ಆ್ಯಪ್ನಗರ

ಬಿಜೆಪಿ ಮುಖಂಡರ ಗಡಿಪಾರಿಗೆ ಆಗ್ರಹ

ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್‌ ಅವರು ನಾಥೂರಾಮ್‌ ಗೋಡ್ಸೆ ಒಬ್ಬ ದೇಶಭಕ್ತ ಎಂದು ಹೇಳಿರುವ ಹೇಳಿಕೆಯನ್ನು ಸಮರ್ಥಿಸಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವ ಅನಂತ್‌ಕುಮಾರ್‌ ಹೆಗಡೆ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಅಸಂಘಟಿತ ಕಾರ್ಮಿಕರ ಘಟಕದಿಂದ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Vijaya Karnataka 21 May 2019, 5:00 am
ಚಿಕ್ಕಮಗಳೂರು : ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್‌ ಅವರು ನಾಥೂರಾಮ್‌ ಗೋಡ್ಸೆ ಒಬ್ಬ ದೇಶಭಕ್ತ ಎಂದು ಹೇಳಿರುವ ಹೇಳಿಕೆಯನ್ನು ಸಮರ್ಥಿಸಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವ ಅನಂತ್‌ಕುಮಾರ್‌ ಹೆಗಡೆ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಅಸಂಘಟಿತ ಕಾರ್ಮಿಕರ ಘಟಕದಿಂದ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
Vijaya Karnataka Web bjp demands exile of leaders
ಬಿಜೆಪಿ ಮುಖಂಡರ ಗಡಿಪಾರಿಗೆ ಆಗ್ರಹ


ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರಿಗೆ ಸೋಮವಾರ ಕಾರ್ಯಕರ್ತರು ಮನವಿ ಸಲ್ಲಿಸಿ ಮಾತನಾಡಿ, ವಿವಾದಿತ ಹೇಳಿಕೆಗಳನ್ನು ನೀಡಿ ಸದಾ ಸುದ್ದಿಯಲ್ಲಿರುವ ಮೂಲಕ ದೊಡ್ಡ ನಾಯಕರಾಗುತ್ತಾರೆಂದು ಇವರು ಭಾವಿಸಿದ್ದಾರೆ.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಅನಂತ ಕುಮಾರ್‌ ಹೆಗಡೆ ಒಬ್ಬ ಕೇಂದ್ರ ಸಚಿವ ಎಂಬುದನ್ನು ಮರೆತು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ.

ಈ ಇಬ್ಬರನ್ನೂ ರಾಜ್ಯದಿಂದ ಗಡೀಪಾರು ಮಾಡಬೇಕು. ಇವರಿಬ್ಬರ ಮೇಲೆ ಈ ಕೂಡಲೇ ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಆಗ್ರಹಿಸಿದರು. ಅಧ್ಯಕ್ಷ ರಸೂಲ್‌ಖಾನ್‌, ಹಿರೇಮಗಳೂರು ರಾಮಚಂದ್ರ, ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರದವಳ್ಳಿ ಮೋಹನ್‌, ಕಾರ್ಯದರ್ಶಿ ಕೋಟೆ ಮೋಹನ್‌, ತಾಲೂಕು ಅಧ್ಯಕ್ಷ ನೆಟ್ಟೆಕೆರೆನಹಳ್ಳಿ ಮೂರ್ತಿ, ಬ್ಲಾಕ್‌ ಅಧ್ಯಕ್ಷ ರಾದ ಚೇತನ್‌, ರೇವಣ್ಣ, ಶಿವಪ್ರಸಾದ್‌, ಮಲ್ಲಿಕಾರ್ಜುನ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ