ಆ್ಯಪ್ನಗರ

ಅವಲಕ್ಕಿ ಗಂಟಲಲ್ಲಿ ಸಿಲುಕಿ ಮಗು ಸಾವು

ಗಂಟಲಲ್ಲಿ ತೆಂಗಿನಕಾಯಿ ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಮಾಸುವು ಮುನ್ನ ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಸೋಮವಾರ ಮೃತಪಟ್ಟಿದೆ.

Vijaya Karnataka Web 13 Feb 2018, 10:46 am
ಚಿಕ್ಕಮಗಳೂರು: ಗಂಟಲಲ್ಲಿ ತೆಂಗಿನಕಾಯಿ ಸಿಲುಕಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಮಾಸುವು ಮುನ್ನ ಅವಲಕ್ಕಿ ಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಸೋಮವಾರ ಮೃತಪಟ್ಟಿದೆ.
Vijaya Karnataka Web baby died while eating beaten rice
ಅವಲಕ್ಕಿ ಗಂಟಲಲ್ಲಿ ಸಿಲುಕಿ ಮಗು ಸಾವು


ತಾಲೂಕಿನ ಮೂಗ್ತಿಹಳ್ಳಿ ಸಮೀಪದ ಶಿರಗುಂದ ನಿವಾಸಿ ದುರ್ಗಾಪ್ರಸಾದ್ ಅವರ ಪುತ್ರ ಅನೀಶ್ (3) ಮೃತಪಟ್ಟ ಬಾಲಕ.
ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಸಿರುಗಟ್ಟಿದ್ದ ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಸಲಹೆ ಮಾಡಿದ್ದರು.

ಆದರೆ ಮಾರ್ಗದಲ್ಲೇ ಮಗು ಮೃತಪಟ್ಟಿದೆ. ತಿಂಗಳ ಹಿಂದಷ್ಟೇ ತಾಲೂಕಿನ ಆಲ್ದೂರಿನಲ್ಲಿ ಮಗುವೊಂದು ಮೊಬೈಲ್ ಚಾರ್ಜರನ್ನು ಬಾಯಲ್ಲಿ ಅಗಿದು ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆಯೂ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ