ಆ್ಯಪ್ನಗರ

ಡೆಂಗೆ ಬರದಂತೆ ಎಚ್ಚರ ವಹಿಸಿ

ಡೆಂಗೆ ಸಾಕ್ರಾಮಿಕ ರೋಗವಾಗಿದದು, ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಸುರೇಶ್‌ ಹೇಳಿದರು.

Vijaya Karnataka 19 Jul 2019, 5:00 am
ನರಸಿಂಹರಾಜಪುರ : ಡೆಂಗೆ ಸಾಕ್ರಾಮಿಕ ರೋಗವಾಗಿದದು, ಬರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಸುರೇಶ್‌ ಹೇಳಿದರು.
Vijaya Karnataka Web CKM-18NRP1


ಬೆಳ್ಳೂರು ಸರಕಾರಿ ಪ್ರೌಢಶಾಲೆಯಲ್ಲಿ ಮುತ್ತಿನಕೊಪ್ಪ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬೆಳ್ಳೂರು ಆರೋಗ್ಯ ಉಪ ಕೇಂದ್ರದ ಆಶ್ರಯದಲ್ಲಿ ಗುರುವಾರ ಡೆಂಗೆ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಅವರು ಮಾತನಾಡಿದರು.ಡೆಂಗೆ ಜ್ವರ ಕಾಣಿಸಿಕೊಂಡಾಗ ವಿಪರೀತ ತಲೆನೋವು, ತೀವ್ರ ಜ್ವರ,ಮೈಕೈ ನೋವು,ಗಂಟುಗಳಲ್ಲಿ ನೋವು, ಒಸಡು ಹಾಗೂ ಮೂಗಿನಿಂದಲೂ ರಕ್ತ ಸ್ರಾವ ಆಗುವ ಸಾಧ್ಯತೆ ಇದೆ ಎಂದರು.

ಸೀತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್‌.ಪಿ.ರಮೇಶ್‌ ಮಾತನಾಡಿ, ಆರೋಗ್ಯ ಇಲಾಖೆಯವರು ಗ್ರಾಮ,ಗ್ರಾಮಗಳಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗ್ರತಿ ಮೂಡಿಸುತ್ತಿದ್ದಾರೆ.ಇದರಿಂದ ಜನರಿಗೆ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಬರುತ್ತಿದೆ.ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಸೀತೂರು ಗ್ರಾಮ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯ ಎಚ್‌.ಇ. ಮಹೇಶ್‌ ಮಾತನಾಡಿದರು.

ತಾಲೂಕು ಹಿರಿಯ ಆರೋಗ್ಯ ನಿರೀಕ್ಷಿಕ ಪಿ.ಪ್ರಭಾಕರ್‌ ಡೆಂಗೆ ಬರದಂತೆ ಮುಂಜಾಗ್ರತೆ ವಹಿಸಲು ವಿದ್ಯಾರ್ಥಿಗಳು,ಗ್ರಾಮಸ್ಥರ ಸಹಕಾರ ಅತ್ಯಗತ್ಯವಾಗಿದೆ. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು.ಸೊಳ್ಳೆಗಳ ನಿಯಂತ್ರಣ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ನೀಡಿದ ಸಲಹೆಯನ್ನು ತಪ್ಪದೆ ಪಾಲಿಸಬೇಕು ಎಂದು ಸಲಹೆ ನೀಡಿದರು.ಬೆಳ್ಳೂರು ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಮೂರ್ತಿ,ಕಿರಿಯ ಪುರುಷ ಆರೋಗ್ಯ ನಿರೀಕ್ಷಿಕ ದರ್ಶನ್‌, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಹೇಮಾವತಿ,ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ರತ್ನಮ್ಮ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ