ಆ್ಯಪ್ನಗರ

ಕೇಂದ್ರದ ಅನುದಾನ ಸಮರ್ಪಕವಾಗಿ ಬಳಸದ ರಾಜ್ಯ ಸರಕಾರ

ತಾಲೂಕಿನ ರಸ್ತೆಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ 25 ಕೋಟಿ ರೂ. ಅನುದಾನ ತರಲಾಗಿದೆ ಎಂದು ಸಂಸದೆ ಶೋಭ ಕರಂದ್ಲಾಜೆ ತಿಳಿಸಿದರು.

Vijaya Karnataka 24 Feb 2019, 5:00 am
ತರೀಕೆರೆ ಗ್ರಾಮಾಂತರ: ತಾಲೂಕಿನ ರಸ್ತೆಗಳ ಅಭಿವೃದ್ಧಿಗಾಗಿ ಕೇಂದ್ರ ಸರಕಾರದಿಂದ 25 ಕೋಟಿ ರೂ. ಅನುದಾನ ತರಲಾಗಿದೆ ಎಂದು ಸಂಸದೆ ಶೋಭ ಕರಂದ್ಲಾಜೆ ತಿಳಿಸಿದರು.
Vijaya Karnataka Web CKM-23sid1


ಅಮೃತಾಪುರ ಹೋಬಳಿಯ ನಾಗೇನಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ 1.10 ಕೋಟಿ ರೂ ವೆಚ್ಚದ ನಾಗೇನಹಳ್ಳಿ -ನೇರಲಕೆರೆ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ, ಕರ್ನಾಟಕ ನೀರಾವರಿ ನಿಗಮದ ವಿಶೇಷ ಘಟಕ ಯೋಜನೆಯ 50 ಲಕ್ಷ ರೂ. ವೆಚ್ಚದಲ್ಲಿ ನಾಗೇನಹಳ್ಳಿಯಲ್ಲಿ ನಿರ್ಮಾಣವಾಗುವ ಸಿಸಿ ರಸ್ತೆ ಹಾಗೂ 1.76 ಕೋಟಿ ರೂ. ವೆಚ್ಚದಲ್ಲಿ ಮೇದಿಹಳ್ಳಿ -ಹುಣಸಘಟ್ಟ ರಸ್ತೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೇಂದ್ರದಿಂದ ರಾಜ್ಯದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳಿಗಾಗಿ ವರ್ಷಕ್ಕೆ 75 ಸಾವಿರ ಕೋಟಿ ರೂ. ನೀಡಲಾಗುತ್ತಿದೆ. ಆದರೆ ಕೇಂದ್ರದ ಹಣವನ್ನು ನಿಗದಿತ ಕಾರ್ಯಗಳಿಗೆ ಬಳಸದೆ ಅನ್ಯ ಕಾರ್ಯಗಳಿಗೆ ರಾಜ್ಯ ಸರಕಾರ ಬಳಕೆ ಮಾಡುತ್ತಿದೆ ಎಂದು ದೂರಿದರು. ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಜಾತಿಯ 43,587 ಬಿಪಿಎಲ್‌ ಕುಟುಂಬಗಳಿಗೆ ಉಜ್ವಲ ಯೋಜನೆಯಲ್ಲಿ ಉಚಿತ ಅಡುಗೆ ಅನಿಲ ಸಿಲಿಂಡರ್‌ ವಿತರಿಸಲಾಗಿದೆ. ಅಭಿವೃದ್ಧಿ, ದೇಶದ ರಕ್ಷ ಣೆ ಮತ್ತು ಸುರಕ್ಷ ತೆಗಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕಿದೆ ಎಂದರು.

ಶಾಸಕ ಡಿ.ಎಸ್‌.ಸುರೇಶ್‌ ಮಾತನಾಡಿ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಶ್ವಾಸನೆಯಂತೆ ನಾಗೇನಹಳ್ಳಿ ರಸ್ತೆ ಕಾಮಗಾರಿಗೆ ಅನುದಾನ ನೀಡಲಾಗಿದೆ. ವಿರೋಧ ಪಕ್ಷ ದಲ್ಲಿದ್ದರೂ ಕ್ಷೇತ್ರದ ಅಭಿವೃದ್ದಿಗೆ ಹೋರಾಟದ ಮೂಲಕ ಹಣ ತರಲಾಗುತ್ತಿದೆ. ಲೋಕೋಪಯೋಗಿ, ಸಣ್ಣ ನೀರಾವರಿ ಇನ್ನಿತರೆ ಇಲಾಖೆ ಸೇರಿ ಒಟ್ಟು 76 ಕೋಟಿ ರೂ. ಅನುದಾನ ತರಲಾಗಿದ್ದು, ಕ್ಷೇತ್ರದ ಜನತೆಯ ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದರು.

ಜಿ.ಪಂ.ಉಪಾಧ್ಯಕ್ಷ ಕೆ.ಆರ್‌.ಆನಂದಪ್ಪ, ತಾ.ಪಂ.ಅಧ್ಯಕ್ಷೆ ಪದ್ಮಾವತಿ ಸಂಜೀವ್‌ಕುಮಾರ್‌, ಉಪಾಧ್ಯಕ್ಷೆ ಮಂಜುಳ, ಗ್ರಾ.ಪಂ.ಅಧ್ಯಕ್ಷೆ ಭಾಗ್ಯಲಕ್ಷ್ಮಿ, ಸದಸ್ಯರಾದ ರೇಣುಕಮ್ಮ, ಸುಧಾಕರ್‌, ಮಲ್ಲಿಕಾರ್ಜುನ್‌, ಈಶ್ವರಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಿಪ್ಪೇಶ್‌, ಸದಸ್ಯ ಈಶ್ವರಪ್ಪ, ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷ ಎ.ಆರ್‌.ರಾಜಶೇಖರ್‌, ತಾ.ಪಂ.ಇಒ ವಿಶಾಲಾಲ್ಷಮ್ಮ ಹಾಗೂ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ