕಾರಿ ರವಿಕುಮಾರ್‌ ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ