ಚಿಕ್ಕಮಗಳೂರು: ಅಪಘಾತದಿಂದ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದವರನ್ನು ಖಾಸಗಿ ಆ್ಯಂಬುಲೆನ್ಸ್ ಚಾಲಕರೊಬ್ಬರು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿ ಜಿಶಾನ್ ಅಸಾದ್ ಮಾನವೀಯತೆ ಮೆರೆದ ಚಾಲಕ. ಚಿಕ್ಕಮಗಳೂರಿನಿಂದ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದಾಗ ಹಾಸನ ಸಮೀಪದ ಕುಪ್ಪಳ್ಳಿ ಬಳಿ ಅಪಘಾತಗೊಂಡು ನಾಲ್ಕು ಮಂದಿ ನರಳಾಡುತ್ತಿದ್ದರು.
ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಅಪರಿಚಿತರನ್ನು ಜಿಶಾನ್ ಕೂಡಲೇ ಹಾಸನದ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ಇದಕ್ಕಾಗಿ ಅವರು ಬಿಡಿಗಾಸೂ ಪಡೆದಿಲ್ಲ. ಇವರ ಈ ಮಾನವೀಯ ಮತ್ತು ನಿಸ್ವಾರ್ಥ ಸೇವೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿ ಜಿಶಾನ್ ಅಸಾದ್ ಮಾನವೀಯತೆ ಮೆರೆದ ಚಾಲಕ. ಚಿಕ್ಕಮಗಳೂರಿನಿಂದ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದಾಗ ಹಾಸನ ಸಮೀಪದ ಕುಪ್ಪಳ್ಳಿ ಬಳಿ ಅಪಘಾತಗೊಂಡು ನಾಲ್ಕು ಮಂದಿ ನರಳಾಡುತ್ತಿದ್ದರು.
ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಅಪರಿಚಿತರನ್ನು ಜಿಶಾನ್ ಕೂಡಲೇ ಹಾಸನದ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ಇದಕ್ಕಾಗಿ ಅವರು ಬಿಡಿಗಾಸೂ ಪಡೆದಿಲ್ಲ. ಇವರ ಈ ಮಾನವೀಯ ಮತ್ತು ನಿಸ್ವಾರ್ಥ ಸೇವೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.