ಆ್ಯಪ್ನಗರ

ಚಿಕ್ಕಮಗಳೂರಿನಲ್ಲಿ ಮೂವರು ಕಾರ್ಮಿಕರಿಗೆ ಮಂಗನ ಕಾಯಿಲೆ: ಸೋಂಕು ಹರಡದಂತೆ ಮುನ್ನೆಚ್ಚರಿಕೆ

ಶಿವಮೊಗ್ಗದ ಬಳಿಕ ಚಿಕ್ಕಮಗಳೂರಲ್ಲೂ ಮಂಗನ ಕಾಯಿಲೆ ಭೀತಿ ವ್ಯಕ್ತವಾಗಿದೆ. ಎನ್‌ಆರ್‌ ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಅಸ್ಸಾಂ ಮೂಲದ ಮೂವರು ಕಾರ್ಮಿಕರಿಗೆ ಮಂಗನಕಾಯಿಲೆ ಸೋಂಕು ತಗುಲಿರುವುದನ್ನು ಜಿಲ್ಲಾ ಆರೋಗ್ಯ ಇಲಾಖೆ ದೃಢಪಡಿಸಿದ್ದಾರೆ.

Vijaya Karnataka Web 10 Feb 2020, 10:10 am
ಚಿಕ್ಕಮಗಳೂರು: ಮಲೆನಾಡು ಜಿಲ್ಲೆ ಶಿವಮೊಗ್ಗದ ಬಳಿಕ ಈಗ ಚಿಕ್ಕಮಗಳೂರಿನಲ್ಲೂ ಮಂಗನ ಕಾಯಿಲೆಯ ಭೀತಿ ಎದುರಾಗಿದೆ. ಜಿಲ್ಲೆಯ ಮೂವರು ಕಾರ್ಮಿಕರಿಗೆ ಮಂಗನಕಾಯಿಲೆ ಸೋಂಕು ತಗುಲಿದೆ.
Vijaya Karnataka Web ckm monkey disease


ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದಲ್ಲಿ ಮೂವರು ಅಸ್ಸಾಂ ಕಾರ್ಮಿಕರಿಗೆ ಮಂಗನ ಕಾಯಿಲೆ ತಗುಲಿದೆ ಎಂದು ತಿಳಿದುಬಂದಿದೆ. ಜಿಲ್ಲಾ ಆರೋಗ್ಯ ಇಲಾಖೆ ಕಾರ್ಮಿಕರಿಗೆ ಮಂಗನಕಾಯಿಲೆ ಸೋಂಕು ತಗುಲಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ಕಾರ್ಮಿಕರಿಂದ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ.

ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮಕ್ಕೆ ವಿಚಕ್ಷಣ ಡಾಕ್ಟರ್ ಸುಭಾಷ್ ನೇತೃತ್ವದ ತಂಡ ದೌಡಾಯಿಸಿದ್ದು, ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಗೆ ಕಾಯಿಲೆ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ತೀರ್ಥಹಳ್ಳಿಯಲ್ಲಿ23 ಮಂಗನ ಕಾಯಿಲೆ ಪ್ರಕರಣ

ಮಂಗನಕಾಯಿಲೆ ಹರಡಿದ ಸ್ಥಳ ಹಾಟ್ ಸ್ಪಾಟ್ ಎಂದು ಪರಿಗಣನೆ ಮಾಡಲಾಗಿದ್ದು, ಸ್ಥಳದ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಮಂಗನಕಾಯಿಲೆ ನಿರೋಧಕ ಲಸಿಕೆ ಹಾಕಿಸಲಾಗುತ್ತಿದೆ. 6 ರಿಂದ 65 ವರ್ಷದ ವಯೋಮಾನದವರಿಗೆ ಮಂಗನಕಾಯಿಲೆ ನಿರೋಧಕ ಲಸಿಕೆಯನ್ನು ಹಾಕಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಲಸಿಕೆ ಹಾಕಿಸಿಕೊಂಡರೂ ಕೆಎಫ್‌ಡಿ: ರೋಗನಿರೋಧಕ ಶಕ್ತಿ ಕಡಿಮೆ ಇದ್ದಲ್ಲಿ ಮತ್ತೊಮ್ಮೆ ಸೋಂಕು!

ಮಂಗನ ಕಾಯಿಲೆ ಹರಡದಂತೆ ಕ್ರಮ


ಇನ್ನೊಂದೆಡೆ, ಸೋಂಕು ತಗುಲಿರುವ ಮೂವರನ್ನು ಶಿವಮೊಗ್ಗದ ಮಗ್ಗಾನ್ ಆಸ್ಪತ್ರೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ ಅಂತಾ ಆಸ್ಪತ್ರೆಗೆ ಬಂದಾಗ ಈ ಮೂವರು ಅಸ್ಸಾಂ ಮೂಲದ ಕಾರ್ಮಿಕರಿಗೆ ಮಂಗನ ಕಾಯಿಲೆ ಇರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

63 ವರ್ಷಗಳಿಂದ ಮಲೆನಾಡನ್ನು ಕಾಡುತ್ತಿರುವ ಮಂಗನ ಕಾಯಿಲೆಗೆ ಔಷಧ ಕೊಡಿ, ಪ್ಲೀಸ್‌!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ