ಆ್ಯಪ್ನಗರ

ಚಿಕ್ಕಮಗಳೂರು: ಬೈಕ್ ಸಂಚಾರ ವೇಳೆ ಕುಸಿದ ಸೇತುವೆ, ಯುವಕನ ಸ್ಥಿತಿ ಗಂಭೀರ

ಬೈಕ್ ಸಂಚರಿಸುವಾಗಲೇ ಸೇತುವೆ ಕುಸಿದು ಬಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮಲೆನಾಡಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಸೇತುವೆ ಕುಸಿತಕ್ಕೆ ಕಾರಣವಾಗಿದೆ.

Vijaya Karnataka Web 14 Oct 2019, 10:30 am
ಮೂಡಿಗೆರೆ: ಯುವಕನೋರ್ವ ಬೈಕ್ ನಲ್ಲಿ ಸಂಚರಿಸುತ್ತಿದ್ದಾಲೇ ಸೇತುವೆ ಕುಸಿದು ಬಿದ್ದಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಾಲಿಂಗನಾಡು ಗ್ರಾಮದಲ್ಲಿ ಶನಿವಾರ ನಡೆದಿದೆ.
Vijaya Karnataka Web sethuve 3


ರಸ್ತೆಯಲ್ಲಿ ಗುಂಡಿಗಳೇ ಮಿಂಚಿಂಗ್‌ !

ಕಳೆದೊಂದು ವಾರದಿಂದ ಮಲೆನಾಡಿನಲ್ಲಿ ಸುರಿದ ಕುಂಭದ್ರೋಣ ಮಳೆಗೆ ಜನ ಹೈರಾಣವಾಗಿದ್ದು, ಹಿರೇಬೈಲು-ಕೂವೆ ಸಂಪರ್ಕಿಸುವ ಸೇತುವೆ ಮೇಲೆ ಯುವಕನೋರ್ವ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಸೇತುವೆ 40 ರಿಂದ 50 ಅಡಿ ಆಳಕ್ಕೆ ಕುಸಿದು ಬಿತ್ತು. ಈ ವೇಳೆ ಬೈಕ್ ಸವಾರ ಪ್ರದೀಪ್ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಸ್ಥಳೀಯರು ಆತನನ್ನು ರಕ್ಷಿಸಿದರು.

ಗದಗ ಸೇರಲು ಕಷ್ಟ ಕಷ್ಟ...!

ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಯುವಕ ಪ್ರದೀಪ್ ನ ಬೆನ್ನಿಗೆ ಮತ್ತು ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ತಗ್ಗು ಗುಂಡಿ, ವಾಹನ ಸವಾರರಿಗೆ ಜೀವಭಯ

ಮಾಳಿಂಗನಾಡು ಸೇತುವೆ ಮುರಿದು ಬಿದ್ದ ಪರಿಣಾಮ ಹಿರೇಬೈಲು-ಕೂವೆ ಸಂಪರ್ಕ ಕಡಿತ ಗೊಂಡಿದ್ದು, ಜನರು ಪರದಾಡುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ