ಆ್ಯಪ್ನಗರ

ಶಾಸಕರಾಗಿದ್ದಕ್ಕೆ ಹರಕೆ ತೀರಿಸಿದ ಎಂ.ಪಿ.ಕುಮಾರಸ್ವಾಮಿ

ವಿಧಾನಸಭೆ ಚುನಾವಣೆಯಲ್ಲಿ ಮೂಡಿಗೆರೆ ಶಾಸಕರಾಗಿ ಆಯ್ಕೆಯಾಗಿದ್ದಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮಟೆ ಬಾರಿಸುವ ಮೂಲಕ ಹರಕೆ ತೀರಿಸಿದ್ದಾರೆ.

Vijaya Karnataka Web 9 Jun 2018, 2:47 pm
ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮೂಡಿಗೆರೆ ಶಾಸಕರಾಗಿ ಆಯ್ಕೆಯಾಗಿದ್ದಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮಟೆ ಬಾರಿಸುವ ಮೂಲಕ ಹರಕೆ ತೀರಿಸಿದ್ದಾರೆ.
Vijaya Karnataka Web Kumaraswamy


ಜಿಲ್ಲೆಯ ಮೂಡಿಗೆರಿ ತಾಲೂಕಿನ ಶಿಶಿಲಾ ಭೈರಾಪುರ ಸಮೀಪದ ಉಳಿಗೆಮನೆ ಚೌಡೇಶ್ವರಿ ದೇವಿಗೆ ಮೂಡಿಗೆರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಗೆಲ್ಲುವಂತೆ ಗ್ರಾಮಸ್ಥರು ಹರಕೆ ಕಟ್ಟಿಕೊಂಡಿದ್ದರು.

ಅದರಂತೆ ಎಂ.ಪಿ.ಕುಮಾರಸ್ವಾಮಿ ಚುನಾವಣೆಯಲ್ಲಿ ಜಯಭೇರಿಯಾಗಿದ್ದು, ಗ್ರಾಮಸ್ಥರು ನೂತನ ಶಾಸಕರ ನೇತೃತ್ವದಲ್ಲಿಯೇ ದೇವಿಗೆ ಹರಕೆ ತೀರಿಸಿದರು. ಮಳೆಯ ನಡವೆಯೂ ಶಾಸಕರು ತಮಟೆ ಬಾರಿಸಿದರೆ, ಗ್ರಾಮಸ್ಥರು ಕುಣಿದು ಕುಪ್ಪಳಿಸಿದರು.

ಅಪ್ಪಟ ಜಾನಪದ ಕಲೆಯಾದ ತಮಟೆಯನ್ನು ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ನೂರಿತ ಕಲಾವಿದರಂತೆ ಬಾರಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ