ಆ್ಯಪ್ನಗರ

ಆಯುಷ್ಮಾನ್‌ ಯೋಜನೆ ಸದ್ಬಳಕೆಗೆ ಸಲಹೆ

ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ 5 ಲಕ್ಷ ರೂ.ವರೆಗೆ ವೈದ್ಯಕೀಯ ಸೌಲಭ್ಯ ಸಿಗಲಿದ್ದು, ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬೆಳ್ಳಿಪ್ರಕಾಶ್‌ ಹೇಳಿದರು.

Vijaya Karnataka 20 Feb 2019, 5:00 am
ಕಡೂರು : ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ 5 ಲಕ್ಷ ರೂ.ವರೆಗೆ ವೈದ್ಯಕೀಯ ಸೌಲಭ್ಯ ಸಿಗಲಿದ್ದು, ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಬೆಳ್ಳಿಪ್ರಕಾಶ್‌ ಹೇಳಿದರು.
Vijaya Karnataka Web CKM-19KDR1


ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ನಾಗರಿಕರಿಗೆ ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡ್‌ ವಿತರಿಸಿ ಅವರು ಮಾತನಾಡಿದರು.

ಜನತೆ ಆರೋಗ್ಯದಿಂದ ಇರಬೇಕೆಂಬುದೇ ಎಲ್ಲರ ಬಯಕೆ. ಅಕಸ್ಮಾತ್‌ ಅನಾರೋಗ್ಯಕ್ಕೆ ತುತ್ತಾದಾಗ ತಕ್ಷ ಣ ಅವರಿಗೆ ಉತ್ತಮ ಚಿಕಿತ್ಸೆ ಲಭ್ಯವಾಗಲಿ ಮತ್ತು ಉಚಿತವಾಗಿ ದೊರಕಲಿ ಎಂಬ ಸದುದ್ದೇಶದಿಂದ ಕೇಂದ್ರ ಸರಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಆಯುಷ್ಮಾನ್‌ ಭಾರತ್‌ ವಿಶ್ವದ ಅತಿ ದೊಡ್ಡ ಆರೋಗ್ಯ ಯೋಜನೆಯಾಗಿದೆ. ದೇಶಾದ್ಯಂತ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಇದರ ಸದುಪಯೋಗ ಸಿಗಲಿದೆ ಎಂದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಉಮೇಶ್‌ ಮಾತನಾಡಿ, ಆಯುಷ್ಮಾನ್‌ ಭಾರತ್‌ ಯೋಜನೆಯ ಕಾರ್ಡ್‌ ವಿತರಣೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಇದುವರೆಗೆ ಮಾತ್ರ ನೀಡಲಾಗುತ್ತಿತ್ತು. ಇದೀಗ ತಾಲೂಕು ಮಟ್ಟದ ಸಾರ್ವಜನಿಕ ಅಸ್ಪತ್ರೆಯಲ್ಲಿ ಕೂಡ ವಿತರಣೆ ಮಾಡಲಾಗುತ್ತದೆ. ಬಿಪಿಎಲ್‌, ಎಪಿಎಲ್‌ ಕಾರ್ಡ್‌ ಜೊತೆಯಲ್ಲಿ ಆಧಾರ್‌ ಕಾರ್ಡ್‌ ತಂದಲ್ಲಿ ಆಯುಷ್ಮಾನ್‌ ಭಾರತ್‌ ಕಾರ್ಡ್‌ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.

ಜಿ.ಪಂ. ಸದಸ್ಯರಾದ ಮಹೇಶ್‌ ಒಡೆಯರ್‌, ಶರತ್‌ ಕೃಷ್ಣಮೂರ್ತಿ, ಬೀರೂರು ಪುರಸಭೆ ಅಧ್ಯಕ್ಷೆ ಸವಿತಾ ರಮೇಶ್‌, ಸರಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ವೈ.ಎಂ. ತಿಪ್ಪೇಶ್‌, ಬಿಜೆಪಿ ಮುಖಂಡ ಟಿ.ಆರ್‌. ಲಕ್ಕಪ್ಪ, ಡಾ.ಎಸ್‌.ವಿ. ದೀಪಕ್‌, ಡಾ.ಎಸ್‌.ಕೆ. ಪ್ರಭು, ಡಾ.ಗುರುಮೂರ್ತಿ, ಡಾ.ನಾಗರಾಜು, ಡಾ. ಶಿವಕುಮಾರ್‌, ಪ್ರಯೋಗಾಲಯ ತಂತ್ರಜ್ಞ ಸುರೇಶ್‌, ವಾಜಪೇಯಿ ಆರೋಗ್ಯ ಯೋಜನೆಯ ಪ್ರತಿನಿಧಿ ಈಶ್ವರ್‌, ಆಯುಷ್ಮಾನ್‌ ಭಾರತ್‌ ಆರೋಗ್ಯ ಯೋಜನೆಯ ಪ್ರತಿನಿಧಿ ಸಂಜಯ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ