ಚಿಕ್ಕಮಗಳೂರು :ಶ್ರೀಗುರು ದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾದಲ್ಲಿ ಈ ಹಿಂದೆ ಇದ್ದ ಪೂಜಾ ಪದ್ಧತಿಗಳಿಗೆ ತಕ್ಷಣ ಅವಕಾಶ ಮಾಡಿಕೊಡಬೇಕು ಎಂದು ಕೋಮು ಸೌಹಾರ್ದ ವೇದಿಕೆ ಜಿಲ್ಲಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ. 1989ರಲ್ಲಿ ಧಾರ್ಮಿಕ ದತ್ತಿ ಆಯುಕ್ತರು ನೀಡಿದ ಆದೇಶದಂತೆ ಯಥಾಸ್ಥಿತಿ ಕಾಪಾಡಲು ನೀಡಿರುವ ತೀರ್ಪು ಐತಿಹಾಸಿಕವಾಗಿದೆ. 35 ವರ್ಷಗಳಿಂದ ಈ ವಿವಾದ ಕೆಲವು ರಾಜಕೀಯ ಪಕ್ಷಗಳಿಗೆ ಬಂಡವಾಳ ಆಗಿತ್ತು ಎಂದು ವೇದಿಕೆ ಕಾರ್ಯಕರ್ತರು ಮನವಿಯಲ್ಲಿ ತಿಳಿಸಿದ್ದಾರೆ.
ಹಿಂದು ಅರ್ಚಕರ ಅವಶ್ಯಕತೆ ಇದ್ದರೆ ನೇಮಕ ಮಾಡಬಹುದು ಎಂದು ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕೋಮು ಸೌಹಾರ್ದ ವೇದಿಕೆ ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತಂದಿತ್ತು. ರಾಜ್ಯ ಸರಕಾರ ನೇಮಕ ಮಾಡಿದ್ದ ನ್ಯಾ.ನಾಗಮೋಹನ್ದಾಸ್ ಸಮಿತಿ ಅಲ್ಲಿನ ಆಚರಣೆಗಳ ಬಗ್ಗೆ ವರದಿ ನೀಡಿದ್ದು, ಅದನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಉಸ್ತುವಾರಿಯನ್ನು ಶಾಖಾದ್ರಿ ನೋಡಿಕೊಳ್ಳಲಿದ್ದು, ಶಾಖಾದ್ರಿ ನೇಮಕ ಮಾಡಿದ ಮುಜಾವರ್ ಪೂಜಾ ವಿಧಿವಿಧಾನ ನೆರವೇರಿಸಬೇಕು. 35 ವರ್ಷಗಳ ವಿವಾದಕ್ಕೆ ಇದರೊಂದಿಗೆ ತೆರೆ ಬಿದ್ದಿದೆ. ಈ ವಿಚಾರದಲ್ಲಿ ಜಿಲ್ಲೆಯ ಜನರ ಶಾಂತಿ ಕಡೆಸುತ್ತಿದ್ದ ಕೋಮುವಾದಿಗಳಿಗೆ ಇದು ಎಚ್ಚರಿಕೆ ಗಂಟೆಯಾಗಿದೆ. ತಕ್ಷಣ ಹಿಂದಿನ ಪೂಜಾ ಪದ್ಧತಿಗೆ ಅವಕಾಶ ನೀಡಬೇಕು. ನಾಮಫಲಕಗಳಲ್ಲಿ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಎಂದು ಬರೆಸಬೇಕು ಎಂದು ಒತ್ತಾಯಿಸಿದ್ದಾರೆ. ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿದ್ದೀನ್, ಟಿ.ಎಲ್.ಗಣೇಶ್, ಹಸನಬ್ಬ ಮತ್ತಿತರರು ಹಾಜರಿದ್ದರು.
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ. 1989ರಲ್ಲಿ ಧಾರ್ಮಿಕ ದತ್ತಿ ಆಯುಕ್ತರು ನೀಡಿದ ಆದೇಶದಂತೆ ಯಥಾಸ್ಥಿತಿ ಕಾಪಾಡಲು ನೀಡಿರುವ ತೀರ್ಪು ಐತಿಹಾಸಿಕವಾಗಿದೆ. 35 ವರ್ಷಗಳಿಂದ ಈ ವಿವಾದ ಕೆಲವು ರಾಜಕೀಯ ಪಕ್ಷಗಳಿಗೆ ಬಂಡವಾಳ ಆಗಿತ್ತು ಎಂದು ವೇದಿಕೆ ಕಾರ್ಯಕರ್ತರು ಮನವಿಯಲ್ಲಿ ತಿಳಿಸಿದ್ದಾರೆ.
ಹಿಂದು ಅರ್ಚಕರ ಅವಶ್ಯಕತೆ ಇದ್ದರೆ ನೇಮಕ ಮಾಡಬಹುದು ಎಂದು ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಕೋಮು ಸೌಹಾರ್ದ ವೇದಿಕೆ ಸುಪ್ರೀಂ ಕೋರ್ಟ್ನಿಂದ ತಡೆಯಾಜ್ಞೆ ತಂದಿತ್ತು. ರಾಜ್ಯ ಸರಕಾರ ನೇಮಕ ಮಾಡಿದ್ದ ನ್ಯಾ.ನಾಗಮೋಹನ್ದಾಸ್ ಸಮಿತಿ ಅಲ್ಲಿನ ಆಚರಣೆಗಳ ಬಗ್ಗೆ ವರದಿ ನೀಡಿದ್ದು, ಅದನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.
ಉಸ್ತುವಾರಿಯನ್ನು ಶಾಖಾದ್ರಿ ನೋಡಿಕೊಳ್ಳಲಿದ್ದು, ಶಾಖಾದ್ರಿ ನೇಮಕ ಮಾಡಿದ ಮುಜಾವರ್ ಪೂಜಾ ವಿಧಿವಿಧಾನ ನೆರವೇರಿಸಬೇಕು. 35 ವರ್ಷಗಳ ವಿವಾದಕ್ಕೆ ಇದರೊಂದಿಗೆ ತೆರೆ ಬಿದ್ದಿದೆ. ಈ ವಿಚಾರದಲ್ಲಿ ಜಿಲ್ಲೆಯ ಜನರ ಶಾಂತಿ ಕಡೆಸುತ್ತಿದ್ದ ಕೋಮುವಾದಿಗಳಿಗೆ ಇದು ಎಚ್ಚರಿಕೆ ಗಂಟೆಯಾಗಿದೆ. ತಕ್ಷಣ ಹಿಂದಿನ ಪೂಜಾ ಪದ್ಧತಿಗೆ ಅವಕಾಶ ನೀಡಬೇಕು. ನಾಮಫಲಕಗಳಲ್ಲಿ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಎಂದು ಬರೆಸಬೇಕು ಎಂದು ಒತ್ತಾಯಿಸಿದ್ದಾರೆ. ಕೋಮು ಸೌಹಾರ್ದ ವೇದಿಕೆ ರಾಜ್ಯ ಕಾರ್ಯದರ್ಶಿ ಗೌಸ್ ಮೊಹಿದ್ದೀನ್, ಟಿ.ಎಲ್.ಗಣೇಶ್, ಹಸನಬ್ಬ ಮತ್ತಿತರರು ಹಾಜರಿದ್ದರು.