ಆ್ಯಪ್ನಗರ

'ಅನರ್ಹರನ್ನು ಗೆಲ್ಲಿಸಲು ಯಡಿಯೂರಪ್ಪ ಪ್ರಾಣ ತ್ಯಾಗಕ್ಕೂ ರೆಡಿ'! ಕುಮಾರಸ್ವಾಮಿ ವ್ಯಂಗ್ಯ

ಉತ್ತರ ಕರ್ನಾಟಕದಲ್ಲಿ ನೆರೆ ಪರಿಹಾರ ಸಿಗದೆ ಅಲ್ಲಿನ ಜನ ಬೀದಿಗೆ ಬಂದರೂ ಅವರ ಕಣ್ಣು ಒರೆಸುವ ಕೆಲಸವನ್ನು ಯಡಿಯೂರಪ್ಪ ಮಾಡಲಿಲ್ಲ. ಆದರೆ, ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಪ್ರಾಣ ತ್ಯಾಗಕ್ಕೂ ಸಿದ್ದರಿದ್ದಾರೆ.

Vijaya Karnataka Web 2 Dec 2019, 7:27 pm
ಚಿಕ್ಕಬಳ್ಳಾಪುರ: ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಳ್ಳಲು ಸಿಎಂ ಬಿ.ಎಸ್‌.ಯಡಿಯೂರಪ್ಪ ಪ್ರಾಣ ತ್ಯಾಗಕ್ಕೂ ಸಿದ್ದರಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಆದರೆ, ಉತ್ತರ ಕರ್ನಾಟಕದಲ್ಲಿ ನೆರೆ ಪರಿಹಾರ ಸಿಗದೆ ಅಲ್ಲಿನ ಜನ ಬೀದಿಗೆ ಬಂದರೂ ಅವರ ಕಣ್ಣು ಒರೆಸುವ ಕೆಲಸವನ್ನು ಯಡಿಯೂರಪ್ಪ ಮಾಡಲಿಲ್ಲ ಎಂದು ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಜೆಡಿಎಸ್‌ ಅಭ್ಯರ್ಥಿ ರಾಧಾಕೃಷ್ಣ ಪರ ಹಮ್ಮಿಕೊಂಡಿದ್ದ ಉಪ ಚುನಾವಣಾ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Vijaya Karnataka Web chikkaballapur former cm kumaraswamy takes on chief minister bs yeddyurappa
'ಅನರ್ಹರನ್ನು ಗೆಲ್ಲಿಸಲು ಯಡಿಯೂರಪ್ಪ ಪ್ರಾಣ ತ್ಯಾಗಕ್ಕೂ ರೆಡಿ'! ಕುಮಾರಸ್ವಾಮಿ ವ್ಯಂಗ್ಯ


ಸಾಹುಕಾರರ ಆಟ ನಡೆಯಲ್ಲ: ಯಡಿಯೂರಪ್ಪ ಅವರು ಭ್ರಷ್ಟ ಅನರ್ಹರನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಗೋಕಾಕ್‌ನಲ್ಲಿ ಸಾಹುಕಾರರು ಅಲ್ಲಿನ ಮತದಾರ ಸ್ವಾತಂತ್ರ್ಯ ಕಸಿದುಕೊಂಡಿದ್ದಾರೆ. ಅಲ್ಲಿನ ಜನ ಮನೆಯಿಂದ ಹೊರ ಬರಲು ಭಯ ಪಡುತ್ತಿದ್ದಾರೆ. ಸಾಹುಕಾರರ ಆಟಗಳನ್ನು ನೋಡಿ ಜನ ಬೇಸತ್ತಿದ್ದಾರೆ. ಈ ಬಾರಿ ಗೋಕಾಕ್‌ನಲ್ಲಿ ಜಯ ನಮ್ಮದೇ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಹಳ್ಳಿ ಹಕ್ಕಿಯಿಂದ ಊಟ ಸೇರಲ್ಲ: ಹುಣಸೂರಿನಲ್ಲಿಒಬ್ಬ ಮಹಾ ಮೇಧಾವಿ ಇದ್ದಾನೆ. ಅವನೊಬ್ಬ ಹಳ್ಳಿ ಹಕ್ಕಿ. ಅವರ ಕಥೆ ಕೇಳಿ ಬಿಟ್ಟರೆ ಹೊಟ್ಟೆಗೆ ಊಟ ಸೇರುವುದಿಲ್ಲ. ಇಂತಹ ವ್ಯಕ್ತಿಗಳನ್ನು ಬಿಜೆಪಿಗೆ ಸೇರಿಸಿಕೊಂಡು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಎಂತಹ ರಾಜ್ಯ ಕಟ್ಟುತ್ತಾರೆ? ಬಿಎಸ್‌ವೈ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ನಾನು ಅಂತಹ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

‘ಸಫರ್‌ ಆಗಿದ್ದು ಸಾಕು. ಇನ್ನು ಯಾರೊಂದಿಗೂ ಮೈತ್ರಿ ಇಲ್ಲ’ - ದೇವೇಗೌಡ

ಮಾಜಿ ಸಿಎಂಗೂ ಚೂರಿ: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು ನಮ್ಮ ದೌರ್ಭಾಗ್ಯ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್‌ ಹೇಳಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯನವರೇ ಸಿಎಂ ಆಗಬೇಕಿತ್ತು ಎಂದು ಸುಧಾಕರ್ ಹೇಳಿದ್ದರು. ಈಗ ನೋಡಿ ಸುಧಾಕರ್ ಅವರು ಸಿದ್ದರಾಮಯ್ಯ ಅವರ ಬೆನ್ನಿಗೂ ಚೂರಿ ಹಾಕಿ ಯಡಿಯೂರಪ್ಪ ಅವರನ್ನು ಹಿಡಿದಿದ್ದಾರೆ ಎಂದು ವ್ಯಂಗ್ಯವಾಡಿದರು.

ಅಧಿಕಾರಕ್ಕೆ ಅಂಟಿಕೊಂಡವನಲ್ಲ: ನಾನು ಮುಖ್ಯಮಂತ್ರಿ ಅಧಿಕಾರಕ್ಕಾಗಿ ಅಂಟಿಕೊಂಡು ಕುಳಿತವನಲ್ಲ ಎಂದ ಎಚ್ಡಿಕೆ, ಅಮೆರಿಕಾದಲ್ಲಿ ಕಾಲಭೈರವೇಶ್ವರ ದೇಗುಲದ ಗುದ್ದಲಿ ಪೂಜೆಗೆ ಹೋದ ಸಂದರ್ಭದಲ್ಲಿ ಬಿಜೆಪಿಯವರು ಅನರ್ಹರನ್ನು ವ್ಯಾಪಾರ ಮಾಡಿ ಮೈತ್ರಿ ಸರಕಾರವನ್ನು ಬೀಳಿಸಿದರು ಎಂದು ಆರೋಪಿಸಿದರು.

ಸಿದ್ದರಾಮಯ್ಯ ಜತೆ ಯಾರ್ರೀ ಹೋಗ್ತಾರೆ? ಮೈತ್ರಿ ಬಗ್ಗೆ ದೇವೇಗೌಡರ ಪ್ರಶ್ನೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ