ತರೀಕೆರೆ: ತರೀಕೆರೆ, ಚಿಕ್ಕಮಗಳೂರು, ಕಡೂರು ತಾಲೂಕು, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ವ್ಯಾಪ್ತಿಯ 197 ಕೆರೆಗಳಿಗೆ ಭದ್ರಾ ಜಲಾಶಯದಿಂದ ನೀರು ತುಂಬಿಸುವ 1281 ಕೋಟಿ ರೂ. ವೆಚ್ಚದ ಯೋಜನೆಗೆ ಅ.30ರಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ಈ ಕುರಿತು ಕಾರ್ಯಕ್ರಮಕ್ಕಾಗಿ ಪಟ್ಟಣದ ಎಸ್ಜೆಎಂ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. ಸಿಎಂ ಸ್ವಾಗತಕ್ಕೆ ಪಟ್ಟಣ ಸಜ್ಜುಗೊಂಡಿದೆ.
406 ಕೋಟಿ ರೂ. ಬಿಡುಗಡೆ:
ಭದ್ರಾ ಜಲಾನಯನ ಪ್ರದೇಶದಿಂದ ಏತ ನೀರಾವರಿ ಮೂಲಕ 1.45 ಟಿಎಂಸಿ ನೀರು ಬಳಸಿಕೊಂಡು 4 ಹಂತಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 406 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ ತರೀಕೆರೆ ತಾಲೂಕಿನ 55 ಕೆರೆಗಳಿಗೆ ನೀರು ದೊರಕಲಿದೆ ಎಂದು ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ತಿಳಿಸಿದರು.
ಅವರು ಪಟ್ಟಣದಲ್ಲಿ ಬೃಹತ್ ವೇದಿಕೆ ಮತ್ತಿತರೆ ಸಿದ್ಧತೆಗಳ ಪರಿಶೀಲನೆ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಯೋಜನೆ ಮೂಲಕ ತರೀಕೆರೆ ವಿಧಾನಸಭೆ ಕ್ಷೇತ್ರದ ಜನರ ಬಹುದಿನದ ಬೇಡಿಕೆ ಈಡೇರಲಿದೆ. ಶಿವನಿ ಭಾಗದಲ್ಲಿಒಂದಿಷ್ಟು ಕೆರೆಗಳು ಬಾಕಿ ಉಳಿಯಲಿದ್ದು, ಆ ಕೆರೆಗಳಿಗೂ ನೀರು ತುಂಬಿಸಲು ಯೋಜನೆ ರೂಪಿಸಲಾಗುವುದು ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಜಿಲ್ಲೆಯ ಎಲ್ಲಶಾಸಕರುಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಅಜಯ್ಕುಮಾರ್, ಪ್ರಮುಖರಾದ ಗುಳ್ಳದಮನೆ ವಸಂತಕುಮಾರ್, ಟಿ.ಜಿ.ಮಂಜುನಾಥ್, ರೇಣುಕಪ್ಪ, ರಾಜಶೇಖರ್ ಇದ್ದರು.
ಈ ಕುರಿತು ಕಾರ್ಯಕ್ರಮಕ್ಕಾಗಿ ಪಟ್ಟಣದ ಎಸ್ಜೆಎಂ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ಅಂದು ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದೆ. ಸಿಎಂ ಸ್ವಾಗತಕ್ಕೆ ಪಟ್ಟಣ ಸಜ್ಜುಗೊಂಡಿದೆ.
406 ಕೋಟಿ ರೂ. ಬಿಡುಗಡೆ:
ಭದ್ರಾ ಜಲಾನಯನ ಪ್ರದೇಶದಿಂದ ಏತ ನೀರಾವರಿ ಮೂಲಕ 1.45 ಟಿಎಂಸಿ ನೀರು ಬಳಸಿಕೊಂಡು 4 ಹಂತಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ 406 ಕೋಟಿ ರೂ. ಬಿಡುಗಡೆಯಾಗಿದೆ. ಇದರಲ್ಲಿ ತರೀಕೆರೆ ತಾಲೂಕಿನ 55 ಕೆರೆಗಳಿಗೆ ನೀರು ದೊರಕಲಿದೆ ಎಂದು ಶಾಸಕ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ತಿಳಿಸಿದರು.
ಅವರು ಪಟ್ಟಣದಲ್ಲಿ ಬೃಹತ್ ವೇದಿಕೆ ಮತ್ತಿತರೆ ಸಿದ್ಧತೆಗಳ ಪರಿಶೀಲನೆ ನಂತರ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಯೋಜನೆ ಮೂಲಕ ತರೀಕೆರೆ ವಿಧಾನಸಭೆ ಕ್ಷೇತ್ರದ ಜನರ ಬಹುದಿನದ ಬೇಡಿಕೆ ಈಡೇರಲಿದೆ. ಶಿವನಿ ಭಾಗದಲ್ಲಿಒಂದಿಷ್ಟು ಕೆರೆಗಳು ಬಾಕಿ ಉಳಿಯಲಿದ್ದು, ಆ ಕೆರೆಗಳಿಗೂ ನೀರು ತುಂಬಿಸಲು ಯೋಜನೆ ರೂಪಿಸಲಾಗುವುದು ಎಂದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಜಿಲ್ಲೆಯ ಎಲ್ಲಶಾಸಕರುಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಅಜಯ್ಕುಮಾರ್, ಪ್ರಮುಖರಾದ ಗುಳ್ಳದಮನೆ ವಸಂತಕುಮಾರ್, ಟಿ.ಜಿ.ಮಂಜುನಾಥ್, ರೇಣುಕಪ್ಪ, ರಾಜಶೇಖರ್ ಇದ್ದರು.