ಆ್ಯಪ್ನಗರ

ಕೇಂದ್ರದಲ್ಲಿ ಇನ್ನೂ 30 ವರ್ಷ ಬಿಜೆಪಿ ಆಡಳಿತ: ಯಡಿಯೂರಪ್ಪ

ಪ್ರಧಾನಿ ಮೋದಿಯವರ ಸಂಕಲ್ಪ. ಚುನಾವಣೆ ಮುಗಿದ ನಂತರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ, ಸಂಘಟನೆ ಬಲಪಡಿಸಲಾಗುವುದು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಸೀಟುಗಳನ್ನು ಗೆದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು

Vijaya Karnataka 3 Dec 2021, 7:04 pm
ತರೀಕೆರೆ (ಚಿಕ್ಕಮಗಳೂರು): ಮುಂದಿನ 25 ರಿಂದ 30 ವರ್ಷಗಳ ಕಾಲ ಕೇಂದ್ರದಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿ ಇರುತ್ತದೆ. ಹಾಗಂತ ಕಾಂಗ್ರೆಸ್‌ ಮುಖಂಡರೇ ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.
Vijaya Karnataka Web ಬಿಎಸ್‌ ಯಡಿಯೂರಪ್ಪ
ಬಿಎಸ್‌ ಯಡಿಯೂರಪ್ಪ


ಅವರು ಚಿಕ್ಕಮಗಳೂರಿನ ತರೀಕೆರೆಯಲ್ಲಿ ಬಿಜೆಪಿ ತರೀಕೆರೆ ಮಂಡಲ ವತಿಯಿಂದ ಶುಕ್ರವಾರ ವಿಧಾನ ಪರಿಷತ್‌ ಅಭ್ಯರ್ಥಿ ಎಂ.ಕೆ.ಪ್ರಾಣೇಶ್‌ ಪರವಾಗಿ ಆಯೋಜಿಸಿದ್ದ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು.

ನಾವು ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲಎಂದು ಕಾಂಗ್ರೆಸ್‌ ಮುಖಂಡ ಗುಲಾಂ ನಬಿ ಆಜಾದ್‌ ಹೇಳಿದ್ದಾರೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕೆನ್ನುವುದು ಪ್ರಧಾನಿ ಮೋದಿಯವರ ಸಂಕಲ್ಪ. ಚುನಾವಣೆ ಮುಗಿದ ನಂತರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ, ಸಂಘಟನೆ ಬಲಪಡಿಸಲಾಗುವುದು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 140 ಸೀಟುಗಳನ್ನು ಗೆದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದರು.

ರೈತರ ಬಗ್ಗೆ ನಮ್ಮ ಶೋಭಕ್ಕ, ಸಿಟಿ ರವಿ ಏಕೆ ಮಾತಾಡ್ತಿಲ್ಲ: ಡಿಕೆ ಶಿವಕುಮಾರ್‌ ಪ್ರಶ್ನೆ

25 ಸ್ಥಾನಗಳಿಗೆ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಿದ್ದು, ಕನಿಷ್ಠ 15 ಸ್ಥಾನಗಳನ್ನು ಗೆಲ್ಲುವುದು ಖಚಿತ. ಉಪ ಸಭಾಪತಿಯಾಗಿ ಪ್ರಾಣೇಶ್‌ ಉತ್ತಮ ಕೆಲಸ ಮಾಡಿದ್ದಾರೆ. ತರೀಕೆರೆ ಕ್ಷೇತ್ರದಲ್ಲಿ18 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಉಬ್ರಾಣಿ ಅಮೃತಾಪುರ ಏತ ನೀರಾವರಿ ಯೋಜನೆಗೆ 100 ಕೋಟಿ ರೂ. ಅನುದಾನ, 2011ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ಕೆರೆ ತುಂಬಿಸುವ ಯೋಜನೆ, ಭದ್ರಾ ಜಲಾಶಯದಿಂದ 1281 ಕೋಟಿ ರೂ. ವೆಚ್ಚದಲ್ಲಿ ತರೀಕೆರೆ, ಕಡೂರು ಮತ್ತು ಚಿಕ್ಕಮಗಳೂರು ಕ್ಷೇತ್ರದಲ್ಲಿಕೆರೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ತರೀಕೆರೆ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದರು.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಮಾತನಾಡಿದರು. ಡಿಸಿಸಿ ಬ್ಯಾಂಕ್‌ ನಿರ್ದೇಶಕ ಕೆ.ಆರ್‌.ಆನಂದಪ್ಪ, ಟಿಎಪಿಸಿಎಂಎಸ್‌ ಅಧ್ಯಕ್ಷ ಎಸ್‌.ಬಿ.ಆನಂದಪ್ಪ, ಮಾಜಿ ಅಧ್ಯಕ್ಷ ಗುಳ್ಳದಮನೆ ವಸಂತಕುಮಾರ್‌, ಜಿಲ್ಲಾಉಸ್ತುವಾರಿ ಚನ್ನಬಸಪ್ಪ, ಬಿಜೆಪಿ ಜಿಲ್ಲಾಉಪಾಧ್ಯಕ್ಷರಾದ ಪ್ರೇಮ್‌ಕುಮಾರ್‌, ನಿರಂಜನ್‌, ಶಾಂತಮ್ಮ, ಎಪಿಎಂಸಿ ನಿರ್ದೇಶಕ ಸುಧಾಕರ್‌, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ, ಮುಖಂಡರಾದ ಮನೋಜ್‌, ರೇಣುಕಪ್ಪ, ಸೋಮಶೇಖರ್‌, ಉಡೇವಾ ಮಂಜಪ್ಪ ಹಾಗೂ ಇತರರು ಹಾಜರಿದ್ದರು.

ಚಿಕ್ಕಮಗಳೂರು: ಪರಿಷತ್‌ ಚುನಾವಣೆಯಲ್ಲಿ ಕೋಟಿ ಕುಳಗಳ ಬಿಗ್‌ ಫೈಟ್‌

ಅಸಭ್ಯ ಮಾತಿನ ಅಭ್ಯರ್ಥಿ

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ತಮ್ಮ ಅಧಿಕಾರಾವಧಿಯಲ್ಲಿ ಸಭೆಗಳಲ್ಲಿಅಧಿಕಾರಿಗಳಿಗೆ ಅಶ್ಲೀಲವಾಗಿ, ಅಸಭ್ಯವಾಗಿ ಮಾತನಾಡಿದ್ದಾರೆ. ಅಭಿವೃದ್ಧಿಗೆ ಅಡ್ಡಿಪಡಿಸುವವರಿಗೆ ಮತ ನೀಡುವುದು ಬೇಡ. ಸರಳ, ಸಜ್ಜನಿಕೆಯೆ ಪ್ರಾಣೇಶ್‌ ಅವರಿಗೆ ಮತ ನೀಡಿ ಎಂದು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ಯಾವ ಅಧಿಕಾರಿಗಳಿಗೂ ಕಿರುಕುಳ ನೀಡದ, ಹಸ್ತಕ್ಷೇಪ ಮಾಡದ ಪ್ರಾಣೇಶ್‌ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ