ಆ್ಯಪ್ನಗರ

ಸುಸ್ಥಿತಿ ವಾಹನಗಳಿಂದ ವಾಯುಮಾಲಿನ್ಯ ತಡೆಯಬಹುದು

ಸುಸ್ಥಿತಿಯ ವಾಹನಗಳಿಂದ ವಾಯುಮಾಲಿನ್ಯ ತಡೆಗಟ್ಟಲು ಸಾಧ್ಯ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಸಪ್ಪ ಶಿರೋಳ್ಕರ್‌ ಹೇಳಿದರು.

Vijaya Karnataka 21 Nov 2018, 5:00 am
ಚಿಕ್ಕಮಗಳೂರು: ಸುಸ್ಥಿತಿಯ ವಾಹನಗಳಿಂದ ವಾಯುಮಾಲಿನ್ಯ ತಡೆಗಟ್ಟಲು ಸಾಧ್ಯ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಸಪ್ಪ ಶಿರೋಳ್ಕರ್‌ ಹೇಳಿದರು.
Vijaya Karnataka Web air pollution can be prevented from sustainable vehicles
ಸುಸ್ಥಿತಿ ವಾಹನಗಳಿಂದ ವಾಯುಮಾಲಿನ್ಯ ತಡೆಯಬಹುದು


ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಏರ್ಪಡಿಸಿದ್ದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಾಹನ ಹೊರ ಸೂಸುವ ಹೊಗೆಯಿಂದ ಮಾಯುಮಾಲಿನ್ಯ ಉಂಟಾಗಿ ಉಸಿರಾಟ ತೊಂದರೆ ಸೇರಿದಂತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವಾಯುಮಾಲಿನ್ಯ ತಡೆಗಟ್ಟಲು ವಾಹನಗಳ ಬಳಕೆ ಕಡಿಮೆ ಮಾಡುವುದರ ಜತೆಗೆ ಸಮೂಹ ಸಾರಿಗೆ ವ್ಯವಸ್ಥೆಯನ್ನು ಬಳಕೆ ಮಾಡುವುದು ಉತ್ತಮ ಎಂದರು.

ಉಪನ್ಯಾಸಕ ಹನುಮಂತಪ್ಪ ಮಕರಿ ಮಾತನಾಡಿ, ಮನುಷ್ಯ ಸ್ವಹಿತಾಸಕ್ತಿಗಾಗಿ ಸುತ್ತಮುತ್ತಲಿನ ಪರಿಸರ ಮಾಲಿನ್ಯಗೊಳಿಸುತ್ತಿದ್ದು, ಇದರಿಂದ ತನ್ನ ಆರೋಗ್ಯ ಹಾಳುಮಾಡಿಕೊಳ್ಳುವಂತಹ ದುಸ್ಸಾಹಸಕ್ಕೆ ಕೈಹಾಕಿದ್ದಾನೆ. ಇಂತಹ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕುವುದು ಅವಶ್ಯ ಎಂದರು.

ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಲೋಕೇಶ್‌ ಅಧ್ಯಕ್ಷ ತೆ ವಹಿಸಿ ಮಾತನಾಡಿ, ಇತ್ತೀಚಿನ ದಿನದಲ್ಲಿ ವಾಯುಮಾಲಿನ್ಯದಿಂದ ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಜನ ಮನೆಯಿಂದ ಹೊರಗೆ ಬಾರದಿರುವ ಹಾಗೂ ಶಾಲೆಗಳಿಗೆ ರಜೆ ನೀಡುವಂತಹ ಪರಿಸ್ಥಿತಿ ಉಂಟಾಗಿದೆ. ಜನರು ಉಸಿರಾಟ ತೊಂದರೆಯಿಂದ ಬಳಲುತ್ತಿದ್ದಾರೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಆದ್ಯತೆ ನೀಡುವುದು ಅನಿವಾರ್ಯವಾಗಿದೆ ಎಂದರು.

ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷ ಕ ರಾಮಚಂದ್ರ ವಿದ್ಯಾರ್ಥಿಗಳಿಗೆ ಹಾಗೂ ಸಭಿಕರಿಗೆ ಪರಿಸರ ಮಾಲಿನ್ಯ ನಿಯಂತ್ರಣದ ಪ್ರತಿಜ್ಞಾ ವಿಧಿ ಬೋಧಿಸಿದರು.

ವಾಹನ ನಿರೀಕ್ಷ ಕ ನರೇಂದ್ರ, ಉಪನ್ಯಾಸಕರಾದ ಮಂಜುನಾಥ್‌, ಎನ್‌.ಜಿ ಹೆಗಡೆ ಮತ್ತಿತರರು ಹಾಜರಿದ್ದರು.

ವಿದ್ಯಾರ್ಥಿನಿ ಸೌಮ್ಯ ಪ್ರಾರ್ಥಿಸಿ, ಸಂತೋಷ್‌ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ