ಆ್ಯಪ್ನಗರ

ಹೊರನಾಡಲ್ಲಿ ಚಂಡಿಕಾಹೋಮ ಪೂರ್ಣಾಹುತಿ

ಹೊರನಾಡು ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಭಾನುವಾರ ಲೋಕಕಲ್ಯಾಣಾರ್ಥವಾಗಿ ಮಹಾಚಂಡಿಕಾ ಹೋಮ ನಡೆಯಿತು.

Vijaya Karnataka 22 Oct 2018, 5:00 am
ಕಳಸ : ಹೊರನಾಡು ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಭಾನುವಾರ ಲೋಕಕಲ್ಯಾಣಾರ್ಥವಾಗಿ ಮಹಾಚಂಡಿಕಾ ಹೋಮ ನಡೆಯಿತು.
Vijaya Karnataka Web CKM-21kls1


ಬೆಳಗ್ಗೆ 6.30ಕ್ಕೆ ಆರಂಭಗೊಂಡ ಧಾರ್ಮಿಕ ವಿಧಿ ವಿಧಾನಗಳಲ್ಲಿ ಸಪ್ತಶತಿ ಪಾರಾಯಣ, ವೇದ ಪಾರಾಯಣ, ಸುಂದರಕಾಂಡ ಪಾರಾಯಣ, ಕುಂಕುಮಾರ್ಚನೆ ಮತ್ತು ಪರಿವಾರ ದೇವರುಗಳಿಗೆ ವಿಶೇಷ ಪೂಜಾ ವಿಧಿಗಳೊಂದಿಗೆ ಮಹಾಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ 12.30ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ ನಡೆಯಿತು.

ಕಾರ್ಯಕ್ರಮದಲ್ಲಿ ಸ್ಥಳಿಯರು ಸೇರಿದಂತೆ ರಾಜ್ಯ, ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ಈ ಸಂದರ್ಭ 'ಪತ್ರಿಕೆ' ಜತೆಗೆ ಮಾತನಾಡಿದ ದೇವಸ್ಥಾನ ಧರ್ಮದರ್ಶಿ ಡಾ.ಜಿ.ಭೀಮೇಶ್ವರ ಜೋಷಿ ಅವರು, ಈ ಧಾರ್ಮಿಕ ಕಾರ್ಯಗಳಿಂದ ಮನುಷ್ಯನಲ್ಲಿರುವ ಕೆಟ್ಟ ಹವ್ಯಾಸ, ಕೆಟ್ಟ ಚಿಂತನೆಗಳ ನಾಶವಾಗಿ ಜ್ಞಾನ, ಉತ್ತಮ ಸಂಸ್ಕಾರ, ಉತ್ತಮ ಸೌಹಾರ್ದತೆ ಬೆಳೆಯಲು ನೆರವಾಗುತ್ತದೆ. ಮನುಷ್ಯ ತನ್ನ ಬದುಕನ್ನು ಅತ್ಯಂತವಾಗಿ ಪ್ರೀತಿಸುವ ಭಾಗ್ಯಕ್ಕೆ ಚಂಡಿಕಾ ಹೋಮ ಪೂರಕ ಮತ್ತು ಪ್ರೇರಕ ವಾಗುತ್ತದೆ. ಅದರ ಜತೆಯಲ್ಲಿ ಯಜ್ಞ ಯಾಗಾದಿಗಳನ್ನು ಮಾಡುವ ಮುಖಾಂತರವಾಗಿ ಪ್ರಕೃತಿ ಸಂರಕ್ಷ ಣೆಯಾಗುತ್ತದೆ. ಯಜ್ಞದಿಂದ ಪ್ರಕೃತಿ ಮಾತೆ ಸಂತುಷ್ಟಳಾಗಿ ಎಲ್ಲ ಕಡೆ ಸುವೃಷ್ಟಿಯನ್ನು ಅನುಗ್ರಹಿಸಲಿ, ಶಾಂತಿ ನೆಮ್ಮದಿ ಸೌಹಾರ್ದತೆಯ ಬದುಕು ಪ್ರಾಪ್ತವಾಗಲಿ ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಬೆಳಗ್ಗೆ ಎಲ್‌.ಆರ್‌.ವಿಜಯರಂಗ ಬೆಂಗಳೂರು ಇವರಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ, ಸಂಜೆ ಉಡುಪಿ ಚೆರ್ಕಾಡಿಯ ಕಲಾಶ್ರೀ ಬಾಲಕಿಯರ ಯಕ್ಷ ಗಾನ ಮೇಳದಿಂದ ಯಕ್ಷ ಗಾನ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ