ಆ್ಯಪ್ನಗರ

ಗೋರಿಗಂಡಿ ಮಸೀದಿಗೆ ಆಡಳಿತಾಧಿಕಾರಿ

ತಾಲೂಕಿನ ಗೋರಿಗಂಡಿ ಮದೀನ ಮಸೀದಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯವಕ್ಫ್ ಮಂಡಳಿ ಆದೇಶಿಸಿದೆ ಎಂದು ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಎಸ್‌.ವೈ.ಮುಕ್ತಿಯಾರ್‌ ಅಹ್ಮದ್‌ ಹೇಳಿದರು.

Vijaya Karnataka 5 Jun 2019, 5:00 am
ಚಿಕ್ಕಮಗಳೂರು : ತಾಲೂಕಿನ ಗೋರಿಗಂಡಿ ಮದೀನ ಮಸೀದಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯವಕ್ಫ್ ಮಂಡಳಿ ಆದೇಶಿಸಿದೆ ಎಂದು ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ ಎಸ್‌.ವೈ.ಮುಕ್ತಿಯಾರ್‌ ಅಹ್ಮದ್‌ ಹೇಳಿದರು.
Vijaya Karnataka Web CKM-4SHIVU1


ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಖಾಂಡ್ಯ ಹೋಬಳಿ ಗೋರಿಗಂಡಿ ಮದೀನ ಮಸೀದಿಯಲ್ಲಿ ಕಳೆದ 4 ವರ್ಷದಿಂದ ಯಾವುದೇ ಸಮಿತಿ ಅಸ್ತಿತ್ವದಲ್ಲಿಲ್ಲ. ಆದರೂ, ಕೆಲವು ಖಾಸಗಿ ವ್ಯಕ್ತಿಗಳು ಕೂಟ ಕಟ್ಟಿಕೊಂಡು ಮಸೀದಿ ಅಭಿವೃದ್ಧಿ ಹೆಸರಿನಲ್ಲಿ ಲಕ್ಷಾಂತರ ರೂ.ಗಳನ್ನು ಸಾರ್ವಜನಿಕರಿಂದ ವಸೂಲಿ ಮಾಡಿ ಹಣ ಲೂಟಿ ಮಾಡುತ್ತಿದ್ದಾರೆ. ಇವರ ಮೇಲೆ ಬಾಳೆಹೊನ್ನೂರು ಠಾಣೆಯಲ್ಲಿ ಕೇಸು ಕೂಡ ದಾಖಲಾಗಿದೆ. ಈ ಬಗ್ಗೆ ಸಾರ್ವಜನಿಕರು ಜಿಲ್ಲಾ ವಕ್ಫ್ ಮಂಡಳಿಗೆ ದೂರು ನೀಡಿದ್ದರು. ದೂರು ಪರಿಶೀಲಿಸಿದ ಜಿಲ್ಲಾ ವಕ್ಫ್ ಬೋರ್ಡ್‌ ರಾಜ್ಯ ಮಂಡಳಿ ಗಮನಕ್ಕೆ ತರಲಾಗಿತ್ತು. ರಾಜ್ಯ ವಕ್ಫ್ ಮಂಡಳಿಯವರು ಮಸೀದಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಸೀದಿಗೆ ಆಡಳಿತಾಧಿಕಾರಿಯನ್ನಾಗಿ ಶಿಕ್ಷಣ ಇಲಾಖೆಯ ವಹೀದ್‌ ಅಹ್ಮದ್‌ ಅವರನ್ನು ನೇಮಕ ಮಾಡಿ ಆದೇಶಿಸಿದೆ ಎಂದು ಹೇಳಿದರು.ಗ್ರಾಮಸ್ಥರಾದ ಆಯೂಬ್‌ಖಾನ್‌, ಫಾಸಿಬ್‌ ಅಹ್ಮದ್‌, ಆಡಳಿತಾಧಿಕಾರಿ ವಹೀದ್‌ ಅಹ್ಮದ್‌ ಗೋಷ್ಠಿಯಲ್ಲಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ