ಆ್ಯಪ್ನಗರ

ನೋ.. ಖಾತೆ ಕ್ಯಾತೆ.. ಅದೆಲ್ಲಾ ಮುಗಿದ ಅಧ್ಯಾಯ..! ಚಿಕ್ಕಮಗಳೂರಿನಲ್ಲಿ ಆರ್‌ ಅಶೋಕ್‌ ಸ್ಪಷ್ಟನೆ

ಈಗ ಯಾವುದೇ ಖಾತೆ ಕ್ಯಾತೆ ಇಲ್ಲ. ಎಲ್ಲ ತಣ್ಣಗಾಗಿದೆ. ಎಲ್ಲರೂ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಜೊತೆ ಇದ್ದಾರೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಹೇಳಿದ್ದಾರೆ. ಎಲ್ಲರ ಜೊತೆಯೂ ಮಾತುಕತೆ ನಡೆಸಲಾಗಿದೆ. ಎಲ್ಲರೂ ಸಮಾಧಾನವಾಗಿದ್ದಾರೆ ಎಂದಿದ್ದಾರೆ.

Vijaya Karnataka Web 24 Jan 2021, 5:05 pm
ಚಿಕ್ಕಮಗಳೂರು: ಖಾತೆ ಕ್ಯಾತೆ ಮುಗಿದ ಅಧ್ಯಾಯ. ಶನಿವಾರವೇ ಎಲ್ಲಾ ಮುಗಿದಿದೆ. ಇಡೀ ಮಂತ್ರಿ ಮಂಡಲದ ಸದಸ್ಯರು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಜೊತೆ ಇದ್ದಾರೆ. ಈಗ ಎಲ್ಲರೂ ಶಾಂತ ರೀತಿಯಿಂದ ಇದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
Vijaya Karnataka Web r ashok
ಆರ್‌ ಅಶೋಕ್‌, ಕಂದಾಯ ಸಚಿವ (ಸಂಗ್ರಹ ಚಿತ್ರ)


ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆಯುತ್ತಿರುವ ಜನಸೇವಕ ಸಮಾವೇಶ ಹಾಗೂ ಶೃಂಗೇರಿಯಲ್ಲಿ ಅಕ್ಷರ ಮಿತ್ರ ಕಾರ್ಯಕ್ರಮದ ನಿಮಿತ್ತ ಜಿಲ್ಲೆಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ಶುಕ್ರವಾರವೇ ಗೋಪಾಲಯ್ಯ, ಎಂಟಿಬಿ ನಾಗರಾಜ್, ಶಂಕರ್ ಹಾಗೂ ಸುಧಾಕರ್ ಅವರನ್ನು ಕರೆಸಿ ಮಾತನಾಡಿದ್ದೇನೆ. ಯಾರ‍್ಯಾರಿಗೆ ಬೇಸರವಿತ್ತೋ ಅವರನ್ನೆಲ್ಲಾ ಕರೆದು ನಾನು ಹಾಗೂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದೇವೆ ಎಂದರು.

ಖಾತೆಯ ಮರು ಹಂಚಿಕೆಯಾಗಿದೆ. ಈಗ ಎಲ್ಲಾ ಸಮಾಧಾನವಾಗಿ, ಶಾಂತವಾಗಿ ಇದ್ದಾರೆ. ಯಾವುದೇ ರೀತಿಯ ಗೊಂದಲ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಯಾರ‍್ಯಾರು ಆಗಬೇಕೆಂದು ಬಾಕಿ ಇದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನ ಅನೌನ್ಸ್ ಮಾಡುತ್ತಾರೆ ಎಂದು ಹೇಳಿದರು.
ಸ್ವಪ್ರತಿಷ್ಠೆಗಾಗಿ ಹೋರಾಟ, ಸಾರಿಗೆ ನೌಕರರ ಮುಷ್ಕರಕ್ಕೆ ಆರ್‌. ಅಶೋಕ್ ಕಿಡಿರೆಸಾರ್ಟ್‌ಗೆ ಯಾರ‍್ಯಾರೋ ಬಂದಿದ್ದರು ಅಂತ ಹೇಳಿದ್ದೀರಾ. ಯಾರ‍್ಯಾರೋ ಬಂದಿರಲಿಲ್ಲ. ಅವರಿಬ್ಬರು ಸ್ನೇಹಿತರು ಯಾವುದೋ ಕಾರಣಕ್ಕೆ ಬಂದಿರಬಹುದು ಎಂದು ಅಸಮಾಧಾನಿಕರ ಗುಪ್ತ ಸಭೆಗೆ ಕಂದಾಯ ಸಚಿವ ಆರ್.ಅಶೋಕ್ ತೆಪೆ ಹಚ್ಚುವ ಮಾಡಿದರು.
ಡಿಸಿಗಳ ನಡೆ ಹಳ್ಳಿ ಕಡೆಗೆ ಯೋಜನೆ: ಹಳ್ಳಿ ಜನರ ಸಮಸ್ಯೆಗೆ ಮನೆ ಬಾಗಿಲಲ್ಲೇ ಪರಿಹಾರ, ಸಚಿವ ಆರ್​. ಅಶೋಕ್​ಶಿವಮೊಗ್ಗ ಕೇಸ್‌ ಸಿಬಿಐಗಿಲ್ಲ..!
ಇದೇ ವೇಳೆ, ಶಿವಮೊಗ್ಗ ಬಳಿ ನಡೆದ ಸ್ಫೋಟದ ಸಂಬಂಧಮಾತನಾಡಿದ ಅವರು, ಶಿವಮೊಗ್ಗದ ಮಾಜಿ ಶಾಸಕ ಪ್ರಸನ್ನ ಕುಮಾರ್ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದರು. ಈ ಪ್ರಕರಣ ಸಿಬಿಐಗೆ ವಹಿಸುವಂತದ್ದಲ್ಲ. ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ನಮ್ಮ ಪೊಲೀಸರೇ ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ