ಆ್ಯಪ್ನಗರ

ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಮುಚ್ಚಿಹಾಕಲು ಯತ್ನ

ತರೀಕೆರೆ ತಾಲೂಕು ರಂಗೇನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಳ್ಳದೆ ಮುಚ್ಚಿಹಾಕಲು ಯತ್ನಿಸಿರುವುದನ್ನು ಪ್ರಶ್ನಿಸಿ ಮಕ್ಕಳ ಕಲ್ಯಾಣ ಸಮಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಲಕ್ಕವಳ್ಳಿ ಪೊಲೀಸ್‌ ಠಾಣೆ ಅಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.

Vijaya Karnataka 4 Jan 2019, 5:00 am
ಚಿಕ್ಕಮಗಳೂರು : ತರೀಕೆರೆ ತಾಲೂಕು ರಂಗೇನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬಗ್ಗೆ ದೂರು ದಾಖಲಿಸಿಕೊಳ್ಳದೆ ಮುಚ್ಚಿಹಾಕಲು ಯತ್ನಿಸಿರುವುದನ್ನು ಪ್ರಶ್ನಿಸಿ ಮಕ್ಕಳ ಕಲ್ಯಾಣ ಸಮಿತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಲಕ್ಕವಳ್ಳಿ ಪೊಲೀಸ್‌ ಠಾಣೆ ಅಧಿಕಾರಿಗೆ ನೋಟಿಸ್‌ ಜಾರಿ ಮಾಡಿದೆ.
Vijaya Karnataka Web attempt to cover sexually assaulting a student
ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಮುಚ್ಚಿಹಾಕಲು ಯತ್ನ


ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸದೆ ರಾಜೀ ಮಾಡಿಸಿರುವುದು ಸರಿಯಲ್ಲ. ಪೊಸ್ಕೊ ಕಾಯಿದೆಯ ಅರಿವಿದ್ದರೂ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿಲ್ಲ. ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಕರೆ ಮಾಡಿದಾಗ ಕೂಡ ಪಿಎಸ್‌ಐ ನಿರ್ಲಕ್ಷ್ಯ ಮತ್ತು ಉಡಾಫೆಯಿಂದ ಉತ್ತರಿಸಿದ್ದು, ಬಾಲ ನ್ಯಾಯ ಮಂಡಳಿ ಅಥವಾ ನ್ಯಾಯಾಲಯಕ್ಕೆ ಪ್ರಕರಣ ವರ್ಗಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯ ಜಿ.ಸುಬ್ರಹ್ಮಣ್ಯ ಸೂಚಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಡಿಪಿಐ, ಕ್ಷೇತ್ರ ಶಿಕ್ಷಣಾಧಿಕಾರಿ ವರದಿ ಸಲ್ಲಿಸಿದ್ದು, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ 2018 ಡಿಸೆಂಬರ್‌ 27ರಂದು ಗ್ರಾಮಸ್ಥರು ಶಾಲೆಯ ಬಳಿ ಬಂದು ಶಿಕ್ಷಕನ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆದರೆ, ಬಾಲಕಿಯ ಭವಿಷ್ಯದ ನೆಪವೊಡ್ಡಿ ರಾಜೀ ಮಾಡುವ ಮೂಲಕ ಆರೋಪಿಯನ್ನು ರಕ್ಷಿಸುವ ಪ್ರಯತ್ನ ನಡೆಸಲಾಗಿದೆ. ತಕ್ಷಣ ಆರೋಪಿ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು. ಇಲ್ಲದಿದ್ದರೆ ತಮ್ಮ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಉನ್ನತ ಅಧಿಕಾರಿಯಾದರೂ ಪ್ರಕರಣದ ಬಗ್ಗೆ ಮಾಹಿತಿ ನೀಡದೆ, ದೂರು ದಾಖಲಿಸದೆ ಪೋಸ್ಕೊ ಕಾಯಿದೆ ಕಲಂ 19 ಮತ್ತು 21ರಡಿ ಅಪರಾಧವೆಸಗಿರುತ್ತೀರಿ. ಈ ಹಿನ್ನೆಲೆಯಲ್ಲಿ ಜ.5ರಂದು ಖುದ್ದು ಹಾಜರಾಗಿ ಸಮಜಾಯಿಷಿ ನೀಡಬೇಕು ಎಂದು ಡಿಡಿಪಿಐಗೆ ನೋಟಿಸ್‌ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ