ಆ್ಯಪ್ನಗರ

ಚೆಕ್‌ಡ್ಯಾಮ್‌ ಕಾಮಗಾರಿ ಕಳಪೆ: ಆರೋಪ

ಖಾಂಡ್ಯ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆ ನಿರ್ಮಿಸಿದ 15ಕ್ಕೂ ಹೆಚ್ಚು ಚೆಕ್‌ಡ್ಯಾಮ್‌ ಕಾಮಗಾರಿ ಕಳಪೆಯಾಗಿದೆ ಎಂದು ಹೋಬಳಿ ಬಿಜೆಪಿ ಮಾಜಿ ಅಧ್ಯಕ್ಷ ಎಂ.ಜೆ. ಚಂದ್ರಶೇಖರ್‌ ಆರೋಪಿಸಿದರು.

Vijaya Karnataka 30 Jul 2019, 5:00 am
ಬಾಳೆಹೊನ್ನೂರು: ಖಾಂಡ್ಯ ಹೋಬಳಿಯಲ್ಲಿ ಸಣ್ಣ ನೀರಾವರಿ ಇಲಾಖೆ ನಿರ್ಮಿಸಿದ 15ಕ್ಕೂ ಹೆಚ್ಚು ಚೆಕ್‌ಡ್ಯಾಮ್‌ ಕಾಮಗಾರಿ ಕಳಪೆಯಾಗಿದೆ ಎಂದು ಹೋಬಳಿ ಬಿಜೆಪಿ ಮಾಜಿ ಅಧ್ಯಕ್ಷ ಎಂ.ಜೆ. ಚಂದ್ರಶೇಖರ್‌ ಆರೋಪಿಸಿದರು.
Vijaya Karnataka Web CKM-29BHR3


ಅವರು ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಪ್ರತಿನಿಧಿಗಳ ಗಮನಕ್ಕೂ ತಾರದೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಸನ ಮೂಲದ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ ನೀಡಿದ್ದಾರೆ. ಅಂದಾಜುಪಟ್ಟಿಯಲ್ಲಿ ಕಾಮಗಾರಿ ವೆಚ್ಚವನ್ನು ದುಪ್ಪಟ್ಟು ಮಾಡಿಸಿಕೊಂಡಿದ್ದಾರೆಂದು ತಿಳಿಸಿದರು.

ಗ್ರಾಮದ ಹಿಡುವಳಿದಾರರ ಜಾಗದಲ್ಲಿ ಅವರ ಅನುಮತಿ ಪಡೆಯದೆ ಚೆಕ್‌ಡ್ಯಾಮ್‌ ನಿರ್ಮಿಸಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ. ಈ ಕಾಮಗಾರಿಯಲ್ಲಿ ಜಿ.ಪಂ. ಮಾಜಿ ಸದಸ್ಯರೊಬ್ಬರ ಒತ್ತಡದ ಮೇರೆಗೆ ಕಾಮಗಾರಿ ಮಾಡಿಸಿದ್ದಾರೆ. ಒಂದು ಚೆಕ್‌ಡ್ಯಾಮ್‌ಗೆ ಸುಮಾರು 15 ರಿಂದ 20 ಲಕ್ಷ ಅನುದಾನ ಬಿಡುಗಡೆ ಮಾಡಿಸಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು. ಅವರು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗ್ರಾ.ಪಂ. ಸದಸ್ಯೆ ರಾಧ ಮಾತನಾಡಿ, ನಮಗೆ ಗೊತ್ತಿಲ್ಲದೇ ಕಾಮಗಾರಿ ಮಾಡಿಸಿದ್ದಾರೆ. ಚೆಕ್‌ಡ್ಯಾಮ್‌ ನಿರ್ಮಾಣದಲ್ಲಿ ಭಾರಿ ಅವ್ಯವಹಾರ ನಡೆದಿದ್ದು ಸಮಗ್ರ ತನಿಖೆ ಮಾಡಬೇಕು. ವಿರುದ್ಧದಿಕ್ಕಿಗೆ ಚೆಕ್‌ಡ್ಯಾಮ್‌ ನಿರ್ಮಿಸಿದ್ದು ಕೃಷಿಕರ ಜಮೀನಿಗೆ ನೀರು ಹೋಗದಂತಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಬಿ. ಶಂಕರ್‌, ಮದನ್‌ ಹುಣಸೇಹಳ್ಳಿ, ಸದಾಶಿವ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ