ಚಿಕ್ಕಮಗಳೂರು: ನಮಗೆ ಎಲ್ಲಿ ಚುನಾವಣೆಗೆ ನಿಲ್ಲಬೇಕು ಎಂದು ಗೊತ್ತಿದೆ. ಆದರೆ, ಓಲೈಕೆ ರಾಜಕಾರಣ ಮಾಡುವ ಕ್ಯಾಪ್ಟನ್ಗೆ ಕರ್ನಾಟಕ ಸೇಫ್ ಅಲ್ಲ, ಭಾರತವೂ ಸೇಫ್ ಅಲ್ಲ, ಪಾಕಿಸ್ತಾನವೇ ಸೇಫ್ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ ಚುನಾವಣೆ ಸ್ಪರ್ಧಿಸಲು ಕ್ಷೇತ್ರ ಹುಡುಕುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ನಗರದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕೇಸರಿ ಅಲೆ ಮೇಲೆ ರಾಜಕೀಯ ಮಾಡುತ್ತೇವೆ. ತಾಕತ್ತಿದ್ದರೆ ಎದುರಿಸಿ ಎಂದು ವಿರೋಧ ಪಕ್ಷದವರಿಗೆ ಸವಾಲೆಸೆದರು. ಇದೇ ವಾರ ದತ್ತಪೀಠಕ್ಕೆ ನ್ಯಾಯ ಕೊಡಲಿದ್ದೇವೆ. ಜಿಲ್ಲೆಯ 5ಕ್ಕೆ 5 ಸೀಟು ಬಿಜೆಪಿಯದಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಧರ್ಮ ಒಡೆಯುವವರು, ಭ್ರಷ್ಟರು, ಸುಳ್ಳು ಹಂಚುವವರು, ದೇಶ ಒಡೆಯುವವರನ್ನು, ಧರ್ಮಸ್ಥಳಕ್ಕೆ ಹೇಗ್ಹೇಗೋ ಹೋಗುತ್ತೇವೆ ಎನ್ನುವವರನ್ನು ಅಧಿಕಾರದ ಸಮೀಪಕ್ಕೂ ಬಿಡದಿರಿ. ಬಿಜೆಪಿಯ ಎದುರು ಬಂದರೆ ರಾಜಕೀಯವಾಗಿ ಕಾಂಗ್ರೆಸ್ನವರು ಉಳಿಯಲಾರರು ಎಂದು ಎಚ್ಚರಿಸಿದರು.
ಕೇಂದ್ರ- ರಾಜ್ಯಗಳಲ್ಲಿ ಸರಕಾರದಿಂದ ನಡೆಯುತ್ತಿರುವ ಜನಪರ ಕಾರ್ಯಗಳನ್ನು ವಿವರಿಸಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮನವಿ ಮಾಡಿದ ಸಿಟಿ ರವಿ, ಜಾತಿ ರಾಜಕಾರಣ ನಮ್ಮದಲ್,; ನೀತಿ ಮೇಲೆ ರಾಜಕಾರಣ ನಮ್ಮದು. ನಾವು ಕೆಲಸ ಮಾಡಿ ಕೆಲಸ ತೋರಿಸಿ ಮತ ಕೇಳಲು ಬಂದಿದ್ದೇವೆ. ಇದನ್ನು ಗಮನದಲ್ಲಿಡಿ. ಚಿಕ್ಕಮಗಳೂರಿಗೆ ಪ್ರತ್ಯೇಕ ಮಿಲ್ಕ್ ಯೂನಿಯನ್ ಆಗಲಿದೆ ಎಂದು ಪ್ರಕಟಿಸಿದರು.
ಕಾಂಗ್ರೆಸ್ ಪಕ್ಷವನ್ನು ಜನ ನಂಬುವುದಿಲ್ಲ!
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ನಡೆದಿದೆ. ಇದರ ಆರಂಭದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಡೆದಿತ್ತು. ಮೋದಿಜಿ ಮತ್ತು ಕರ್ನಾಟಕ ಬಿಜೆಪಿ ಸರಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ಈ ಜೋಡೋ ಯಾತ್ರೆಯ ಉದ್ದೇಶ ಏನಾಗಿತ್ತು ಎಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಉತ್ತರಿಸಲಿ ಎಂದು ಒತ್ತಾಯಿಸಿದರು.
ಭಾರತವನ್ನು ಜೋಡಿಸುವ ಜವಾಬ್ದಾರಿ ಮಾಡದ ಕಾಂಗ್ರೆಸ್ ಪಕ್ಷ, ದೇಶ ವಿಭಜನೆಗೆ ಕಾರಣವಾದ ಕಾಂಗ್ರೆಸ್ ಪಕ್ಷವನ್ನು ಜನರು ನಂಬುವುದಿಲ್ಲ ಎಂದು ತಿಳಿಸಿದರು. ಭಾರತದ ಭೂಭಾಗ ಪಾಕಿಸ್ತಾನ- ಚೀನಾ ಕೈಗೆ ಸೇರಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಆಕ್ಷೇಪಿಸಿದರು. ದೇಶ- ರಾಜ್ಯದಲ್ಲಿ ಆಡಳಿತವನ್ನು ಹಳ್ಳ ಹಿಡಿಸಿದವರು ಕಾಂಗ್ರೆಸ್ಸಿಗರು ಎಂದು ಟೀಕಿಸಿದರು.
ಕಾಂಗ್ರೆಸ್ ಬಡವರಲ್ಲೂ ಭೇದಭಾವ ಮಾಡಿತ್ತು. ಆದರೆ, ಬಿಜೆಪಿ ಜಾತಿ, ಧರ್ಮ ನೋಡದೆ ಆಡಳಿತ ಮಾಡಿದೆ. ಅದನ್ನು ಗಮನಿಸಿ ಜನರು ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿಯನ್ನು ಜನರು ಬೆಂಬಲಿಸುತ್ತಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 16 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಸರಕಾರವು ನೀಡುತ್ತಿದೆ ಎಂದು ಪ್ರಕಟಿಸಿದರು.
ಧರ್ಮ ಒಡೆಯುವವರು, ಭ್ರಷ್ಟರು, ಸುಳ್ಳು ಹಂಚುವವರು, ದೇಶ ಒಡೆಯುವವರನ್ನು, ಧರ್ಮಸ್ಥಳಕ್ಕೆ ಹೇಗ್ಹೇಗೋ ಹೋಗುತ್ತೇವೆ ಎನ್ನುವವರನ್ನು ಅಧಿಕಾರದ ಸಮೀಪಕ್ಕೂ ಬಿಡದಿರಿ. ಬಿಜೆಪಿಯ ಎದುರು ಬಂದರೆ ರಾಜಕೀಯವಾಗಿ ಕಾಂಗ್ರೆಸ್ನವರು ಉಳಿಯಲಾರರು ಎಂದು ಎಚ್ಚರಿಸಿದರು.
ಕೇಂದ್ರ- ರಾಜ್ಯಗಳಲ್ಲಿ ಸರಕಾರದಿಂದ ನಡೆಯುತ್ತಿರುವ ಜನಪರ ಕಾರ್ಯಗಳನ್ನು ವಿವರಿಸಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮನವಿ ಮಾಡಿದ ಸಿಟಿ ರವಿ, ಜಾತಿ ರಾಜಕಾರಣ ನಮ್ಮದಲ್,; ನೀತಿ ಮೇಲೆ ರಾಜಕಾರಣ ನಮ್ಮದು. ನಾವು ಕೆಲಸ ಮಾಡಿ ಕೆಲಸ ತೋರಿಸಿ ಮತ ಕೇಳಲು ಬಂದಿದ್ದೇವೆ. ಇದನ್ನು ಗಮನದಲ್ಲಿಡಿ. ಚಿಕ್ಕಮಗಳೂರಿಗೆ ಪ್ರತ್ಯೇಕ ಮಿಲ್ಕ್ ಯೂನಿಯನ್ ಆಗಲಿದೆ ಎಂದು ಪ್ರಕಟಿಸಿದರು.
ಕಾಂಗ್ರೆಸ್ ಪಕ್ಷವನ್ನು ಜನ ನಂಬುವುದಿಲ್ಲ!
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ನಡೆದಿದೆ. ಇದರ ಆರಂಭದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಡೆದಿತ್ತು. ಮೋದಿಜಿ ಮತ್ತು ಕರ್ನಾಟಕ ಬಿಜೆಪಿ ಸರಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರು. ಈ ಜೋಡೋ ಯಾತ್ರೆಯ ಉದ್ದೇಶ ಏನಾಗಿತ್ತು ಎಂದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಉತ್ತರಿಸಲಿ ಎಂದು ಒತ್ತಾಯಿಸಿದರು.
ಭಾರತವನ್ನು ಜೋಡಿಸುವ ಜವಾಬ್ದಾರಿ ಮಾಡದ ಕಾಂಗ್ರೆಸ್ ಪಕ್ಷ, ದೇಶ ವಿಭಜನೆಗೆ ಕಾರಣವಾದ ಕಾಂಗ್ರೆಸ್ ಪಕ್ಷವನ್ನು ಜನರು ನಂಬುವುದಿಲ್ಲ ಎಂದು ತಿಳಿಸಿದರು. ಭಾರತದ ಭೂಭಾಗ ಪಾಕಿಸ್ತಾನ- ಚೀನಾ ಕೈಗೆ ಸೇರಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಆಕ್ಷೇಪಿಸಿದರು. ದೇಶ- ರಾಜ್ಯದಲ್ಲಿ ಆಡಳಿತವನ್ನು ಹಳ್ಳ ಹಿಡಿಸಿದವರು ಕಾಂಗ್ರೆಸ್ಸಿಗರು ಎಂದು ಟೀಕಿಸಿದರು.
ಕಾಂಗ್ರೆಸ್ ಬಡವರಲ್ಲೂ ಭೇದಭಾವ ಮಾಡಿತ್ತು. ಆದರೆ, ಬಿಜೆಪಿ ಜಾತಿ, ಧರ್ಮ ನೋಡದೆ ಆಡಳಿತ ಮಾಡಿದೆ. ಅದನ್ನು ಗಮನಿಸಿ ಜನರು ಬಿಜೆಪಿಯನ್ನೇ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿಯನ್ನು ಜನರು ಬೆಂಬಲಿಸುತ್ತಾರೆ. ಭದ್ರಾ ಮೇಲ್ದಂಡೆ ಯೋಜನೆಗೆ 16 ಸಾವಿರ ಕೋಟಿ ರೂಪಾಯಿಯನ್ನು ಕೇಂದ್ರ ಸರಕಾರವು ನೀಡುತ್ತಿದೆ ಎಂದು ಪ್ರಕಟಿಸಿದರು.